ಮೈಸೂರು

ಅಧಿಕಾರಿಗಳ ಗೈರು; ಪೂರ್ವಭಾವಿ ಸಭೆ ರದ್ದು

ತಿ.ನರಸೀಪುರ : ನವೆಂಬರ್‌ 11ರಂದು ನಡೆಯಲಿರುವ ಕನಕದಾಸ ಜಯಂತಿ ಆಚರಣೆಯ ಕುರಿತು ತಾಲೂಕು ಆಡಳಿತ ಕರೆದಿದ್ದ ಪೂರ್ವಭಾವಿ ಸಭೆಯು ಅಧಿಕಾರಿಗಳ ಗೈರು ಹಾಜರಿಯಿಂದ ರದ್ದಾಯಿತು. ಪಟ್ಟಣದ ತಾಲ್ಲೂಕು ಪಂಚಾಯಿತಿ ಸಭಾಂಗಣಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಅಧ್ಯಕ್ಷರಾದ ತಹಶೀಲ್ದಾರ್ ಸಿ.ಜಿ. ಗೀತಾ ಅಧ್ಯಕ್ಷತೆಯಲ್ಲಿ ಕರೆದಿದ್ದ ಕನಕದಾಸ ಜಯಂತಿ ಅಂಗವಾಗಿ ಕರೆದಿದ್ದ ಪೂರ್ವಭಾವಿ ಸಭೆಯು ತಾಲೂಕು ಮಟ್ಟದ ಅಧಿಕಾರಿಗಳ ಬಹುತೇಕ ಗೈರುಹಾಜರಿಯಿಂದ ಮುಂದೂಡಲಾಯಿತು.

ಸಭೆ ಪ್ರಾರಂಭವಾಗುತ್ತಿದ್ದಂತೆ ಮಾಜಿ ತಾ. ಪಂ.ಉಪಾಧ್ಯಕ್ಷ ಬಿ. ಮರಯ್ಯ ಪ್ರತಿ ರಾಷ್ಟ್ರೀಯ ಹಬ್ಬಗಳ ಆಚರಣಾ ಸಭೆ ಮತ್ತು ಇನ್ನಿತರ ತಾಲೂಕು ಮಟ್ಟದ ಸಭೆಗಳಿಗೆ ಅಧಿಕಾರಿಗಳು ನಿರಂತರ ಗೈರುಹಾಜರಾಗುತ್ತಿರುವ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದರು.

ತಾಲೂಕು ಮಟ್ಟದ ಸಭೆಗಳಿಗೆ ಗೈರಾಗುತ್ತಿರುವ ಅಧಿಕಾರಿಗಳ ಮೇಲೆ ಕ್ರಮ ಜರುಗಿಸಬೇಕು. ಹಾಗಾಗಿ ಈ ಸಭೆಯನ್ನು ಬಹಿಷ್ಕರಿಸುತ್ತೇನೆ ಎಂದು ಸಭೆಯಿಂದ ಹೊರನಡೆದರು.ಸಭೆಯಲ್ಲಿ ಹಾಜರಿದ್ದ ಎಲ್ಲ ಸಮುದಾಯದ ಮುಖಂಡರು ಅವರ ಅಭಿಪ್ರಾಯಕ್ಕೆ ಧ್ವನಿಗೂಡಿಸಿ ಸಭೆ ಬಹಿಷ್ಕರಿಸಿ ಹೊರನಡೆದರು.

ಸಭೆಯಲ್ಲಿ ತಾಲೂಕು ಪಂಚಾಯಿತಿ ಇಓ ಕೃಷ್ಣ, ಕುರುಬ ಸಮುದಾಯದ ತಾಲೂಕು ಅಧ್ಯಕ್ಷ ಮನ್ನೆಹುಂಡಿ ಮಹೇಶ್, ಕಾರ್ಯದರ್ಶಿ ಕೊತ್ತೇಗಾಲ ಬಸವರಾಜು,ಪುರಸಭಾ ಸದಸ್ಯ ಟಿ.ಎಂ. ನಂಜುಂಡಸ್ವಾಮಿ, ಬಾದಾಮಿ ಮಂಜು,ನಂಜುಂಡಸ್ವಾಮಿ,ಮಾಜಿ ತಾ. ಪಂ. ಸ್ಥಾಯಿ ಸಮಿತಿ ಅಧ್ಯಕ್ಷ ರಮೇಶ,ಕಸಾಪ ತಾಲೂಕು ಅಧ್ಯಕ್ಷ ಕನ್ನಡಪುಟ್ಟಸ್ವಾಮಿ,ಅಮಾಸೆಗೌಡ,ಬಣ್ಣ ಬಸವಣ್ಣ,ಸೋಮುದಾದ,ಅಶ್ವಿನ್ ಕುಮಾರ್ ಇತರರು ಹಾಜರಿದ್ದರು.

