ಮೈಸೂರು: ರಾಜ್ಯದ ವಿವಿಧ ಕಡೆಗಳಿಗೆ ಇ–ಮೇಲ್ ಮೂಲಕ ಬಾಂಬ್ ಇಟ್ಟಿರುವುದಾಗಿ ಬೆದರಿಕೆ ಹಾಕಿದ್ದ ಪ್ರಕರಣದಲ್ಲಿ ದೆಹಲಿ ಮೂಲದ ನಿಖಿಲ್ ಶರ್ಮಾನನ್ನು ಪೊಲೀಸರು ಭಾನುವಾರ ಬಂಧಿಸಿ, ಸೋಮವಾರ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
ಮೇ.2ರಂದು ನಗರ ಪೊಲೀಸ್ ಕಮಿಷನರ್ ಕಚೇರಿಗೆ ನಗರದ ವಿವಿಧ ಸ್ಥಳಗಳಲ್ಲಿ ಬಾಂಬ್ ಇಡಲಾಗಿದೆ ಎಂದು ಇ–ಮೇಲ್ ಸಂದೇಶ ಬಂದಿತ್ತು. ಅದನ್ನು ಗಂಭೀರವಾಗಿ ಪರಿಗಣಿಸಿದ ಪೊಲೀಸರು ನಗರದ ಪ್ರಮುಖ ಸ್ಥಳಗಳಲ್ಲಿ ತಪಾಸಣೆ ನಡೆಸಿದ್ದರು. ಬಳಿಕ ನಜರ್ಬಾದ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿತ್ತು.
ನಗರ ಪೊಲೀಸ್ ಆಯುಕ್ತೆ ಸೀಮಾ ಲಾಟ್ಕರ್ ಆರೋಪಿ ಪತ್ತೆಗೆ ವಿಶೇಷ ತಂಡ ರಚಿಸಿದ್ದರು. ನಜರ್ಬಾದ್ ಠಾಣೆಯ ಇನ್ಸ್ಪೆಕ್ಟರ್ ಮಹದೇವಸ್ವಾಮಿ, ನಾರಾಯಣ, ಪ್ರವೀಣ್, ಶ್ರೀನಿವಾಸ, ಇಸ್ಮಾಯಿಲ್, ಗೋಪಾಲ್ ಅವರ ತಂಡವು ನಿಖಿಲ್ ಶರ್ಮಾನನ್ನು ಹುಬ್ಬಳ್ಳಿಯಲ್ಲಿ ವಶಕ್ಕೆ ಪಡೆದಿದೆ. ’ಈತ ರಾಯಚೂರು, ಚಾಮರಾಜನಗರ, ಮೈಸೂರು, ಕೇರಳಕ್ಕೆ ಇ–ಮೇಲ್ ಸಂದೇಶ ಕಳಿಸಿದ್ದಾನೆ’ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಬೆಂಗಳೂರು ನಂತರ ಮೈಸೂರು, ಮಂಗಳೂರಿನಲ್ಲೂ ಕಾರ್ಯಾಚರಣೆ ಬೆಂಗಳೂರು : ರಾಜ್ಯದಲ್ಲಿ ಆಹಾರದ ಗುಣಮಟ್ಟ ಮತ್ತು ನೈರ್ಮಲ್ಯದ ಕುರಿತು ಸಾರ್ವಜನಿಕರಿಂದ ಹೆಚ್ಚುತ್ತಿರುವ…
ಮೂರೂ ದಿನಗಳಿಂದಲೂ ಸೇತುವೆಯತ್ತ ಮುಖ ಮಾಡದ ರೈಲ್ವೆ ಇಲಾಖೆ ನಂಜನಗೂಡು : ಮಹಾತ್ಮಾಗಾಂಧಿ ಶತಾಬ್ಧಿ ರಸ್ತೆಗೆ ನಿರ್ಮಿಸಿರುವ ರೈಲ್ವೆ ಕೆಳ…
ಮುಂಬೈ : ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಸಿನಿಮಾಗಳ ಕೆಲಸಗಳಲ್ಲಿ ನಿರತರಾಗಿರುವ ಯಶ್, ‘ರಾಮಾಯಣ’ ಸಿನಿಮಾದಲ್ಲಿ ಕೇವಲ ಸಹ-ನಿರ್ಮಾಪಕರಾಗಿ ಮಾತ್ರವಲ್ಲದೆ ʻರಾವಣʼನ…
ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…
ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…