ಮೈಸೂರು : ಬೆಳಗಾವಿಯಲ್ಲಿ ನಡೆದ ಚಳಿಗಾಲದ ವಿಧಾನಮಂಡಲ ಅಧಿವೇಶನದಲ್ಲಿ ಪಾಲ್ಗೊಂಡಿದ್ದ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ಅವರು ಸೋಮವಾರ ನಗರದಲ್ಲಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿ ಸ್ಥಳದಲ್ಲೇ ಹಲವು ಸಮಸ್ಯೆಗಳಿಗೆ ಪರಿಹಾರ ಕಲ್ಪಿಸಿದರು.
ಸತತ ಮೂರು ಗಂಟೆಗಳಿಗೂ ಹೆಚ್ಚು ಕಾಲ ನಗರದ ಜಲದರ್ಶಿನಿ ಅತಿಥಿಗೃಹದಲ್ಲಿ ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಗಳಿಂದ ಆಗಮಿಸಿದ್ದ ನೂರಾರು ಜನರಿಂದ ಅರ್ಜಿ ಸ್ವೀಕರಿಸಿದರು. ತಾಳ್ಮೆಯಿಂದ ಎಲ್ಲರ ಸಮಸ್ಯೆಗಳನ್ನು ಆಲಿಸಿದ್ದಲ್ಲದೆ, ಅನೇಕ ಸಮಸ್ಯೆಗಳಿಗೆ ಪರಿಹಾರ ಒದಗಿಸಿದರು. ಎರಡು ವಾರಗಳಿಂದ ಜಿಲ್ಲಾ ಉಸ್ತುವಾರಿ ಸಚಿವರು ಬರುವುದನ್ನೇ ಕಾದಿದ್ದ ಕ್ಷೇತ್ರದ ಜನರು ಒಂದೇ ದಿನ ಲಗ್ಗೆ ಇಟ್ಟ ಪರಿಣಾಮವಾಗಿ ಜಲದರ್ಶಿನಿ ಸಭಾಂಗಣ ತುಂಬಿ ತುಳುಕಿತ್ತು. ಭದ್ರತಾ ಸಿಬ್ಬಂದಿ ಸಾರ್ವಜನಿಕರನ್ನು ಒಬ್ಬೊಬ್ಬರಾಗಿ, ತಂಡವಾಗಿ ಸಚಿವರ ಬಳಿಗೆ ಕಳುಹಿಸುವ ಹೊತ್ತಿಗೆ ಹೈರಣಾದರು.
ಹಾಸ್ಟೆಲ್ನಿಂದ ಯಾವುದೇ ನೋಟಿಸ್ ನೀಡದೆ ಕೆಲಸದಿಂದ ತೆಗೆದು ಹಾಕಲಾಗಿದ್ದು, ಮರು ಸೇರ್ಪಡೆಗೆ ಸೂಚನೆ ನೀಡುವಂತೆ ಕೋರಿದ ಮನವಿಗೆ ಸ್ಪಂದಿಸಿದ ಸಚಿವರು,ಸಂಬಂಧಿಸಿದ ಇಲಾಖೆ ಮುಖ್ಯಸ್ಥರಿಗೆ ದೂರವಾಣಿ ಕರೆ ಮಾಡಿ ಕೆಲಸದಿಂದ ವಜಾಗೊಳಿಸುವಂತದ್ದು ಏನು ನಡೆದಿಲ್ಲ. ಪರಿಶೀಲಿಸಿ ಆತನಿಗೆ ಕೆಲಸ ಕೊಡುವಂತೆ ಹೇಳಿದರು.
