ತಿ.ನರಸೀಪುರ : ನವೆಂಬರ್ 11ರಂದು ನಡೆಯಲಿರುವ ಕನಕದಾಸ ಜಯಂತಿ ಆಚರಣೆಯ ಕುರಿತು ತಾಲೂಕು ಆಡಳಿತ ಕರೆದಿದ್ದ ಪೂರ್ವಭಾವಿ ಸಭೆಯು ಅಧಿಕಾರಿಗಳ ಗೈರು ಹಾಜರಿಯಿಂದ ರದ್ದಾಯಿತು. ಪಟ್ಟಣದ ತಾಲ್ಲೂಕು ಪಂಚಾಯಿತಿ ಸಭಾಂಗಣಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಅಧ್ಯಕ್ಷರಾದ ತಹಶೀಲ್ದಾರ್ ಸಿ.ಜಿ. ಗೀತಾ ಅಧ್ಯಕ್ಷತೆಯಲ್ಲಿ ಕರೆದಿದ್ದ ಕನಕದಾಸ ಜಯಂತಿ ಅಂಗವಾಗಿ ಕರೆದಿದ್ದ ಪೂರ್ವಭಾವಿ ಸಭೆಯು ತಾಲೂಕು ಮಟ್ಟದ ಅಧಿಕಾರಿಗಳ ಬಹುತೇಕ ಗೈರುಹಾಜರಿಯಿಂದ ಮುಂದೂಡಲಾಯಿತು.
ಸಭೆ ಪ್ರಾರಂಭವಾಗುತ್ತಿದ್ದಂತೆ ಮಾಜಿ ತಾ. ಪಂ.ಉಪಾಧ್ಯಕ್ಷ ಬಿ. ಮರಯ್ಯ ಪ್ರತಿ ರಾಷ್ಟ್ರೀಯ ಹಬ್ಬಗಳ ಆಚರಣಾ ಸಭೆ ಮತ್ತು ಇನ್ನಿತರ ತಾಲೂಕು ಮಟ್ಟದ ಸಭೆಗಳಿಗೆ ಅಧಿಕಾರಿಗಳು ನಿರಂತರ ಗೈರುಹಾಜರಾಗುತ್ತಿರುವ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದರು.
ತಾಲೂಕು ಮಟ್ಟದ ಸಭೆಗಳಿಗೆ ಗೈರಾಗುತ್ತಿರುವ ಅಧಿಕಾರಿಗಳ ಮೇಲೆ ಕ್ರಮ ಜರುಗಿಸಬೇಕು. ಹಾಗಾಗಿ ಈ ಸಭೆಯನ್ನು ಬಹಿಷ್ಕರಿಸುತ್ತೇನೆ ಎಂದು ಸಭೆಯಿಂದ ಹೊರನಡೆದರು.ಸಭೆಯಲ್ಲಿ ಹಾಜರಿದ್ದ ಎಲ್ಲ ಸಮುದಾಯದ ಮುಖಂಡರು ಅವರ ಅಭಿಪ್ರಾಯಕ್ಕೆ ಧ್ವನಿಗೂಡಿಸಿ ಸಭೆ ಬಹಿಷ್ಕರಿಸಿ ಹೊರನಡೆದರು.
ಸಭೆಯಲ್ಲಿ ತಾಲೂಕು ಪಂಚಾಯಿತಿ ಇಓ ಕೃಷ್ಣ, ಕುರುಬ ಸಮುದಾಯದ ತಾಲೂಕು ಅಧ್ಯಕ್ಷ ಮನ್ನೆಹುಂಡಿ ಮಹೇಶ್, ಕಾರ್ಯದರ್ಶಿ ಕೊತ್ತೇಗಾಲ ಬಸವರಾಜು,ಪುರಸಭಾ ಸದಸ್ಯ ಟಿ.ಎಂ. ನಂಜುಂಡಸ್ವಾಮಿ, ಬಾದಾಮಿ ಮಂಜು,ನಂಜುಂಡಸ್ವಾಮಿ,ಮಾಜಿ ತಾ. ಪಂ. ಸ್ಥಾಯಿ ಸಮಿತಿ ಅಧ್ಯಕ್ಷ ರಮೇಶ,ಕಸಾಪ ತಾಲೂಕು ಅಧ್ಯಕ್ಷ ಕನ್ನಡಪುಟ್ಟಸ್ವಾಮಿ,ಅಮಾಸೆಗೌಡ,ಬಣ್ಣ ಬಸವಣ್ಣ,ಸೋಮುದಾದ,ಅಶ್ವಿನ್ ಕುಮಾರ್ ಇತರರು ಹಾಜರಿದ್ದರು.
ಬೆಂಗಳೂರು: ಕರ್ನಾಟಕದಲ್ಲಿ 16 ವರ್ಷದೊಳಗಿನ ಮಕ್ಕಳಿಗೆ ಮೊಬೈಲ್ ಫೋನ್ ಬಳಸುವುದನ್ನು ನಿಷೇಧಿಸುವ ಬಗ್ಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಈ…
ಬೆಂಗಳೂರು: ಸಿಎಂ ಸಿದ್ದರಾಮಯ್ಯ-ಕೇಂದ್ರ ಸಚಿವ ಕುಮಾರಸ್ವಾಮಿ ನಡುವಿನ ಜಟಾಪಟಿಯಲ್ಲಿ ಸಾಮಾಜಿಕ ನ್ಯಾಯದ ಬಗ್ಗೆ ಸಿಎಂ ಸಿದ್ದರಾಮಯ್ಯ ನಿಲುವುಗಳನ್ನು ಸಚಿವ ಪರಮೇಶ್ವರ್…
ಕಾರವಾರ: ರಾಜ್ಯದ ಪ್ರತಿ ಜಿಲ್ಲೆಯಲ್ಲಿಯೂ ಬಡ ಹಾಗೂ ಸಾಮಾನ್ಯ ಜನರಿಗೆ ಕೈಗೆಟಕುವ ದರದಲ್ಲಿ ವೈದ್ಯಕೀಯ ಸೌಲಭ್ಯ ಒದಗಿಸಲು ಸೂಪರ್ ಸ್ಪೆಷಾಲಿಟಿ…
ಬೆಂಗಳೂರು: ಮೈಸೂರು ಮುಡಾ ಹಗರಣದ ದೂರುದಾರ, ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್ಐಆರ್ ದಾಖಲಾಗಿದೆ. ಪವಿತ್ರಾ ಎಂಬ…
ಬೆಂಗಳೂರು: ಸದ್ಯಕ್ಕೆ ಬಸ್ ಟಿಕೆಟ್ ದರ ಹೆಚ್ಚಿಸುವ ಯಾವುದೇ ಪ್ರಸ್ತಾವನೆ ಸರ್ಕಾರದ ಮುಂದೆ ಇಲ್ಲ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ…
ಹಾಸನ: ರಸ್ತೆಯಲ್ಲಿ ಹಂಪ್ಸ್ ಕಾಣದೇ ದುರಂತ ಸಂಭವಿಸಿದ್ದು, ಸ್ಕೂಟರ್ನಿಂದ ಬಿದ್ದು ಯುವತಿ ಸಾವನ್ನಪ್ಪಿರುವ ಘಟನೆ ಹಾಸನ ಹೊರವಲಯದ ಕೈಗಾರಿಕಾ ಪ್ರದೇಶದಲ್ಲಿ…