 

andolana

Recent Posts

ಮುತ್ತತ್ತಿಯಲ್ಲಿ ಘೋರ ದುರಂತ: ಒಂದೇ ಕುಟುಂಬದ ನಾಲ್ವರು ಮಹಿಳೆಯರು ಸೇರಿ ಐವರು ನೀರುಪಾಲು

ಹಲಗೂರು: ಸಮೀಪದ ಪ್ರವಾಸಿ ತಾಣವಾದ ಮುತ್ತತ್ತಿಯ ಕಾವೇರಿ ನದಿಯಲ್ಲಿ ಸೆಲ್ಫಿ ತೆಗೆಯುವ ವೇಳೆ ಕಾಲು ಜಾರಿ ನೀರಿನ ಪ್ರಬಲ ಸೆಳೆತಕ್ಕೆ…

4 hours ago

ಚಾಮರಾಜನಗರ ನ್ಯಾಯಾಲಯಕ್ಕೆ ಹುಸಿ ಬಾಂಬ್ ಬೆದರಿಕೆ

ಚಾಮರಾಜನಗರ: ನಗರದ ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್ ನ್ಯಾಯಾಲಯಕ್ಕೆ ಹುಸಿ ಬಾಂಬ್ ಬೆದರಿಕೆಯ ಇ-ಮೇಲ್ ಸಂದೇಶ ಬಂದ ಹಿನ್ನೆಲೆಯಲ್ಲಿ ಪೊಲೀಸರು,…

7 hours ago

ಬಿಆರ್‌ಟಿ ವ್ಯಾಪ್ತಿಯಲ್ಲಿ ಕಾಡಾನೆ ಕಳೇಬರ ಪತ್ತೆ

ಚಾಮರಾಜನಗರ: ಬಿಆರ್‌ಟಿ ಹುಲಿ ಸಂರಕ್ಷಿತ ಪ್ರದೇಶದ ಪುಣಜನೂರು ವನ್ಯಜೀವಿ ವಲಯ ವ್ಯಾಪ್ತಿಯ ಕಾರೆಪಾಳ್ಯ ಗಸ್ತಿನ ಸಮೀಪ ಅರಣ್ಯ ಪ್ರದೇಶದಿಂದ ಸುಮಾರು…

7 hours ago

ತೊಟ್ಟಿಲುಶಾಸ್ತ್ರ, ಸಿದ್ದಪ್ಪಾಜಿ ಕಂಡಾಯೋತ್ಸವದಲ್ಲಿ ತಾರಾ, ಶಶಿಕುಮಾರ್ ಭಾಗಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ದೊಡ್ಡಾಲತ್ತೂರು ಗ್ರಾಮದ ಶ್ರೀ ಮಕ್ಕಳೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಹಮ್ಮಿಕೊಂಡಿದ್ದ…

7 hours ago

ಬೆಳೆಗೆ ಸಿಗದ ಬೆಲೆ: ಯುವ ರೈತ ಆತ್ಮಹತ್ಯೆ

ಕೆ.ಆರ್.ನಗರ: ತಂಬಾಕು ಬೆಳೆಗೆ ಸರಿಯಾಗಿ ಬೆಲೆ ಸಿಗದೇ ನಷ್ಟವಾದ ಹಿನ್ನೆಲೆಯಲ್ಲಿ ಮಾಡಿದ್ದ ಸಾಲ ತೀರಿಸಲಾಗದೆ ಮನನೊಂದು ರೈತರೊಬ್ಬರು ತಮ್ಮ ಜಮೀನಿನಲ್ಲಿ…

8 hours ago

ಮುಂದಿನ ಒಂದು ವಾರಗಳ ಕಾಲ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಗಾಳಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಚಿಕ್ಕಮಗಳೂರು, ಹಾಸನ, ಶಿವಮೊಗ್ಗ,…

9 hours ago