ಮೈಸೂರು : ಟಿಪ್ಪು ಹೊಡೆದು ಹಾಕಿದಂತೆ ಸಿದ್ದರಾಮಯ್ಯರನ್ನು ಹೊಡೆದು ಹಾಕ್ಬೇಕು ಎಂಬ ಹೇಳಿಕೆ ನೀಡಿದ್ದ ಆರೋಪದ ಮೇಲೆ ಮಾಜಿ ಸಚಿವ ಅಶ್ವಥ್ ನಾರಾಯಣ್ ಅವರ ವಿರುದ್ಧ FIR ದಾಖಲಾಗಿದೆ.
ಫೆಬ್ರವರಿ 15ರಂದು ಮಂಡ್ಯದ ಸಾತನೂರಿನಲ್ಲಿ ಸಿದ್ದರಾಮಯ್ಯ ಅವರ ಹತ್ಯೆಗೆ ಪ್ರಚೋದಿಸುವಂತೆ ಅಶ್ವಥ್ ನಾರಾಯಣ್ ಹೇಳಿಕೆ ನೀಡಿದ್ದರು. ಹೇಳಿಕೆ ಖಂಡಿಸಿ, ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ್ ಮೈಸೂರಿನ ದೇವರಾಜ ಪೊಲೀಸ್ ಠಾಣೆಯಲ್ಲಿ ದೂರು ಸಲ್ಲಿಸಿದ್ದರು. ದೂರು ಸಲ್ಲಿಸಿ ಬಹಳ ದಿನಗಳಾಗಿದ್ದರೂ ಯಾವುದೇ ಕ್ರಮ ಕೈಗೊಂಡಿರಲಿಲ್ಲ. ಹಾಗಾಗಿ ಬುಧವಾರ (ಮೇ 24) ಸಂಜೆ ಎಫ್ಐಆರ್ ದಾಖಲಿಸುವಂತೆ ಮತ್ತೊಮ್ಮೆ ದೂರು ಸಲ್ಲಿಸಿದರು.
ದೂರು ಸ್ವೀಕರಿಸಿದ ಪೊಲೀಸರು ಮಾಜಿ ಸಚಿವರ ವಿರುದ್ಧ ಕೊಲೆ ಬೆದರಿಕೆ, ಗಲಭೆಗೆ ಪ್ರಚೋದನೆ ನೀಡಿದ ಆರೋಪದ ಅಡಿಯಲ್ಲಿ ಪ್ರಕರಣ ದಾಖಲಿಸಿ, ತನಿಖೆ ನಡೆಸುವುದಾಗಿ ಹೇಳಿದ್ದಾರೆ.
ಅಶ್ವಥ್ ನಾರಾಯಣ್ ಹೇಳಿದ್ದೇನು? : ಫೆಬ್ರವರಿ 15 ರಂದು ಮಂಡ್ಯದಲ್ಲಿ ನಡೆದ ಬಿಜೆಪಿ ಕಾರ್ಯಕರ್ತರ ಕಾರ್ಯಕ್ರಮದಲ್ಲಿ ಅಶ್ವಥ್ ನಾರಾಯಣ್ ಮಂಡ್ಯ ಜನರಿಗೆ ರಾಜಕೀಯ ಬದಲಾವಣೆ ಮಾಡುವ ಶಕ್ತಿ ಇದೆ. ಮಂಡ್ಯದವರು ಮನಸ್ಸು ಮಾಡಿದ್ರೆ ಏನು ಬೇಕಾದರೂ ಸಾಧಿಸುತ್ತಾರೆ. ರಾಜಕೀಯ ದಿಕ್ಸೂಚಿ ಮಂಡ್ಯದಿಂದ ಕಾಣಬೇಕು. ಹೀಗೆ ಮಾಡಲಿಲ್ಲ ಅಂದ್ರೆ ಟಿಪ್ಪು ಸುಲ್ತಾನ್ ಸಿದ್ದರಾಮಯ್ಯ ಅವರು ಅಧಿಕಾರಕ್ಕೆ ಬರುತ್ತಾರೆ. ನಿಮಗೆ ಟಿಪ್ಪು ಬೇಕಾ ಸಾವರ್ಕರ್ ಬೇಕಾ? ಟಿಪ್ಪು ಬೇಡಾ ಅಂದ್ರೆ ಸಿದ್ದರಾಮಯ್ಯ ಅವರನ್ನು ಟಿಪ್ಪು ಕಳುಹಿಸಿದ ಹಾಗೆ ಕಳಿಸಬೇಕು. ಹುರಿಗೌಡ, ನಂಜೇಗೌಡ ಟಿಪ್ಪುವನ್ನು ಹೊಡೆದು ಹಾಕಿದಂತೆ ಸಿದ್ದರಾಮಯ್ಯರನ್ನ ಹೊಡೆದು ಹಾಕಬೇಕು ಎಂದು ಹೇಳಿದ್ದರು.
