ಮೈಸೂರು

ಅಪಘಾತ : ಕೂಲಿಯಾಳು ಸಾವು, 6ಮಂದಿ ಕಾರ್ಮಿಕರು ಗಂಭೀರ

ಎಚ್‌.ಡಿ.ಕೋಟೆ : ಶುಂಠಿ ಕೆಲಸ ಮುಗಿಸಿ ವಾಪಸ್ಸಾಗುತ್ತಿದ್ದಾಗ ಗೂಡ್ಸ್ ಆಪೆ ಆಟೋ ಮತ್ತು ಟೆಂಪೋ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ 6 ಮಂದಿ ಕಾರ್ಮಿಕರು ಗಾಯಗೊಂಡು ಗೂಡ್ಸ್ ಚಾಲಕ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಗುರುವಾರ ಸಂಜೆ ನಡೆದಿದೆ.

ತಾಲ್ಲೋಕಿನ ಮೇಟಿಕುಪ್ಪೆ ಗ್ರಾಮದ ಗೂಡ್ಸ್ ಚಾಲಕ ಗುರುಸ್ವಾಮಿ ಮೃತ ದುರ್ದೈವಿ. ಗುರುಸ್ವಾಮಿ ಮೇಟಿಕುಪ್ಪೆ ಪ್ರಾಥಮಿಕ ಸಹಕಾರ ಸಂಘದ ಅಧ್ಯಕ್ಷರಾಗಿದ್ದರು. ಮಂಡ್ಯ ಜಿಲ್ಲೆಯ ಮದ್ದೂರು ತಾಲೋಕಿನ ನಾಗಮ್ಮ, ಕಿರಣ, ಶಿಲ್ವ ಮತ್ತು ಕೆ.ಆರ್.ಎಸ್ ಸಮೀಪದ‌ ಬಸವನಪುರ ಗ್ರಾಮದ ಲಕ್ಷ್ಮಿ, ಅನು ಮತ್ತೊಬ್ಬ ಸೇರಿ 6 ಮಂದಿ ಗಾಯಗೊಂಡಿದ್ದು ವಯೋವೃದ್ದ ನಾಗಮ್ಮ ಅವರ ತಲೆಗೆ ತೀವ್ರ ಪೆಟ್ಟು ಬಿದ್ದು ಅವರ ಸ್ಥಿತಿ ಗಂಭೀರವಾಗಿದೆ. ಶಿಲ್ವ ಅವರ ಹಸುಗೂಸೊಂದು ಆಶ್ವರ್ಯಕರ ರೀತಿಯಲ್ಲಿ ಯಾವುದೇ ಗಾಯವಾಗದೆ ಅನಾಹುತದಿಂದ ಪರಾಗಿದೆ. ಘಟನ ಸ್ಥಳದಿಂದ ಪುಟಾಣಿ ಮಗುವನ್ನು ರಕ್ಷಿಸಿದ ಇನ್ಸ್ ಪೆಕ್ಟರ್ ಗಂಗಾಧರ ಪೊಲೀಸ್ ವಾಹನದಲ್ಲಿ ಮಗುವನ್ನು ತರಾತುರಿಯಲ್ಲಿ ಆಸ್ಪತ್ರೆಗೆ ಸ್ಥಳಾಂತರಿಸಿ ಮಾನವೀಯತೆ ಮೆರೆದಿದ್ದಾರೆ.

ಘಟನೆ ವಿವರ ;
ಮಂಡ್ಯ ಜಿಲ್ಲೆಯ ಈ ಕೂಲಿ ಕಾರ್ಮಿಕರು ಶುಂಠಿ ಬಿಡಿಸುವ ಕಾಯಕದಲ್ಲಿ ತೊಡಗಿದ್ದು, ಕಳೆದ ಒಂದು ತಿಂಗಳಿಂದ ಮೇಸ್ತ್ರಿ ಹೇಳಿದ ಕಡೆಗಳಿಗೆ ತೆರಳಿ ಶುಂಠಿ ಬಿಡಿಸುವ ಕೆಲ ಮಾಡುತ್ತಿದ್ದರು. ಅಣ್ಣೂರ ಬಳಿ ಶುಂಠಿ ಬಿಡಿಸಿ ಸಂಜೆ ಆಗುತ್ತಿದ್ದಂತೆಯೇ ಮೇಸ್ತ್ರಿ ಆದೇಶದಂತೆ ತಾಲೋಕಿನ ಬೇರೆ ಗ್ರಾಮದ ಕಡೆ ಸ್ಥಳಾಂತರಗೊಳ್ಳಲು 6 ಮಂದಿ ಮತ್ತು ಹಸುಗೂಸೊಂದು ಗೂಡ್ಸ್ ವಾಹನದಲ್ಲಿ ಎಚ್.ಡಿ.ಕೋಟೆ ಕಡೆಗೆ ಪ್ರಯಾಣ ಬೆಳೆಸಿದ್ದರು.

