ಮೈಸೂರು

ದ್ವಿಚಕ್ರ ವಾಹನ ಮತ್ತು ಗೊಬ್ಬರದ ಲಾರಿ ನಡುವೆ ಭೀಕರ ಅಪಘಾತ: ಇಬ್ಬರು ಸ್ಥಳದಲ್ಲೇ ಸಾವು

ನಂಜನಗೂಡು: ದ್ವಿಚಕ್ರ ವಾಹನ ಹಾಗೂ ಗೊಬ್ಬರದ ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಂಜನಗೂಡು ತಾಲ್ಲೂಕಿನ ಹನುಮನಪುರ ಗೇಟ್‌ ಬಳಿ ನಡೆದಿದೆ.

ಮೈಸೂರಿನ ಜೆಪಿ ನಗರದ ಚಂದ್ರು (38), ನಡುಕಲು ಮೊಳೆ ಗ್ರಾಮದ ಶೀಲಾ (35) ಎಂಬುವವರೇ ಮೃತ ದುರ್ದೈವಿಗಳಾಗಿದ್ದಾರೆ.

ಸ್ಕೂಟರ್‌ನಲ್ಲಿ ಚಂದ್ರು, ಶೀಲಾ ಸಂತೇಮರಹಳ್ಳಿ ಕಡೆಗೆ ತೆರಳುತ್ತಿದ್ದರು. ಈ ವೇಳೆ ಚುಂಚನಹಳ್ಳಿ ಕಡೆಗೆ ಹೋಗುತ್ತಿದ್ದ ಗೊಬ್ಬರ ತುಂಬಿದ್ದ ಲಾರಿ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆಯುತ್ತಿದ್ದಂತೆ ಇಬ್ಬರೂ ಕೆಳಗೆ ಬಿದ್ದಿದ್ದಾರೆ. ಈ ವೇಳೆ ಲಾರಿ ಇಬ್ಬರ ತಲೆ ಮೇಲೆ ಹರಿದ ಪರಿಣಾಮ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಸ್ಥಳಕ್ಕೆ ಡಿವೈಎಸ್ಪಿ ರಘು, ಸಿಪಿಐ ಚಂದ್ರಶೇಖರ್, ಕವಲಂದೆ ಪೊಲೀಸ್ ಠಾಣೆಯ ಪಿಎಸ್ಐ ಬಸವರಾಜು, ಎಸ್.ಬಿ ರಮೇಶ್ ಮತ್ತು ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಶವಗಳನ್ನು ಮರಣೋತ್ತರ ಪರೀಕ್ಷೆಗಾಗಿ ನಂಜನಗೂಡಿನ ಸಾರ್ವಜನಿಕ ಆಸ್ಪತ್ರೆಗೆ ರವಾನೆ ಮಾಡಲಾಗಿದ್ದು, ಈ ಸಂಬಂಧ ಕವಲಂದೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

2 ಅಥವಾ ಮೂರು ವಾರಗಳಲ್ಲಿ ಯುದ್ಧ ಅಂತ್ಯ: ಡೊನಾಲ್ಡ್‌ ಟ್ರಂಪ್‌

ವಾಷಿಂಗ್ಟನ್:‌ ಇನ್ನು ಎರಡು ಅಥವಾ ಮೂರು ವಾರಗಳಲ್ಲಿ ಯುದ್ಧ ಅಂತ್ಯಗೊಳ್ಳಲಿದೆ ಎಂದು ಅಮೇರಿಕಾ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಹೇಳಿದ್ದಾರೆ. ದೇಶವನ್ನು…

4 mins ago

ಶ್ರೀ ಸಬ್ಬಮ್ಮ ನೆಲೆಯ ಮಲೆನಾಡಿನಾದ್ಯಂತ ಸುಗ್ಗಿ ಉತ್ಸವ ಶುರು

ಲಕ್ಷ್ಮಿಕಾಂತ್ ಕೊಮಾರಪ್ಪ ಗ್ರಾಮೀಣ ಭಾಗದಲ್ಲಿ ಮನೆಮಾಡಿದ ಸಂಭ್ರಮ; ಭಕ್ತಿ ಭಾವದಿಂದ ಪ್ರಕೃತಿ-ಗ್ರಾಮದೇವಿಗೆ ಪೂಜೆ ಸೋಮವಾರಪೇಟೆ: ಗ್ರಾಮೀಣ ಪ್ರದೇಶದ ಜನಪದದ ಪ್ರಮುಖ…

39 mins ago

ಚಾಮರಾಜನಗರದಲ್ಲಿ ನೀರಿನ ಸಮಸ್ಯೆ ಮುಂದೆ ಇನ್ನೂ ಉಲ್ಭಣ!

ಬೇಸಿಗೆ ತಾಪಮಾನದ ಪರಿಣಾಮವಾಗಿ ಜಿಲ್ಲೆಯಲ್ಲಿ ನೀರಿನ ಸಮಸ್ಯೆ ಹೆಚ್ಚಾಗಬಹುದು ಎಂದು ವರದಿ ನೀಡಿಕೆ... ಚಾಮರಾಜನಗರ: ಬೇಸಿಗೆಯ ತಾಪಮಾನದ ಪರಿಣಾಮವಾಗಿ ಕುಡಿಯುವ…

45 mins ago

ಚಂದಿರನತ್ತ ಮಾನವ: ಆರ್ಟೆಮಿಸ್‌-II ಮಿಷನ್‌ ಉಡಾವಣೆ ಯಶಸ್ವಿ

ಫ್ಲೋರಿಡಾ: 50 ವರ್ಷಗಳ ಬಳಿಕ ಚಂದಿರನ ಅನ್ವೇಷಣೆಗೆ ಹೊರಟಿರುವ ನಾಸಾ ಐತಿಹಾಸಿಕ ಆರ್ಟೆಮಿಸ್‌-II ಮಿಷನ್‌ ಉಡಾವಣೆ ಯಶಸ್ವಿಯಾಗಿದೆ. ಅಮೇರಿಕಾದ ಕಾಲಮಾನ…

57 mins ago

ಹಿಂದಿ ಕಡ್ಡಾಯ ಕಲಿಕೆ: ದೇಶ ಒಡೆಯಲು ಪೀಠಿಕೆ!

ಟಿ.ಎ.ನಾರಾಯಣಗೌಡ ಹಿಂದಿ ರಾಷ್ಟ್ರ ಭಾಷೆ/ ರಾಷ್ಟ್ರೀಯ ಭಾಷೆ ಎಂಬ ಹೇಳಿಕೆಗಳು ಪುಂಖಾನುಪುಂಖವಾಗಿ ಕೇಳಿಬರುತ್ತಿವೆ. ಆದರೆ, ಹಿಂದಿ ರಾಷ್ಟ್ರ ಭಾಷೆಯಲ್ಲ, ಇದನ್ನು…

1 hour ago

ಓದುಗರ ಪತ್ರ: ಅಂಕಗಳನ್ನು ಹೋಲಿಸಿ ಆತ್ಮಸ್ಥೈರ್ಯವನ್ನು ಕುಗ್ಗಿಸದಿರಿ

ಈಗಾಗಲೇ ಶಾಲಾ ಕಾಲೇಜುಗಳ ವಾರ್ಷಿಕ ಪರೀಕ್ಷೆ ಮುಗಿದಿದ್ದು, ಕೆಲವೇ ದಿನಗಳಲ್ಲಿ ದ್ವಿತೀಯ ಪಿಯುಸಿ -ಲಿತಾಂಶ ಬರಲಿದ್ದು, ನಂತರ ಎಸ್‌ಎಸ್‌ಎಲ್‌ಸಿ ಪರೀಕ್ಷಾ…

2 hours ago