Mysore
24
overcast clouds

Social Media

ಭಾನುವಾರ, 16 ಆಗಸ್ಟ್ 2026
Light
Dark

ಅತ್ಯಾಚಾರ ಮಾಡಿದ ಆರೋಪಿಗೆ ಗಲ್ಲು ಶಿಕ್ಷೆಗೆ ಆಗ್ರಹ

ನಂಜನಗೂಡು : ಇತ್ತೀಚೆಗೆ ಮಳವಳ್ಳಿಯಲ್ಲಿ ಶಾಲಾ ಬಾಲಕಿಗೆ ಅತ್ಯಾಚಾರವೆಸಗಿ ಕೊಲೆಗೈದ ಆರೋಪಿಗೆ ಕಠಿಣ ಶಿಕ್ಷೆ ವಿಧಿಸುವಂತೆ ದಲಿತ ಸಂಘರ್ಷ ಸಮಿತಿ ಮತ್ತು ರೈತ ಸಂಘಟನೆ ಅಧ್ಯಕ್ಷರು ಮತ್ತು ಮುಖಂಡರು ತಾಲ್ಲೂಕು ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದರು.

ರೈತ ಸಂಘದ ಜಿಲ್ಲಾಧ್ಯಕ್ಷ ವಿದ್ಯಾಸಾಗರ ಮಾತನಾಡಿ ಜನ ಸಮೂಹ ತಲೆತಗ್ಗಿಸುವಂತಹ ವಿಚಾರ ಸರ್ಕಾರ ಕಠಿಣ ಶಿಕ್ಷೆಗೆ ಮುಂದಾಗಬೇಕೆಂದರು ಹಾಗೂ ಒಬ್ಬ ಶಿಕ್ಷಕನಾಗಿ ಈ ರೀತಿ ನಡೆದುಕೊಂಡಿರುವುದನ್ನು ಖಂಡಿಸುತ್ತೇವೆ. ಸಮಾಜಕ್ಕೆ ಉತ್ತಮ ಕೊಡುಗೆ ನೀಡುವಂತಹ ರೀತಿ ಮಾಡಿದರೆ ಮುಂದೇನು ಗತಿ ಎಂಬುದೇ ಆತಂಕ ಉಂಟಾಗಿದೆ. 

ಈತನನ್ನು ಗಲ್ಲಿಗೇರಿಸಬೇಕು ರಾಜ್ಯದಲ್ಲಿ ಹೆಚ್ಚುತ್ತಿರುವ ಮಕ್ಕಳ ಮೇಲಿನ ಅತ್ಯಾಚಾರ ಕೊಲೆ ಮತ್ತು ದೌರ್ಜನ್ಯಗಳು ನಿಲ್ಲಬೇಕು ಸರ್ಕಾರ ಕಠಿಣ ಕ್ರಮ ತೆಗೆದುಕೊಳ್ಳಬೇಕು ಮುಂದೆ ಈ ರೀತಿ ಆಗದಂತೆ ಎಚ್ಚರ ವಹಿಸಬೇಕು ಶಾಲಾ ವಿದ್ಯಾರ್ಥಿಗಳನ್ನು ರಕ್ಷಿಸಬೇಕು ಎಂದರು

.
ಈ ಸಂದರ್ಭದಲ್ಲಿ ಮೆಲ್ಲಹಳ್ಳಿ ನಾರಾಯಣ ರೈತ ಮುಖಂಡ ರಘು ಸೇರಿದಂತೆ ನೂರಾರು ಮುಖಂಡರು ಕಾರ್ಯಕರ್ತರು ಭಾಗವಹಿಸಿದರು

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!