ಮೈಸೂರು : ಟಿಪ್ಪು ಹೊಡೆದು ಹಾಕಿದಂತೆ ಸಿದ್ದರಾಮಯ್ಯರನ್ನು ಹೊಡೆದು ಹಾಕ್ಬೇಕು ಎಂಬ ಹೇಳಿಕೆ ನೀಡಿದ್ದ ಆರೋಪದ ಮೇಲೆ ಮಾಜಿ ಸಚಿವ ಅಶ್ವಥ್ ನಾರಾಯಣ್ ಅವರ ವಿರುದ್ಧ FIR ದಾಖಲಾಗಿದೆ.
ಫೆಬ್ರವರಿ 15ರಂದು ಮಂಡ್ಯದ ಸಾತನೂರಿನಲ್ಲಿ ಸಿದ್ದರಾಮಯ್ಯ ಅವರ ಹತ್ಯೆಗೆ ಪ್ರಚೋದಿಸುವಂತೆ ಅಶ್ವಥ್ ನಾರಾಯಣ್ ಹೇಳಿಕೆ ನೀಡಿದ್ದರು. ಹೇಳಿಕೆ ಖಂಡಿಸಿ, ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ್ ಮೈಸೂರಿನ ದೇವರಾಜ ಪೊಲೀಸ್ ಠಾಣೆಯಲ್ಲಿ ದೂರು ಸಲ್ಲಿಸಿದ್ದರು. ದೂರು ಸಲ್ಲಿಸಿ ಬಹಳ ದಿನಗಳಾಗಿದ್ದರೂ ಯಾವುದೇ ಕ್ರಮ ಕೈಗೊಂಡಿರಲಿಲ್ಲ. ಹಾಗಾಗಿ ಬುಧವಾರ (ಮೇ 24) ಸಂಜೆ ಎಫ್ಐಆರ್ ದಾಖಲಿಸುವಂತೆ ಮತ್ತೊಮ್ಮೆ ದೂರು ಸಲ್ಲಿಸಿದರು.
ದೂರು ಸ್ವೀಕರಿಸಿದ ಪೊಲೀಸರು ಮಾಜಿ ಸಚಿವರ ವಿರುದ್ಧ ಕೊಲೆ ಬೆದರಿಕೆ, ಗಲಭೆಗೆ ಪ್ರಚೋದನೆ ನೀಡಿದ ಆರೋಪದ ಅಡಿಯಲ್ಲಿ ಪ್ರಕರಣ ದಾಖಲಿಸಿ, ತನಿಖೆ ನಡೆಸುವುದಾಗಿ ಹೇಳಿದ್ದಾರೆ.
ಅಶ್ವಥ್ ನಾರಾಯಣ್ ಹೇಳಿದ್ದೇನು? : ಫೆಬ್ರವರಿ 15 ರಂದು ಮಂಡ್ಯದಲ್ಲಿ ನಡೆದ ಬಿಜೆಪಿ ಕಾರ್ಯಕರ್ತರ ಕಾರ್ಯಕ್ರಮದಲ್ಲಿ ಅಶ್ವಥ್ ನಾರಾಯಣ್ ಮಂಡ್ಯ ಜನರಿಗೆ ರಾಜಕೀಯ ಬದಲಾವಣೆ ಮಾಡುವ ಶಕ್ತಿ ಇದೆ. ಮಂಡ್ಯದವರು ಮನಸ್ಸು ಮಾಡಿದ್ರೆ ಏನು ಬೇಕಾದರೂ ಸಾಧಿಸುತ್ತಾರೆ. ರಾಜಕೀಯ ದಿಕ್ಸೂಚಿ ಮಂಡ್ಯದಿಂದ ಕಾಣಬೇಕು. ಹೀಗೆ ಮಾಡಲಿಲ್ಲ ಅಂದ್ರೆ ಟಿಪ್ಪು ಸುಲ್ತಾನ್ ಸಿದ್ದರಾಮಯ್ಯ ಅವರು ಅಧಿಕಾರಕ್ಕೆ ಬರುತ್ತಾರೆ. ನಿಮಗೆ ಟಿಪ್ಪು ಬೇಕಾ ಸಾವರ್ಕರ್ ಬೇಕಾ? ಟಿಪ್ಪು ಬೇಡಾ ಅಂದ್ರೆ ಸಿದ್ದರಾಮಯ್ಯ ಅವರನ್ನು ಟಿಪ್ಪು ಕಳುಹಿಸಿದ ಹಾಗೆ ಕಳಿಸಬೇಕು. ಹುರಿಗೌಡ, ನಂಜೇಗೌಡ ಟಿಪ್ಪುವನ್ನು ಹೊಡೆದು ಹಾಕಿದಂತೆ ಸಿದ್ದರಾಮಯ್ಯರನ್ನ ಹೊಡೆದು ಹಾಕಬೇಕು ಎಂದು ಹೇಳಿದ್ದರು.
ಮಂಡ್ಯ : ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ದೂರದೃಷ್ಠಿಯ ಮೇಕೆದಾಟು ಯೋಜನೆಗೆ 2027ರ ಸ್ವಾತಂತ್ರ ದಿನಾಚರಣೆ ವೇಳೆಗೆ ಶಂಕುಸ್ಥಾಪನೆ ನೆರವೇರಿಸಿ ಅಣೆಕಟ್ಟು…
ಮೈಸೂರು: ಮೂವರು ಬೇಟೆಗಾರರ ಎನ್ಕೌಂಟರ್ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದ ಸುನೀಲ್ ಬೋಸ್ ಪ್ರತಿಕ್ರಿಯೆ ನೀಡಿದ್ದಾರೆ. ಮೈಸೂರಿನ ಕೆ.ಆರ್.ಆಸ್ಪತ್ರೆಯ ಶವಗಾರಕ್ಕೆ…
ಮೈಸೂರು: ಅರಣ್ಯ ಇಲಾಖೆಯಿಂದ ಬಹಳ ದೊಡ್ಡ ತಪ್ಪು ಆಗಿದೆ ಎಂದು ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಪುಟ್ಟರಂಗಶೆಟ್ಟಿ ಹೇಳಿದ್ದಾರೆ. ಈ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಅರಣ್ಯ ಪ್ರದೇಶದಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಅಸುನೀಗಿದ ಘಟನೆ…
ಮಹಾದೇಶ್ ಎಂ ಗೌಡ; ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲೂಕಿನ ಕಾವೇರವನ್ಯ ಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ…
ಹೊಸದಿಲ್ಲಿ : ಭಾರತವು ತನ್ನ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸುತ್ತಿದ್ದು, ದೆಹಲಿಯ ಕೆಂಪುಕೋಟೆಯಲ್ಲಿ ದೇಶದ ತ್ರಿವರ್ಣ ಧ್ವಜವನ್ನು ಹಾರಿಸಿದ ಪ್ರಧಾನಿ…