ಮೈಸೂರು

ಮೊದಿ,ಅಮಿತ್‌ ಶಾ ಅಪ್ಪುಗೆಗಿಂತ ಅಚ್ಚೇ ದಿನ್ ಬೇಕಿಲ್ಲ : ಶಾಸಕ ಎಸ್.ಎ ರಾಮದಾಸ್

ಮೈಸೂರು‌ : ಈ ಹಿಂದೆ ಪ್ರಧಾನಿ ನರೇಂದ್ರ ಮೋದಿಯವರು ಮೈಸೂರಿಗೆ ಭೇಟಿ ನೀಡಿದ ವೇಳೆ ಕೆ.ಆರ್.ಕ್ಷೇತ್ರದ ಶಾಸಕ ಎಸ್.ಎ.ರಾಮದಾಸ್ ಗುದ್ದು ನೀಡಿದ್ದರು. ಇದೀಗ ಕೇಂದ್ರ ಗೃಹ ಸಚಿವ ಅಮಿತ್​ ಶಾ ಮೈಸೂರಿಗೆ ಭೇಟಿ ನೀಡಿದ್ದರು. ಸ್ವಾಗತಿಸಲು ಶಾಸಕ ರಾಮದಾಸ್ ಅವರು​ ತೆರಳಿದ್ದರು. ಈ ವೇಳೆ ಅಮಿತ್​ ಶಾ ಅವರು ರಾಮದಾಸ್​ ಅವರಿಗೆ ಆತ್ಮೀಯ ಅಪ್ಪುಗೆ ನೀಡಿದರು.
ಈ ಬಗ್ಗೆ ಪ್ರತಿಕ್ರಿಯಿಸಿರುವ ರಾಮ್‌ ದಾಸ್‌ ನಮ್ಮದು ಕೌಟುಂಬಿಕ ಸಂಬಧ ಈ ಹಿಂದೆ ಕೂಡ ಮೊದಿಯವರು ಮೈಸೂರಿಗೆ ಬಂದಾಗ  ನನ್ನ ಕಿವಿ ಹಿಂಡಿ ಅಪ್ಪುಗೆ ಕೊಟ್ಟು ಒಂದು ಗುದ್ದನ್ನ ಗುದ್ದಿ ಪ್ರೀತಿಯನ್ನ ವ್ಯಕ್ತಪಡಿಸಿದ್ದರು.ನಾನು ಇಂದಿಗೂ ಅವರಿಗೆ ಆಭಾರಿಯಾಗಿದ್ದೇನೆ. ಇವತ್ತು ಅಮಿತ್‌ ಶಾ ಅವರನ್ನ ಬರಮಾಡಿಕೊಳ್ಳಲು ಹೋಗಿದ್ದಾಗ ಅವರು ರಾಮ್‌ ದಾಸ್‌ ಜಿ ಎಂದು ಪ್ರೀತಿಯಿಂದ ಅಪ್ಪುಗೆ ನೀಡಿದರು‌ ಒಂದಷ್ಟು ದೂರ ಅವರ ಜೊತೆಯಲ್ಲಿಯೇ ಹೆಜ್ಜೆ ಹಾಕಿದೆ. ನಂತರ ಅವರ ಜೊತೆಯಲ್ಲಿಯೇ ಕಾರಿನಲ್ಲಿ ಬಂದು ಚಾಮುಂಡಿ ತಾಯಿಯ ದರ್ಶನ ಪಡೆಯುವ ಭಾಗ್ಯವನ್ನ ತಾಯಿ ಕರುಣಿಸಿದ್ದಾಳೆ ಎಂದು ಸಂತೋಷ ವ್ಯಕ್ತಪಡಿಸಿದರು.

ಇದಕ್ಕಿಂತ ಅಚ್ಚೇ ದಿನ್‌ ಬೇಕಿಲ್ಲ : ಮೋದಿ ಜಿ ನನ್ನ ಕಿವಿ ಹಿಂಡಿದ ದಿನವೇ ನನಗೆ ಅಚ್ಚೇ ದಿನ್ ಇವತ್ತು ಅಮಿತ್‌ ಶಾ ಅವರು ನರೇಂದ್ರ ಮೋದಿಯವರ ರೀತಿಯೇ ಪ್ರೀತಿಯ ಅಪ್ಪುಗೆಯನ್ನ ಕೊಟ್ಟು ಜೊತೆಯಲ್ಲಿಯೇ ತಾಯಿಯ ದರ್ಶನಕ್ಕೆ ಕರೆದುಕೊಂಡು ಬಂದರಲ್ಲ ಇದೇ ನನಗೆ ಅಚ್ಚೇ ದಿನ್‌ ಇದಕ್ಕಿಂತ ದೊಡ್ಡ ಅಚ್ಚೇ ದಿನವನ್ನ ನಾನು ಬಯಸೋದಿಲ್ಲ ಎಂದರು

