Mysore
25
overcast clouds
Light
Dark

ಪಿಡಿಒ ಮೇಲೆ ಗ್ರಾ.ಪಂ ಅಧ್ಯಕ್ಷೆ ಗಂಡನಿಂದ ಹಲ್ಲೆ ಆರೋಪ

ಮೈಸೂರು: ಗ್ರಾಮ ಪಂಚಾಯಿತಿ ಅಧ್ಯಕ್ಷೆ ಪತಿ ಪಿಡಿಒ ಮೇಲೆ ಹಲ್ಲೆ ಮಾಡಿದ ಆರೋಪ ಕೇಳಿಬಂದಿದೆ. ಈ ಘಟನೆ ಸಾಲಿಗ್ರಾಮ ತಾಲೂಕಿನ ಭೇರ್ಯ ಗ್ರಾಮದಲ್ಲಿ ನಡೆದಿದೆ ಎನ್ನಲಾಗಿದೆ.

ಪಿಡಿಒ ಮಂಜುನಾಥ್ ಮೇಲೆ ಗ್ರಾಮ ಪಂಚಾಯತಿ ಅಧ್ಯಕ್ಷೆ ಜಯಲಕ್ಷ್ಮೀ ಎಂಬುವವರ ಪತಿ ಕೃಷ್ಣೇಗೌಡ ಎಂಬಾತ ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ಮಾಡಿದ್ದು, ಸಾಮಾಜಿಕ ಜಾಲತಾಣದಲ್ಲಿ ಹಲ್ಲೆ ವಿಡಿಯೋ ವೈರಲ್ ಆಗಿದೆ.

ಈ ಸಂಬಂದ ಸಾಲಿಗ್ರಾಮ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.