ಹನೂರು: ತಾಲೂಕಿನ ಲೊಕ್ಕನಹಳ್ಳಿ ಹೋಬಳಿ ವ್ಯಾಪ್ತಿಯ ಮಲೆ ಮಹದೇಶ್ವರ ಅರಣ್ಯ ಪ್ರದೇಶ ವ್ಯಾಪ್ತಿಯ ಬಳಗುಡ್ಡ ಬಿಟ್ ವ್ಯಾಪ್ತಿಯಲ್ಲಿ ಏಕಕಾಲಕ್ಕೆ ಎರಡು…
ನವದೆಹಲಿ: ನಾಗರಿಕ ವಿಮಾನಯಾನ ಸಚಿವಾಲಯವು ಇಂಡಿಗೋದ ಬಾಕಿ ಇರುವ ಎಲ್ಲಾ ಪ್ರಯಾಣಿಕರ ಮರುಪಾವತಿಗಳನ್ನು ವಿಳಂಬವಿಲ್ಲದೇ ಪಾವತಿಸಲು ಆದೇಶಿಸಿದೆ. ರದ್ದಾದ ಅಥವಾ…
ತುಮಕೂರು: ರಾಜ್ಯದಲ್ಲಿ ಸಿಎಂ ಸ್ಥಾನ ಬದಲಾವಣೆ ಚರ್ಚೆ ಬೆನ್ನಲ್ಲೇ ಮಾಜಿ ಸಚಿವ ಕೆ.ಎನ್.ರಾಜಣ್ಣ ಮಹತ್ವದ ಹೇಳಿಕೆ ಕೊಟ್ಟಿದ್ದಾರೆ. ಈ ಕುರಿತು…
ಹಾಸನ: ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ದೆಹಲಿ ಪೊಲೀಸರು ನೋಟಿಸ್ ಕೊಟ್ಟ ವಿಚಾರಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು…
ಹಾಸನ: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಒಂದು ವರ್ಷದೊಳಗೆ ಎಲ್ಲ ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೊಳಿಸಿದ್ದು, ಕರ್ನಾಟಕದ ಇತಿಹಾಸದಲ್ಲಿಯೇ ಕಾಂಗ್ರೆಸ್…
ನಂಜನಗೂಡು: ಜಮೀನಿನಲ್ಲಿ ಭಾರೀ ಗಾತ್ರದ ಹೆಬ್ಬಾವು ಪತ್ತೆಯಾಗಿದ್ದು, ಅರಣ್ಯ ಇಲಾಖೆ ಸಿಬ್ಬಂದಿಗಳು ರಕ್ಷಿಸಿ ಸುರಕ್ಷಿತ ಪ್ರದೇಶಕ್ಕೆ ಬಿಟ್ಟಿದ್ದಾರೆ. ಜಿಲ್ಲೆಯ ನಂಜನಗೂಡು…