ಮೈಸೂರು : ಟಿಪ್ಪು ಹೊಡೆದು ಹಾಕಿದಂತೆ ಸಿದ್ದರಾಮಯ್ಯರನ್ನು ಹೊಡೆದು ಹಾಕ್ಬೇಕು ಎಂಬ ಹೇಳಿಕೆ ನೀಡಿದ್ದ ಆರೋಪದ ಮೇಲೆ ಮಾಜಿ ಸಚಿವ ಅಶ್ವಥ್ ನಾರಾಯಣ್ ಅವರ ವಿರುದ್ಧ FIR ದಾಖಲಾಗಿದೆ.
ಫೆಬ್ರವರಿ 15ರಂದು ಮಂಡ್ಯದ ಸಾತನೂರಿನಲ್ಲಿ ಸಿದ್ದರಾಮಯ್ಯ ಅವರ ಹತ್ಯೆಗೆ ಪ್ರಚೋದಿಸುವಂತೆ ಅಶ್ವಥ್ ನಾರಾಯಣ್ ಹೇಳಿಕೆ ನೀಡಿದ್ದರು. ಹೇಳಿಕೆ ಖಂಡಿಸಿ, ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ್ ಮೈಸೂರಿನ ದೇವರಾಜ ಪೊಲೀಸ್ ಠಾಣೆಯಲ್ಲಿ ದೂರು ಸಲ್ಲಿಸಿದ್ದರು. ದೂರು ಸಲ್ಲಿಸಿ ಬಹಳ ದಿನಗಳಾಗಿದ್ದರೂ ಯಾವುದೇ ಕ್ರಮ ಕೈಗೊಂಡಿರಲಿಲ್ಲ. ಹಾಗಾಗಿ ಬುಧವಾರ (ಮೇ 24) ಸಂಜೆ ಎಫ್ಐಆರ್ ದಾಖಲಿಸುವಂತೆ ಮತ್ತೊಮ್ಮೆ ದೂರು ಸಲ್ಲಿಸಿದರು.
ದೂರು ಸ್ವೀಕರಿಸಿದ ಪೊಲೀಸರು ಮಾಜಿ ಸಚಿವರ ವಿರುದ್ಧ ಕೊಲೆ ಬೆದರಿಕೆ, ಗಲಭೆಗೆ ಪ್ರಚೋದನೆ ನೀಡಿದ ಆರೋಪದ ಅಡಿಯಲ್ಲಿ ಪ್ರಕರಣ ದಾಖಲಿಸಿ, ತನಿಖೆ ನಡೆಸುವುದಾಗಿ ಹೇಳಿದ್ದಾರೆ.
ಅಶ್ವಥ್ ನಾರಾಯಣ್ ಹೇಳಿದ್ದೇನು? : ಫೆಬ್ರವರಿ 15 ರಂದು ಮಂಡ್ಯದಲ್ಲಿ ನಡೆದ ಬಿಜೆಪಿ ಕಾರ್ಯಕರ್ತರ ಕಾರ್ಯಕ್ರಮದಲ್ಲಿ ಅಶ್ವಥ್ ನಾರಾಯಣ್ ಮಂಡ್ಯ ಜನರಿಗೆ ರಾಜಕೀಯ ಬದಲಾವಣೆ ಮಾಡುವ ಶಕ್ತಿ ಇದೆ. ಮಂಡ್ಯದವರು ಮನಸ್ಸು ಮಾಡಿದ್ರೆ ಏನು ಬೇಕಾದರೂ ಸಾಧಿಸುತ್ತಾರೆ. ರಾಜಕೀಯ ದಿಕ್ಸೂಚಿ ಮಂಡ್ಯದಿಂದ ಕಾಣಬೇಕು. ಹೀಗೆ ಮಾಡಲಿಲ್ಲ ಅಂದ್ರೆ ಟಿಪ್ಪು ಸುಲ್ತಾನ್ ಸಿದ್ದರಾಮಯ್ಯ ಅವರು ಅಧಿಕಾರಕ್ಕೆ ಬರುತ್ತಾರೆ. ನಿಮಗೆ ಟಿಪ್ಪು ಬೇಕಾ ಸಾವರ್ಕರ್ ಬೇಕಾ? ಟಿಪ್ಪು ಬೇಡಾ ಅಂದ್ರೆ ಸಿದ್ದರಾಮಯ್ಯ ಅವರನ್ನು ಟಿಪ್ಪು ಕಳುಹಿಸಿದ ಹಾಗೆ ಕಳಿಸಬೇಕು. ಹುರಿಗೌಡ, ನಂಜೇಗೌಡ ಟಿಪ್ಪುವನ್ನು ಹೊಡೆದು ಹಾಕಿದಂತೆ ಸಿದ್ದರಾಮಯ್ಯರನ್ನ ಹೊಡೆದು ಹಾಕಬೇಕು ಎಂದು ಹೇಳಿದ್ದರು.
ರಾಮನಗರ: ಇಂದು ಬೆಳಿಗ್ಗೆ ಹೃದಯಾಘಾತದಿಂದ ನಿಧನರಾಗಿದ್ದ ನಟ ದಿಲೀಪ್ ರಾಜ್ ಅವರ ಅಂತ್ಯಕ್ರಿಯೆ ಲಿಂಗಾಯತ ಸಂಪ್ರದಾಯದಂತೆ ನೆರವೇರಿತು. ರಾಮನಗರ ತಾಲ್ಲೂಕಿನ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಗೋಪಿನಾಥಂ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಆಲಂಬಾಡಿ ಗ್ರಾಮದಲ್ಲಿನ ಪುರಾತನ…
ನವದೆಹಲಿ: ಕಾಂಗ್ರೆಸ್ ಹಿರಿಯ ನಾಯಕಿ ಸೋನಿಗಾ ಗಾಂಧೀ ಅವರು ನಿಯಮಿತ ವೈದ್ಯಕೀಯ ತಪಾಸಣೆಗೆ ತೆರಳಿದ್ದರು. ಇದೀಗ ಆಸ್ಪತ್ರೆಯಿಂದ ಮನೆಗೆ ಮರಳಿದ್ದಾರೆ.…
ನವದೆಹಲಿ: ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದ್ದ ಪರಿಣಾಮ ವೈದ್ಯಕೀಯ ಕೋರ್ಸ್ಗಳ ಪ್ರವೇಶಾತಿಗೆ ಕಳೆದ ಮೇ.3ರಂದು ನಡೆದಿದ್ದ ನೀಟ್- ಯುಜಿ ಮರುಪರೀಕ್ಷೆಯ ದಿನಾಂಕವನ್ನು…
ಬೆಂಗಳೂರು: ಡೀಸೆಲ್ ಬೆಲೆ ಹೆಚ್ಚಾದರೆ ಸಾರಿಗೆ ಸಂಸ್ಥೆಗಳಿಗೆ ಹೊರೆಯಾಗಲಿದೆ. ಬಸ್ ಪ್ರಯಾಣ ದರ ಏರಿಕೆ ಬಗ್ಗೆ ಸದ್ಯಕ್ಕೆ ಯಾವುದೇ ಚಿಂತನೆ…
ಮೈಸೂರು: ನೀಟ್ ಪರೀಕ್ಷೆ ರದ್ದಾದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಮೈಸೂರು ಯೂತ್ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಸಂಸದ…