ಮೈಸೂರು : ಈ ಹಿಂದೆ ಪ್ರಧಾನಿ ನರೇಂದ್ರ ಮೋದಿಯವರು ಮೈಸೂರಿಗೆ ಭೇಟಿ ನೀಡಿದ ವೇಳೆ ಕೆ.ಆರ್.ಕ್ಷೇತ್ರದ ಶಾಸಕ ಎಸ್.ಎ.ರಾಮದಾಸ್ ಗುದ್ದು ನೀಡಿದ್ದರು. ಇದೀಗ ಕೇಂದ್ರ ಗೃಹ ಸಚಿವ ಅಮಿತ್ ಶಾ ಮೈಸೂರಿಗೆ ಭೇಟಿ ನೀಡಿದ್ದರು. ಸ್ವಾಗತಿಸಲು ಶಾಸಕ ರಾಮದಾಸ್ ಅವರು ತೆರಳಿದ್ದರು. ಈ ವೇಳೆ ಅಮಿತ್ ಶಾ ಅವರು ರಾಮದಾಸ್ ಅವರಿಗೆ ಆತ್ಮೀಯ ಅಪ್ಪುಗೆ ನೀಡಿದರು.
ಈ ಬಗ್ಗೆ ಪ್ರತಿಕ್ರಿಯಿಸಿರುವ ರಾಮ್ ದಾಸ್ ನಮ್ಮದು ಕೌಟುಂಬಿಕ ಸಂಬಧ ಈ ಹಿಂದೆ ಕೂಡ ಮೊದಿಯವರು ಮೈಸೂರಿಗೆ ಬಂದಾಗ ನನ್ನ ಕಿವಿ ಹಿಂಡಿ ಅಪ್ಪುಗೆ ಕೊಟ್ಟು ಒಂದು ಗುದ್ದನ್ನ ಗುದ್ದಿ ಪ್ರೀತಿಯನ್ನ ವ್ಯಕ್ತಪಡಿಸಿದ್ದರು.ನಾನು ಇಂದಿಗೂ ಅವರಿಗೆ ಆಭಾರಿಯಾಗಿದ್ದೇನೆ. ಇವತ್ತು ಅಮಿತ್ ಶಾ ಅವರನ್ನ ಬರಮಾಡಿಕೊಳ್ಳಲು ಹೋಗಿದ್ದಾಗ ಅವರು ರಾಮ್ ದಾಸ್ ಜಿ ಎಂದು ಪ್ರೀತಿಯಿಂದ ಅಪ್ಪುಗೆ ನೀಡಿದರು ಒಂದಷ್ಟು ದೂರ ಅವರ ಜೊತೆಯಲ್ಲಿಯೇ ಹೆಜ್ಜೆ ಹಾಕಿದೆ. ನಂತರ ಅವರ ಜೊತೆಯಲ್ಲಿಯೇ ಕಾರಿನಲ್ಲಿ ಬಂದು ಚಾಮುಂಡಿ ತಾಯಿಯ ದರ್ಶನ ಪಡೆಯುವ ಭಾಗ್ಯವನ್ನ ತಾಯಿ ಕರುಣಿಸಿದ್ದಾಳೆ ಎಂದು ಸಂತೋಷ ವ್ಯಕ್ತಪಡಿಸಿದರು.
ಇದಕ್ಕಿಂತ ಅಚ್ಚೇ ದಿನ್ ಬೇಕಿಲ್ಲ : ಮೋದಿ ಜಿ ನನ್ನ ಕಿವಿ ಹಿಂಡಿದ ದಿನವೇ ನನಗೆ ಅಚ್ಚೇ ದಿನ್ ಇವತ್ತು ಅಮಿತ್ ಶಾ ಅವರು ನರೇಂದ್ರ ಮೋದಿಯವರ ರೀತಿಯೇ ಪ್ರೀತಿಯ ಅಪ್ಪುಗೆಯನ್ನ ಕೊಟ್ಟು ಜೊತೆಯಲ್ಲಿಯೇ ತಾಯಿಯ ದರ್ಶನಕ್ಕೆ ಕರೆದುಕೊಂಡು ಬಂದರಲ್ಲ ಇದೇ ನನಗೆ ಅಚ್ಚೇ ದಿನ್ ಇದಕ್ಕಿಂತ ದೊಡ್ಡ ಅಚ್ಚೇ ದಿನವನ್ನ ನಾನು ಬಯಸೋದಿಲ್ಲ ಎಂದರು
ನವದೆಹಲಿ: ಸೆಪ್ಟೆಂಬರ್ 5ರಂದು ದೆಹಲಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಪ್ರತಿಭಟನಾ ಮೆರವಣಿಗೆಯನ್ನು ಹಿಂಪಡೆಯಲಾಗಿದೆ ಎಂದು ಕಾಕ್ರೋಚ್ ಜನತಾ ಪಾರ್ಟಿ (CJP) ಸುಪ್ರೀಂ ಕೋರ್ಟ್ಗೆ…
ನವದೆಹಲಿ: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಖಂಡಿಸಿ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಫ್ಐಆರ್ ಅನ್ನು ಸುಪ್ರೀಂಕೋರ್ಟ್ ರದ್ದುಪಡಿಸಿದೆ. ಜುಲೈನಲ್ಲಿ…
ಕಠ್ಮಂಡು: ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ ಮುಂದುವರಿದಿದ್ದು, ಮೃತರ ಸಂಖ್ಯೆ 939ಕ್ಕೆ ಏರಿಕೆಯಾಗಿದೆ. ಇನ್ನೂ ಸುಮಾರು 4 ಸಾವಿರ ಜನರು…
ಮಡಿಕೇರಿ: ತಲಕಾವೇರಿ ಸಮೀಪದ ತಣ್ಣಿಮಾನಿ ಗ್ರಾಮದಲ್ಲಿ ತಾಯಿ ಮತ್ತು ಮಗಳು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ನಡೆದಿದೆ.…
ಮಡಿಕೇರಿ: ಕೊಡಗಿನಲ್ಲಿ ಭಾರೀ ಮಳೆಗೆ ಬೆಟ್ಟದಲ್ಲಿ ಜಾರಿನಿಂತ ಬೃಹತ್ ಕಲ್ಲುಬಂಡೆ ಆತಂಕ ಮೂಡಿಸಿದೆ. ಮಡಿಕೇರಿ ತಾಲೂಕಿನ ಕುಂದಚೇರಿ ಗ್ರಾಮದ ಪೊಲಮಾನಿ…
ಮೈಸೂರಿನ ಚಾಮರಾಜ ಮೊಹದ ಸೋನಾರ್ ಬೀದಿಯಲ್ಲಿ ಸಾರ್ವಜನಿಕ ನಲ್ಲಿಗೆ ಸಂಪರ್ಕ ಕಲ್ಪಿಸುವ ಪೈಪ್ ಪಡೆದುಹೋಗಿದ್ದು, ಕುಡಿಯುವ ನೀರು ಚರಂಡಿ ಪಾಲಾಗುತ್ತಿದೆ.…