ಮೈಸೂರು: ಜಿಲ್ಲೆಯ ಹುಣಸೂರು ತಾಲ್ಲೂಕಿನ ಶ್ರವಣಹಳ್ಳಿ ಗ್ರಾಮದಲ್ಲಿ ಯುವತಿಯ ಪ್ರೀತಿಗೆ ಸಪೋರ್ಟ್ ಮಾಡಿದ ಆರೋಪದ ಹಿನ್ನೆಲೆಯಲ್ಲಿ ಆ ಯುವತಿ ಪೋಷಕರು ಯುವಕನೊಬ್ಬನ ಮೇಲೆ ಹಲ್ಲೆ ನಡೆಸಿದ್ದಾರೆ.
ಹುಣಸೂರು ತಾಲ್ಲೂಕಿನ ಶ್ರವಣಹಳ್ಳಿ ಗ್ರಾಮದ ಲಕ್ಷ್ಮೀ ಎಂಬ ಯುವತಿಯೂ ಅದೇ ಗ್ರಾಮದ ಯುವಕನೊಬ್ಬನ ಪ್ರೀತಿಯಲ್ಲಿ ಬಿದ್ದಿದ್ದಳು. ಈ ಪ್ರೀತಿಗೆ ಘನವಂತ್ ಎಂಬಾತ ಸಪೋರ್ಟ್ ಮಾಡಿದ್ದಾನೆ ಎಂದು ಆರೋಪಿಸಿ ಯುವತಿಯ ತಂದೆ ಚೆಲುವರಾಜು ಅವರು ದ್ವೇಷದಿಂದ ಘನವಂತ್ ಸಿಕ್ಕಿದಾಗೆಲ್ಲಾ ಹಲ್ಲೆ ಮಾಡುತ್ತಿದ್ದರು. ಅಲ್ಲದೇ ಘನವಂತ್ ಬೈಕ್ನಲ್ಲಿ ತೆರಳುತ್ತಿದ್ದಾಗ ತಡೆದು ಹಿಗ್ಗಾಮುಗ್ಗ ಥಳಿಸಿದ್ದು, ಗಂಭೀರ ಗಾಯಗೊಂಡಿದ್ದಾರೆ. ಈ ಥಳಿತದಿಂದ ಹಲ್ಲೆಗೊಳಗಾದ ಘನವಂತ್ನನ್ನು ಹುಣಸೂರು ತಾಲ್ಲೂಕಿನ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತದೆ.
ಇನ್ನೂ ಚೆಲುವರಾಜ್ ಕುಟುಂಬದಿಂದ ರಕ್ಷಣೆ ಬೇಕೆಂದು ಪೋಲಿಸರ ಮೊರೆ ಹೋದ ಘನವಂತ್, ಹುಣಸೂರು ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಈ ದೂರಿನ ಆಧಾರದ ಮೇಲೆ ಚೆಲುವರಾಜು, ಮಂಜುಳಾ, ಲೋಕೇಶ್, ಪರಶುರಾಮ್, ಹಣಮಂತ, ಯುವತಿ ಲಕ್ಷ್ಮಿ , ದರ್ಶನ್, ಯಶು ಸೇರಿದಂತೆ 10 ಮಂದಿ ವಿರುದ್ದ ಎಫ್ಐಆರ್ ದಾಖಲಿಸಿದ್ದಾರೆ.
ರಾಮನಗರ: ಕಲ್ಲು ಕ್ವಾರಿಯಲ್ಲಿ ಬಂಡೆ ಕುಸಿದು 7 ಮಂದಿ ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಬೆಂಗಳೂರು ದಕ್ಷಿಣ ತಾಲ್ಲೂಕಿನ ಮಾದಾಪಟ್ಟಣ ಬಳಿ…
ಮಡಿಕೇರಿ: ಕೊಡಗು ಜಿಲ್ಲೆಯಾದ್ಯಂತ ಕಳೆದ ಎರಡು ದಿನಗಳಿಂದ ಸಾಧಾರಣ ಮಳೆಯಾಗುತ್ತಿರುವ ಪರಿಣಾಮ ಹಾರಂಗಿ ಜಲಾಶಯಕ್ಕೆ ಒಳಹರಿವಿನ ಪ್ರಮಾಣ ಹೆಚ್ಚಾಗಿದೆ. ಜಲಾಶಯಕ್ಕೆ…
ಮಂಡ್ಯ ಜಿಲ್ಲೆಯ ಮುತ್ತತ್ತಿಯಲ್ಲಿ ಕಾವೇರಿ ನದಿ ನೀರಿಗೆ ಇಳಿದು ಸೆಲ್ಛಿ ತೆಗೆದುಕೊಳ್ಳಲು ಹೋದ ಒಂದೇ ಕುಟುಂಬದ ನಾಲ್ವರು ಹಾಗೂ ಕಾರು…
ಚಿಕ್ಕಬಳ್ಳಾಪುರ ಶಾಸಕರಾದ ಪ್ರದೀಪ್ ಈಶ್ವರ್ ಅವರ ಮೇಲೆ ಜಾ.ದಳ ಕಾರ್ಯಕರ್ತರೊಬ್ಬರು ಚಪ್ಪಲಿಯನ್ನು ಎಸೆದಿದ್ದು, ಈಗಾಗಲೇ ಆ ಕಾರ್ಯಕರ್ತನನ್ನು ಪೊಲೀಸರು ಬಂಧಿಸಿದ್ದಾರೆ.…
ಸರ್ಕಾರದ ಯಾವುದೇ ಯೋಜನೆ, ಕಾರ್ಯಕ್ರಮ, ಸವಲತ್ತು ಮೊದಲು ದಲಿತ, ದಮನಿತ, ಶೋಷಿತ ವರ್ಗಕ್ಕೆ ತಲುಪಬೇಕು. ಅವರು ಸಾಮಾಜಿಕವಾಗಿ, ಆರ್ಥಿಕವಾಗಿ ಮೇಲೆ…
ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಬಿಡದಿ ಟೌನ್ ಶಿಪ್ ನಿರ್ಮಾಣ ಮಾಡುವ ಮೊದಲು ಮತ್ತೊಮ್ಮೆ ಅದರ ಸಾಧಕ ಬಾಧಕಗಳ ಬಗ್ಗೆ ಯೋಚಿಸಿ…