ಟೈಗರ್ ಬ್ಲಾಕ್ ಸಮೀಪದಲ್ಲಿ ವಿರುದ್ದ ದಿಕ್ಕಿನಿಂದ ಬಂದ ಟೆಂಪೋ ಗೂಡ್ಸ್ ವಾಹನಕ್ಕೆ ರಭಸವಾಗಿ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಗೂಡ್ಸ್ ವಾಹನ ಪಲ್ಟಿಯಾಗಿ ವಾಹನದಲ್ಲಿದ್ದವರು ಚಲ್ಲಾಪಿಲ್ಲಿಯಾಗಿ ರಸ್ತೆಗೆ ಬಿದ್ದಿದ್ದಾರೆ. ಮಗು ಹೊರತು ಪಡಿಸಿ ಇನ್ನುಳಿದ ಆರು ಮಂದಿಗೂ ಗಾಯಗಳಾಗಿದ್ದು, ಅವರನ್ನು ಎಚ್.ಡಿ.ಕೋಟೆ ಸಾರ್ವಜನಿಕ ಆಸ್ಪತ್ರೆಗೆ ಸ್ಥಳಾಂತರಿಸಿ ಚಿಕಿತ್ಸೆ ನೀಡಲಾಗಿದೆ. ಗಂಭೀರವಾಗಿ ಗಾಯಗೊಂಡಿದ್ದ ನಾಗಮ್ಮ ಅವರನ್ನು ಹೆಚ್ಚಿನ ಚಿಕಿತ್ಸೆಗೆ ಜಿಲ್ಲಾಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಎಚ್.ಡಿ.ಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ಕಾನೂನು ಕ್ರಮ ಕೈಗೊಂಡಿದ್ದಾರೆ.

ಆಂದೋಲನ ಡೆಸ್ಕ್

Recent Posts

ಡಿಕೆಶಿ ಸಂಪುಟದಲ್ಲಿ ಡಾ.ಎಚ್‌ಸಿಎಂ ಕೈ ಬಿಟ್ಟಿದ್ದಕ್ಕೆ ದಸಂಸ ತೀವ್ರ ಅಸಮಾಧಾನ

ಮೈಸೂರು:  ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಹಿರಿಯ, ಅನುಭವಿ, ಹಾಗೂ ವೈಚಾರಿಕ ಪ್ರಜ್ಞೆಯ   ಸಮರ್ಥ ದಲಿತ ರಾಜಕಾರಣಿಯಾಗಿದ್ದ ಮಾಜಿ…

12 hours ago

ನನ್ನ ಗೆಲುವು ಜೆಡಿಎಸ್ ಭಿಕ್ಷೆ ಅಲ್ಲ, ನಾಗಮಂಗಲ ಜನರ ಭಿಕ್ಷೆ : ಸಚಿವ ಚಲುವರಾಯಸ್ವಾಮಿ

ನಾಗಮಂಗಲ : ನಾಲ್ಕನೇ ಬಾರಿ ಸಚಿವರಾದ ನಂತರ ಪ್ರಥಮ ಬಾರಿಗೆ ಸ್ವಕ್ಷೇತ್ರ ನಾಗಮಂಗಲಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ…

12 hours ago

ಓದುಗರ ಪತ್ರ: ಪುಷ್ಪ ವೃಷ್ಟಿ..!

ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…

23 hours ago

ಓದುಗರ ಪತ್ರ: ರೈತ ಮಕ್ಕಳ ವಿದ್ಯಾಭ್ಯಾಸ ಶುಲ್ಕದಲ್ಲಿ

ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…

23 hours ago

ಓದುಗರ ಪತ್ರ: ಧಾರ್ಮಿಕ ಮುಖಂಡರು ರೈತರ ಬೆನ್ನಿಗೆ ನಿಲ್ಲಬೇಕು

ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…

23 hours ago

ಧ್ರುವೀಕರಣದ ನೆಲೆಗಟ್ಟಿನ ಮೇಲೆ ರಾಜ್ಯ ರಾಜಕಾರಣ

ಆರ್.‌ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…

23 hours ago