ಇದನ್ನೂ ಓದಿ:-ಜಿಲ್ಲಾಸ್ಪತ್ರೆಗಳ ಮೇಲ್ದರ್ಜೆಗೆ ಚಿಂತನೆ : ಸಚಿವ ದಿನೇಶ್ ಗುಂಡೂರಾವ್
ನರಗೇತನಹಳ್ಳಿ ಗ್ರಾಮದಿಂದ ಆಗಮಿಸಿದ್ದ ಮುಖಂಡರು ನಮ್ಮೂರಿಗೆ ಹೊಸದಾಗಿ ಪೈಪ್ಲೇನ್ ಕಾಮಗಾರಿಗೆ ಅನುದಾನ ಮಂಜೂರು ಮಾಡಿಸಿಕೊಡುವಂತೆ ಕೋರಿದರು. ತಕ್ಷಣವೇ ಅಧಿಕಾರಿಗಳೊಂದಿಗೆ ಚರ್ಚಿಸಿ ಮುಂದಿನ ದಿನಗಳಲ್ಲಿ ಕಾಮಗಾರಿ ಶುರು ಮಾಡುವ ಆಶ್ವಾಸನೆ ನೀಡಿದರು. ಬಿ.ಸಂಜಯ್ ಎಂಬಾತ ಬೆಂಗಳೂರು ಬಿಬಿಎಂಪಿಯಲ್ಲಿ ಹೊರಗುತ್ತಿಗೆ ಆಧಾರದ ಮೇಲೆ ನೌಕರಿ ಕೊಡಿಸುವಂತೆ ಮನವಿ ಸಲ್ಲಿಸಿದನು. ಸಚಿವರನ್ನು ಭೇಟಿಮಾಡಲು ಬೆಂಗಳೂರಿನಿಂದ ಮೈಸೂರಿಗೆ ಆಗಮಿಸಿದ್ದು ವಿಶೇಷವಾಗಿತ್ತು. ಡಿ.ದೇವರಾಜ ಅರಸು ನಿಗಮದಿಂದ ಸಾಲ ಸೌಲಭ್ಯಕ್ಕೆ ಅರ್ಜಿ ಸಲ್ಲಿಸಿದ್ದು, ಸಾಲ ಮಂಜೂರಾತಿ ಮಾಡಿಸಿಕೊಡುವಂತೆ ಫಲಾನುಭವಿಯೊಬ್ಬರು ಮನವಿ ಮಾಡಿದರೆ, ಕರ್ನಾಟಕ ರಾಜ್ಯಹಣಕಾಸು ಸಂಸ್ಥೆಯಿಂದ ಮಂಜೂರಾಗಿರುವ ಸಾಲದ ಮೊತ್ತ ಬಿಡುಗಡೆ ಮಾಡದೆ ಇರುವ ಬಗ್ಗೆ ಫಲಾನುಭವಿಯೊಬ್ಬರು ಅಲವತ್ತುಕೊಂಡರು. ಇದನ್ನು ಪರಿಗಣಿಸಿದ ಸಚಿವರು, ದೂರವಾಣಿ ಮೂಲಕ ಅಧಿಕಾರಿಯೊಬ್ಬರೊಂದಿಗೆ ಮಾತನಾಡಿ, ಇಲಾಖೆಯಿಂದ ಹಣ ಬಿಡುಗಡೆಯಾಗಿದೆ. ನೀವು ವಿಳಂಬ ಮಾಡದೆ ರಿಲೀಸ್ ಮಾಡಬೇಕು ಎಂದು ಸೂಚಿಸಿದರು.
ಬನ್ನೂರು ಹೋಬಳಿಯ ಕೇತುಪುರ, ಮರಡೀಪುರ ಗ್ರಾಮದ ಅನೇಕರು ಡಾಂಬರೀಕರಣ, ಸಮುದಾಯ ಭವನ ನಿರ್ಮಾಣಕ್ಕೆ ಅನುದಾನ ಬಿಡುಗಡೆ ಮಾಡುವಂತೆ ಮನವಿ ಸಲ್ಲಿಸಿದರು. ದೊಡ್ಡಮುಲಗೋಡು ಗ್ರಾಮದ ವ್ಯಕ್ತಿಯೊಬ್ಬರು ತಮ್ಮ ಜಮೀನಿಗೆ ಪೌತಿ ಖಾತೆ ಮಾಡದೆ ಅಲೆದಾಡಿಸುವ ಬಗ್ಗೆ ಸಚಿವರ ಗಮನಕ್ಕೆ ತಂದು,ಎಲ್ಲಾ ದಾಖಲೆಗಳು ಇದ್ದರೂ ಮಾಡಿಲ್ಲ ಎಂದಿದ್ದಕ್ಕೆ, ಉಪ ವಿಭಾಗಾಧಿಕಾರಿ ಆಶಪ್ಪ ಅವರ ಜತೆಗೆ ದೂರವಾಣಿಯಲ್ಲಿ ಮಾತನಾಡಿ ಪೌತಿ ಖಾತೆ ಸಮಸ್ಯೆ ಇತ್ಯರ್ಥಪಡಿಸುವಂತೆ ಹೇಳಿದರು.
