ಮೈಸೂರು

ಅಧಿಕಾರಿಗಳ ಗೈರು; ಪೂರ್ವಭಾವಿ ಸಭೆ ರದ್ದು

ತಿ.ನರಸೀಪುರ : ನವೆಂಬರ್‌ 11ರಂದು ನಡೆಯಲಿರುವ ಕನಕದಾಸ ಜಯಂತಿ ಆಚರಣೆಯ ಕುರಿತು ತಾಲೂಕು ಆಡಳಿತ ಕರೆದಿದ್ದ ಪೂರ್ವಭಾವಿ ಸಭೆಯು ಅಧಿಕಾರಿಗಳ ಗೈರು ಹಾಜರಿಯಿಂದ ರದ್ದಾಯಿತು. ಪಟ್ಟಣದ ತಾಲ್ಲೂಕು ಪಂಚಾಯಿತಿ ಸಭಾಂಗಣಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಅಧ್ಯಕ್ಷರಾದ ತಹಶೀಲ್ದಾರ್ ಸಿ.ಜಿ. ಗೀತಾ ಅಧ್ಯಕ್ಷತೆಯಲ್ಲಿ ಕರೆದಿದ್ದ ಕನಕದಾಸ ಜಯಂತಿ ಅಂಗವಾಗಿ ಕರೆದಿದ್ದ ಪೂರ್ವಭಾವಿ ಸಭೆಯು ತಾಲೂಕು ಮಟ್ಟದ ಅಧಿಕಾರಿಗಳ ಬಹುತೇಕ ಗೈರುಹಾಜರಿಯಿಂದ ಮುಂದೂಡಲಾಯಿತು.

ಸಭೆ ಪ್ರಾರಂಭವಾಗುತ್ತಿದ್ದಂತೆ ಮಾಜಿ ತಾ. ಪಂ.ಉಪಾಧ್ಯಕ್ಷ ಬಿ. ಮರಯ್ಯ ಪ್ರತಿ ರಾಷ್ಟ್ರೀಯ ಹಬ್ಬಗಳ ಆಚರಣಾ ಸಭೆ ಮತ್ತು ಇನ್ನಿತರ ತಾಲೂಕು ಮಟ್ಟದ ಸಭೆಗಳಿಗೆ ಅಧಿಕಾರಿಗಳು ನಿರಂತರ ಗೈರುಹಾಜರಾಗುತ್ತಿರುವ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದರು.

ತಾಲೂಕು ಮಟ್ಟದ ಸಭೆಗಳಿಗೆ ಗೈರಾಗುತ್ತಿರುವ ಅಧಿಕಾರಿಗಳ ಮೇಲೆ ಕ್ರಮ ಜರುಗಿಸಬೇಕು. ಹಾಗಾಗಿ ಈ ಸಭೆಯನ್ನು ಬಹಿಷ್ಕರಿಸುತ್ತೇನೆ ಎಂದು ಸಭೆಯಿಂದ ಹೊರನಡೆದರು.ಸಭೆಯಲ್ಲಿ ಹಾಜರಿದ್ದ ಎಲ್ಲ ಸಮುದಾಯದ ಮುಖಂಡರು ಅವರ ಅಭಿಪ್ರಾಯಕ್ಕೆ ಧ್ವನಿಗೂಡಿಸಿ ಸಭೆ ಬಹಿಷ್ಕರಿಸಿ ಹೊರನಡೆದರು.

ಸಭೆಯಲ್ಲಿ ತಾಲೂಕು ಪಂಚಾಯಿತಿ ಇಓ ಕೃಷ್ಣ, ಕುರುಬ ಸಮುದಾಯದ ತಾಲೂಕು ಅಧ್ಯಕ್ಷ ಮನ್ನೆಹುಂಡಿ ಮಹೇಶ್, ಕಾರ್ಯದರ್ಶಿ ಕೊತ್ತೇಗಾಲ ಬಸವರಾಜು,ಪುರಸಭಾ ಸದಸ್ಯ ಟಿ.ಎಂ. ನಂಜುಂಡಸ್ವಾಮಿ, ಬಾದಾಮಿ ಮಂಜು,ನಂಜುಂಡಸ್ವಾಮಿ,ಮಾಜಿ ತಾ. ಪಂ. ಸ್ಥಾಯಿ ಸಮಿತಿ ಅಧ್ಯಕ್ಷ ರಮೇಶ,ಕಸಾಪ ತಾಲೂಕು ಅಧ್ಯಕ್ಷ ಕನ್ನಡಪುಟ್ಟಸ್ವಾಮಿ,ಅಮಾಸೆಗೌಡ,ಬಣ್ಣ ಬಸವಣ್ಣ,ಸೋಮುದಾದ,ಅಶ್ವಿನ್ ಕುಮಾರ್ ಇತರರು ಹಾಜರಿದ್ದರು.