lokesh

Recent Posts

ದ್ವಿತೀಯ ಪಿಯುಸಿ ಫಲಿತಾಂಶ: ಇದೊಂದು ಐತಿಹಾಸಿಕ ದಿನ ಎಂದ ಮಧು ಬಂಗಾರಪ್ಪ

ಬೆಂಗಳೂರು: ಈ ಬಾರಿ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ 5.46,698 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಕರ್ನಾಟಕಕ್ಕೆ ಮೊದಲ ಬಾರಿ ಶೇ.86.48ರಷ್ಟು ಫಲಿತಾಂಶ ಬಂದಿದೆ…

8 hours ago

ಎರಡು ಕ್ಷೇತ್ರಗಳ ಉಪಚುನಾವಣೆ ಮತದಾನ ಮುಕ್ತಾಯ: ವೋಟಿಂಗ್‌ ಪ್ರಮಾಣವೆಷ್ಟು.?

ದಾವಣಗೆರೆ/ಬಾಗಲಕೋಟೆ: ರಾಜ್ಯದ ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಇಂದು ಮತದಾನ ನಡೆದಿದ್ದು, ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.…

8 hours ago

ಚಾಮುಂಡಿಬೆಟ್ಟದಲ್ಲಿ ನಡೆಯುತ್ತಿದ್ದ ಕಾಮಗಾರಿಗಳಿಗೆ ಹೈಕೋರ್ಟ್‌ ತಡೆಯಾಜ್ಞೆ

ಬೆಂಗಳೂರು: ನಾಡಿನ ಅಧಿದೇವತೆ ನೆಲೆಸಿರುವ ಮೈಸೂರಿನ ಚಾಮುಂಡಿಬೆಟ್ಟದಲ್ಲಿ ಕೇಂದ್ರ ಸರ್ಕಾರದ ಅನುದಾನದಡಿ ನಡೆಯುತ್ತಿದ್ದ ಕಾಮಗಾರಿಗಳಿಗೆ ಹೈಕೋರ್ಟ್‌ ತಡೆಯಾಜ್ಞೆ ನೀಡಿದೆ. ಹೈಕೋರ್ಟ್‌…

9 hours ago

ಬೆಂಗಳೂರಿನಲ್ಲಿ ಮುಂದಿನ ಮೂರು ದಿನ ಬಿಸಿ ಗಾಳಿ ಎಚ್ಚರಿಕೆ

ಬೆಂಗಳೂರು: ನಗರದಲ್ಲಿ ಮುಂದಿನ ಮೂರು ದಿನಗಳ ಕಾಲ ಅಧಿಕ ಉಷ್ಣಾಂಶ ದಾಖಲಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಬಿಸಿ…

9 hours ago

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಗೆದ್ದರೆ ಆರು ಗ್ಯಾರಂಟಿ ಜಾರಿ: ಪ್ರಧಾನಿ ನರೇಂದ್ರ ಮೋದಿ

ಕೋಲ್ಕತ್ತಾ: ಪಶ್ಚಿಮ ಬಂಗಾಳ ಚುನಾವಣೆಯಲ್ಲಿ ಬಿಜೆಪಿ ಗೆದ್ದರೆ ಜನರಿಗೆ ಆರು ಗ್ಯಾರಂಟಿಗಳನ್ನು ನೀಡುತ್ತೇವೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.…

9 hours ago

ಭಾರತ ತಲುಪಿದ ಗ್ರೀನ್‌ ಆಶಾ: 15,000 ಟನ್‌ ಎಲ್‌ಪಿಜಿ ಹೊತ್ತು ತಂದ ನೌಕೆ

ಮುಂಬೈ: ಪಶ್ಚಿಮ ಏಷ್ಯಾ ಸಂಘರ್ಷದ ಮಧ್ಯೆ ಭಾರತದ ಧ್ವಜ ಹೊಂದಿರುವ 15,400 ಟನ್‌ ಎಲ್‌ಪಿಜಿ ಹೊತ್ತ ಟ್ಯಾಂಕರ್‌ ಹಾರ್ಮುಜ್‌ ಜಲಸಂಧಿಯನ್ನು…

9 hours ago