ಮೈಸೂರು: ಜಿಲ್ಲೆಯ ಹುಣಸೂರು ತಾಲ್ಲೂಕಿನ ಶ್ರವಣಹಳ್ಳಿ ಗ್ರಾಮದಲ್ಲಿ ಯುವತಿಯ ಪ್ರೀತಿಗೆ ಸಪೋರ್ಟ್ ಮಾಡಿದ ಆರೋಪದ ಹಿನ್ನೆಲೆಯಲ್ಲಿ ಆ ಯುವತಿ ಪೋಷಕರು ಯುವಕನೊಬ್ಬನ ಮೇಲೆ ಹಲ್ಲೆ ನಡೆಸಿದ್ದಾರೆ.
ಹುಣಸೂರು ತಾಲ್ಲೂಕಿನ ಶ್ರವಣಹಳ್ಳಿ ಗ್ರಾಮದ ಲಕ್ಷ್ಮೀ ಎಂಬ ಯುವತಿಯೂ ಅದೇ ಗ್ರಾಮದ ಯುವಕನೊಬ್ಬನ ಪ್ರೀತಿಯಲ್ಲಿ ಬಿದ್ದಿದ್ದಳು. ಈ ಪ್ರೀತಿಗೆ ಘನವಂತ್ ಎಂಬಾತ ಸಪೋರ್ಟ್ ಮಾಡಿದ್ದಾನೆ ಎಂದು ಆರೋಪಿಸಿ ಯುವತಿಯ ತಂದೆ ಚೆಲುವರಾಜು ಅವರು ದ್ವೇಷದಿಂದ ಘನವಂತ್ ಸಿಕ್ಕಿದಾಗೆಲ್ಲಾ ಹಲ್ಲೆ ಮಾಡುತ್ತಿದ್ದರು. ಅಲ್ಲದೇ ಘನವಂತ್ ಬೈಕ್ನಲ್ಲಿ ತೆರಳುತ್ತಿದ್ದಾಗ ತಡೆದು ಹಿಗ್ಗಾಮುಗ್ಗ ಥಳಿಸಿದ್ದು, ಗಂಭೀರ ಗಾಯಗೊಂಡಿದ್ದಾರೆ. ಈ ಥಳಿತದಿಂದ ಹಲ್ಲೆಗೊಳಗಾದ ಘನವಂತ್ನನ್ನು ಹುಣಸೂರು ತಾಲ್ಲೂಕಿನ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತದೆ.
ಇನ್ನೂ ಚೆಲುವರಾಜ್ ಕುಟುಂಬದಿಂದ ರಕ್ಷಣೆ ಬೇಕೆಂದು ಪೋಲಿಸರ ಮೊರೆ ಹೋದ ಘನವಂತ್, ಹುಣಸೂರು ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಈ ದೂರಿನ ಆಧಾರದ ಮೇಲೆ ಚೆಲುವರಾಜು, ಮಂಜುಳಾ, ಲೋಕೇಶ್, ಪರಶುರಾಮ್, ಹಣಮಂತ, ಯುವತಿ ಲಕ್ಷ್ಮಿ , ದರ್ಶನ್, ಯಶು ಸೇರಿದಂತೆ 10 ಮಂದಿ ವಿರುದ್ದ ಎಫ್ಐಆರ್ ದಾಖಲಿಸಿದ್ದಾರೆ.
ಮೈಸೂರು : ಮಾದಕ ವ್ಯಸನ ಮುಕ್ತ ಮೈಸೂರು ವಿಮುಕ್ತಿ ಅಭಿಯಾನದ ಮುಂದುವರಿದ ಕಾರ್ಯಾಚರಣೆಯಲ್ಲಿ ಸಿಸಿಬಿ ಪೊಲೀಸರು ನಾಲ್ವರನ್ನು ಬಂಧಿಸಿ ಸುಮಾರು…
ಹೊಸದಿಲ್ಲಿ : ಭಾರತೀಯ ದಂಗೆಕೋರ ಗುಂಪುಗಳೊಂದಿಗೆ ಸಂಬಂಧ ಹೊಂದಿರುವ ಜನಾಂಗೀಯ ಯುದ್ಧ ಗುಂಪುಗಳನ್ನು ಸಂಪರ್ಕಿಸಲು ಮತ್ತು ತರಬೇತಿ ನೀಡಲು ಅಕ್ರಮವಾಗಿ…
ಮೈಸೂರು : ಸ್ಥಗಿತಗೊಂಡಿದ್ದ ಚಿತ್ರಮಂದಿರದ ಆವರಣದಲ್ಲಿ ಸಂಭವಿಸಿದ ಆಕಸ್ಮಿಕ ಅಗ್ನಿ ಅವಘಡದಲ್ಲಿ ಅಲ್ಲಿನ ವಾಚ್ಮನ್ ಒಬ್ಬರು ಸಜೀವ ದಹನಗೊಂಡ ದಾರುಣ…
ಬೆಂಗಳೂರು : 2026ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆ ಮಾ.18ರಿಂದ ಪ್ರಾರಂಭವಾಗುತ್ತಿದ್ದು, ಪರೀಕ್ಷೆಗೆ ಹಾಜರಾಗುವ ಎಲ್ಲಾ ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು…
ಹನೂರು : ರಾಜ್ಯದ ಪ್ರಸಿದ್ದ ಧಾರ್ಮಿಕ ಯಾತ್ರಸ್ಥಳ ಮಲೆಮಹದೇಶ್ವರ ಬೆಟ್ಟದ ಮಾದಪ್ಪನ ಸನ್ನಿಧಿಯಲ್ಲಿ ಯುಗಾದಿ ಜಾತ್ರಾ ಮಹೋತ್ಸವ ಹಿನ್ನೆಲೆ ಮಂಗಳವಾರ…
ಹನೂರು : ತಾಲೂಕು ವ್ಯಾಪ್ತಿಯ ಒಂಬತ್ತು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗಿದ್ದು ಶಾಶ್ವತ ಪರಿಹಾರಕ್ಕೆ ಸರ್ಕಾರ…