 

andolana

Recent Posts

ಹೊರ್ಮುಜ್‌ ಜಲಸಂಧಿಯಿಂದ ನುಗ್ಗಿಬಂದ ಅಮೆರಿಕದ ಯುದ್ಧನೌಕೆಗಳು : ಇರಾನ್‌ನಿಂದ ದಾಳಿ

ವಾಷಿಂಗ್ಟನ್ : ಹಾರ್ಮುಜ್ ಜಲಸಂಧಿಯಲ್ಲಿ ಅಮೆರಿಕದ ಮೂರು ಯುದ್ಧನೌಕೆಗಳ ಮೇಲೆ ಇರಾನ್ ಕ್ಷಿಪಣಿ, ಡ್ರೋನ್ ಮತ್ತು ಸಣ್ಣ ದೋಣಿಗಳ ಮೂಲಕ…

18 mins ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ | ದೇಶದ ಪ್ರವಾಸೋದ್ಯಮವೂ, ಚಲನಚಿತ್ರ ಪ್ರವಾಸೋದ್ಯಮವೂ

ಜಮ್ಮು-ಕಾಶ್ಮೀರದ ಮುಖ್ಯಮಂತ್ರಿ ಓಮರ್ ಅಬ್ದುಲ್ಲಾ ಅವರು ಇತ್ತೀಚೆಗೆ ಬೆಂಗಳೂರಿಗೆ ಬಂದಿದ್ದರು. ಅವರ ಈ ಪ್ರವಾಸದ ಹಿಂದೆ ತಮ್ಮ ರಾಜ್ಯದ ಪ್ರವಾಸೋದ್ಯಮವನ್ನು…

2 hours ago

ವೈಭವದ ವಸಂತ ಮಹಲ್‌ಗೆ ಬೇಕಿದೆ ಕಾಯಕಲ್ಪ

ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿನ ಗರಿಮೆಯ ಕಿರೀಟದಂತಿರುವ, ಅಚ್ಚ ಹಸಿರಿನ ನಡುವಿನ ೧೮೩ ವರ್ಷಗಳ ಇತಿಹಾಸವಿರುವ ಅರಮ ನೆಯೊಂದು…

3 hours ago

ವಿರಾಜಪೇಟೆ | ಅವಘಡಕ್ಕಾಗಿ ಕಾಯುತ್ತಿದೆ ಮಾರುಕಟ್ಟೆ ಹಳೇ ಕಟ್ಟಡ..!

ಕುಸಿಯುವ ಹಂತದಲ್ಲಿದ್ದರೂ ಕ್ರಮ ಕೈಗೊಳ್ಳದ ಸ್ಥಳೀಯ ಆಡಳಿತ; ಸೂಕ್ತ ಕ್ರಮಕ್ಕೆ ಒತ್ತಾಯ ಕಾಂಗೀರ ಬೋಪಣ್ಣ ವಿರಾಜಪೇಟೆ : ಪಟ್ಟಣದ ಖಾಸಗಿ…

3 hours ago

ಗುಂಡ್ಲುಪೇಟೆ | ಶಿಥಿಲಗೊಂಡಿರುವ ಅಂಗನವಾಡಿ, ಶಾಲೆ ಕಟ್ಟಡಗಳು

ಗುಂಡ್ಲುಪೇಟೆ ತಾಲ್ಲೂಕಿನ ಕೆಲ ಗ್ರಾಮಗಳ ಅಂಗನವಾಡು, ಶಾಲೆಗಳಲ್ಲಿ ಮೇಲ್ಚಾವಣೆ ಸೋರಿಕೆ ಗುಂಡ್ಲುಪೇಟೆ : ತಾಲ್ಲೂಕಿನ ಸೋಮಹಳ್ಳಿ ಗ್ರಾಮದ ಎರಡನೇ ಅಂಗನವಾಡಿಯ…

3 hours ago

ನಂಜನಗೂಡು ನಗರಸಭೆ ವಾರ್ಡ್ ವಿಂಗಡಣೆ ; ಒಂದರಲ್ಲಿ ಸಾವಿರ ; ಮತ್ತೊಂದರಲ್ಲಿ 6 ಸಾವಿರ ಜನ

ಅವೈಜ್ಞಾನಿಕ ಜನಸಂಖ್ಯೆ ವಿಂಗಡಣೆ ಬಗ್ಗೆ ಸಾರ್ವಜನಿಕರ ಆಕ್ಷೇಪ ಎಸ್. ಎಸ್. ಭಟ್ ನಂಜನಗೂಡು : ನಗರದಲ್ಲಿ ೧,೦೨೩ ಜನರಿಗೆ ಒಂದು…

3 hours ago