ಮೈಸೂರು: ಇಲ್ಲಿನ ರಾಮಕೃಷ್ಣನಗರದ ನಟನ ರಂಗಮಂದಿರದಲ್ಲಿ ಏಪ್ರಿಲ್ 22ರಂದು ಸಂಜೆ 6.30 ಗಂಟೆಗೆ ‘ಮುದಿ ದೊರೆ ಮತ್ತು ಮೂವರು ಮಕ್ಕಳು’ ನಾಟಕ ಪ್ರದರ್ಶನವಿದೆ.
ಬೆಂಗಳೂರಿನ ಕಲಾಗಂಗೋತ್ರಿ ಅಭಿನಯಿಸುವ ಹೊಸ ನಾಟಕವಿದು. ಕವಿ ಎಚ್.ಎಸ್. ವೆಂಕಟೇಶ ಮೂರ್ತಿ ರಚನೆಯ ಈ ನಾಟಕವನ್ನು ಮಂಗಳಾ ಎನ್. ನಿರ್ದೇಶಿಸಿದ್ದಾರೆ.
ಷೇಕ್ಸ್ಪಿಯರ್ ನ ‘ಕಿಂಗ್ ಲಿಯರ್’ ನಾಟಕ ಆಧರಿಸಿ ಎಚ್.ಎಸ್.ವೆಂಕಟೇಶ ಮೂರ್ತಿ ಈ ನಾಟಕ ರಚಿಸಿದ್ದಾರೆ. ಕಲಾಗಂಗೋತ್ರಿ ತಂಡದ 80 ವರ್ಷ ವಯಸ್ಸಿನ ಶ್ರೀನಿವಾಸ್ ಮೇಷ್ಟ್ರು ಈ ನಾಟಕದಲ್ಲಿ ಅಭಿನಯಿಸುತ್ತಿದ್ದಾರೆ ಎನ್ನುವುದು ವಿಶೇಷ.
ಕಲಾಗಂಗೋತ್ರಿಗೆ 50 ವರ್ಷವಾದ ಪ್ರಯುಕ್ತ ಸುವರ್ಣ ಸಂಭ್ರಮವೆಂದು ಈ ನಾಟಕ ಪ್ರಸ್ತುತಪಡಿಸುತ್ತಿದ್ದೇವೆ ಎಂದು ಕಲಾಗಂಗೋತ್ರಿಯ ಸಂಚಾಲಕರಾದ ಡಾ.ಬಿ.ವಿ.ರಾಜಾರಾಂ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೊಸದಿಲ್ಲಿ : ಮುಂಬರುವ ಏಪ್ರಿಲ್ನಿಂದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ರಸ್ತೆಗಳ ಟೋಲ್ ಪ್ಲಾಜಾಗಳಲ್ಲಿ ನಗದು ವಹಿವಾಟುಗಳನ್ನು ಸ್ವೀಕರಿಸುವುದಿಲ್ಲ ಎಂದು ರಸ್ತೆ…
ಸಿದ್ದಾಪುರ : ವಿರಾಜಪೇಟೆ ತಾಲ್ಲೂಕಿನ ಮಾಲ್ದಾರೆ ಸಮೀಪದ ತಟ್ಟಳ್ಳಿಯಲ್ಲಿ ಕಾಫಿ ತೋಟದಲ್ಲಿ ಕೆಲಸ ನಿರ್ವಹಿಸುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ…
ಮೈಸೂರು : ಫೆ.28ರಿಂದ ಮಾ.17ರವರೆಗೆ ಮೈಸೂರು ನಗರದ 28 ಪರೀಕ್ಷಾ ಕೇಂದ್ರಗಳಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯಲಿದ್ದು, ಸದರಿ ಪರೀಕ್ಷೆಗಳನ್ನು…
ತಿ.ನರಸೀಪುರ : ತಾಲ್ಲೂಕಿನ ಕೇತಹಳ್ಳಿ ಗ್ರಾಮದಲ್ಲಿ ಚಿರತೆಯೊಂದು ಪ್ರತ್ಯಕ್ಷವಾಗಿದ್ದು, ಗ್ರಾಮಸ್ಥರು ಆತಂಕಗೊಂಡಿದ್ದಾರೆ. ಗ್ರಾಮದಲ್ಲಿ ರಾತ್ರಿ ವೇಳೆ ಚಿರತೆ ಸಂಚರಿಸುತ್ತಿದ್ದುದನ್ನು ಯುವಕರಿಬ್ಬರು…
ಮೈಸೂರು : ಈ ಹಿಂದೆ ಎಂಡಿಎ ಆಯುಕ್ತರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಡಾ.ಡಿ.ಬಿ.ನಟೇಶ್ ಅವರ ವಿರುದ್ಧ ಲಂಚ ನೀಡಿರುವ ಆರೋಪ ಹೊರಿಸಿದ್ದ…
ಹನೂರು : ಇಲ್ಲಿನ ಗುಂಡಾಲ್ ಜಲಾಶಯದಲ್ಲಿ ಹುಲಿ ಕಳೇಬರ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೋರ್ವನನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿದ್ದಾರೆ.…