ಮರಿದೇವಯ್ಯ ಅವರು ಎಚ್.ಡಿ.ಕೋಟೆ ಭಾಗದಿಂದ ಬಂದಿದ್ದ ಅನೇಕ ಗ್ರಾಮಗಳ ಮುಖಂಡರೊಂದಿಗೆ ಸಚಿವರನ್ನು ಭೇಟಿ ಮಾಡಿ ಅರ್ಜಿ ಸಲ್ಲಿಸಿದರೆ, ಸೋಸಲೆ ಮಹೇಶ್ ತಂಡದವರು ಕೂಡ ಸಚಿವರನ್ನು ಭೇಟಿ ಮಾಡಿ ಅನೇಕ ಅರ್ಜಿಗಳನ್ನು ಸಲ್ಲಿಸಿದರು. ಜಿಪಂ ಮಾಜಿ ಅಧ್ಯಕ್ಷರಾದ ಲತಾ ಸಿದ್ದಶೆಟ್ಟಿ, ಜಿಲ್ಲಾ ಅಗ್ನಿಶಾಮಕ ಮಾಜಿ ಅಧಿಕಾರಿ ಬಸವಣ್ಣ, ದಲಿತ ಸಂಘರ್ಷ ಸಮಿತಿ ಮುಖಂಡ ಹರಿಹರ ಆನಂದಸ್ವಾಮಿ, ದೇವನೂರು ಮಹಾದೇವಪ್ಪ ಸೇರಿದಂತೆ ಅನೇಕರು ಸಚಿವರೊಂದಿಗೆ ಸಮಾಲೋಚಿಸಿದರು. ಒಂದು ಗುಂಪು ಸಚಿವರೊಂದಿಗೆ ಮಾತನಾಡುವಾಗಲೇ ಮತ್ತೊಂದು ಗುಂಪಿನವರು ಆಗಮಿಸಿ ಸಚಿವರಿಗೆ ಮನವಿ ಸಲ್ಲಿಸಲು ಮುಗಿಬಿದ್ದದ್ದು ವಿಶೇಷವಾಗಿತ್ತು. ಸಚಿವರ ವಿಶೇಷಾಧಿಕಾರಿ ರವಿಕುಮಾರ್, ಆಪ್ತಸಹಾಯಕ ಗೋಪಾಲ್ ಹೊರೆಯಾಲ ಹಾಜರಿದ್ದರು.
ಬೆಂಗಳೂರು: ಸ್ಯಾಂಡಲ್ವುಡ್ನಲ್ಲಿ ಸ್ಟಾರ್ ವಾರ್ ಬಗ್ಗೆ ನಟ ಕಿಚ್ಚ ಸುದೀಪ್ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ. ನಾನು ಯುದ್ಧಕ್ಕೆ ಸಿದ್ಧ ಮಾತಿಗೆ…
ಮೈಸೂರಿನ ಸುಭಾಷ್ ನಗರದ ೪ನೇ ಮುಖ್ಯರಸ್ತೆಯಲ್ಲಿರುವ ಮರಗಳ ಕೊಂಬೆಗಳು ವಿದ್ಯುತ್ ತಂತಿಗಳಿಗೆ ತಗುಲುತ್ತಿದ್ದು, ಗಾಳಿ ಅಥವಾ ಮಳೆಯ ಸಮಯದಲ್ಲಿ ಶಾರ್ಟ್…
ರಾಜ್ಯದಲ್ಲಿ ೩೧೫ ಕುಸ್ತಿಪಟುಗಳಿಗೆ ಉಚಿತವಾಗಿ ನುರಿತ ಕುಸ್ತಿ ತರಬೇತುದಾರರಿಂದ ವೈಜ್ಞಾನಿಕ ಕ್ರೀಡಾ ತರಬೇತಿ ನೀಡಲಾಗುತ್ತಿದೆ ಹಾಗೂ ರಾಜ್ಯದಲ್ಲಿ ಕ್ರೀಡಾ ಅಭಿವೃದ್ಧಿಗಾಗಿ…
ರಾಜ್ಯ ಸರ್ಕಾರಿ ನೌಕರರು ಕಚೇರಿಗೆ ಬರುವಾಗ ಸಭ್ಯ ಉಡುಪುಗಳನ್ನು ಧರಿಸಿಕೊಂಡು ಬರುವಂತೆ ರಾಜ್ಯ ಸರ್ಕಾರ ಸುತ್ತೋಲೆ ಹೊರಡಿಸಿರುವುದು ಸ್ವಾಗತಾರ್ಹವಾಗಿದೆ. ಕೆಲವು…
ಮೈಸೂರಿನ ಲಲಿತಾದ್ರಿಪುರ ರಿಂಗ್ ರಸ್ತೆಯಲ್ಲಿರುವ ಮಾರ್ವೆಲ್ ಶಾಲಾ- ಕಾಲೇಜು ಮುಂಭಾಗದಿಂದ ಸ್ವಲ್ಪ ದೂರ ಸಾಗಿದರೆ ವರುಣ ನಾಲೆ ಕಾಲುವೆ ಸಿಗುತ್ತದೆ.…
ಬೆಂಗಳೂರು: ಸಿಎಂ ಸಿದ್ದರಾಮಯ್ಯ ವಿರುದ್ಧದ ಮುಡಾ ಹಗರಣ ಪ್ರಕರಣದಲ್ಲಿ ಲೋಕಾಯುಕ್ತ ನೀಡಿರುವ ಕ್ಲೀನ್ಚಿಟ್ ಕುರಿತು ಜನಪ್ರತಿನಿಧಿಗಳ ನ್ಯಾಯಾಲಯ ಇಂದು ಆದೇಶ…