ಮೈಸೂರು

ಮಾನವ-ವನ್ಯಜೀವಿ ಸಂಘರ್ಷ ನಿಯಂತ್ರಣಕ್ಕೆ ಕ್ರಮ

ಹುಣಸೂರು : ಹುಲಿ ದಾಳಿಗೆ ಮೃತಪಟ್ಟ ಕುಟುಂಬಕ್ಕೆ ಸರ್ಕಾರ ನೀಡುತ್ತಿದ್ದ 15 ಲಕ್ಷ ರೂ. ಪರಿಹಾರವನ್ನು ಇದೀಗ 20 ಲಕ್ಷ ರೂ.ಗಳಿಗೆ ಏರಿಸಲಾಗಿದೆ ಎಂದು ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ಉಪ ಅರಣ್ಯ ಸಂರಕ್ಷಣಾಧಿಕಾರಿ(ಡಿಸಿಎಫ್) ಪಿ.ಎ.ಸೀಮಾ ಮಾಹಿತಿ ನೀಡಿದರು.

ನಗರದ ನಾಗರಹೊಳೆ ರಾಷ್ಟ್ರೀಯ ಉದ್ಯಾನವನ ಕಚೇರಿ ಆವರಣದಲ್ಲಿ ಬುಧವಾರ ರೈತರೊಂದಿಗೆ ಆಯೋಜಿಸಿದ್ದ ಕುಂದುಕೊರತೆ ಸಭೆಯಲ್ಲಿ ಅವರು ಮಾತನಾಡಿದರು.

ಮಾನವ-ವನ್ಯಜೀವಿ ಸಂಘರ್ಷ ನಿಯಂತ್ರಣಕ್ಕೆ ಇಲಾಖೆ ಹಲವು ಕ್ರಮಗಳನ್ನು ಜಾರಿಗೆ ತಂದಿದೆ. ಹೀಗಿದ್ದೂ ಕೆಲವೊಂದು ಅವಘಡಗಳು ನಮ್ಮೆಲ್ಲರ ಕೈಮೀರಿ ನಡೆಯುತ್ತಿವೆ. ವನ್ಯಜೀವಿ ದಾಳಿಯಿಂದ ಮೃತಪಟ್ಟ ವ್ಯಕ್ತಿಯ ಕುಟುಂಬಕ್ಕೆ ಸರ್ಕಾರ ನೀಡುತ್ತಿದ್ದ15 ಲಕ್ಷ ರೂ. ಪರಿಹಾರವನ್ನು ಮೂರು ತಿಂಗಳ ಹಿಂದೆ 20 ಲಕ್ಷ ರೂ.ಗಳಿಗೆ ಏರಿಸಿದೆ. ರೈತ ಸಮುದಾಯ 25ಲಕ್ಷ ರೂ.ಗಳಿಗೆ ಬೇಡಿಕೆ ಇಟ್ಟಿದ್ದು, ಸರ್ಕಾರ ಈ ಕುರಿತು ನಿರ್ಧರಿಸಲಿದೆ ಎಂದು ತಿಳಿಸಿದರು.

ರೈತ ಸಂಘದ ಜಿಲ್ಲಾಧ್ಯಕ್ಷ ಹೊಸೂರು ಕುಮಾರ್ ಮಾತನಾಡಿ, ವನ್ಯಜೀವಿಗಳಿಂದ ಬೆಳೆ ನಾಶವಾದಲ್ಲಿ ಅದಕ್ಕೆ ಇಲಾಖೆ ಶೀಘ್ರು ಮತ್ತು ನ್ಯಾಯಯುತ ಪರಿಹಾರ ನೀಡಬೇಕು. ಹುಣಸೂರು ಉಪವಿಭಾಗ ವ್ಯಾಪ್ತಿಯಲ್ಲಿ ಬೆಳೆ ನಾಶ ಪರಿಹಾರ ಬಾಕಿ ಹಣ ಉಳಿಸಿಕೊಂಡಿದೆ. ಇದನ್ನು ಬಿಡುಗಡೆಗೊಳಿಸಬೇಕು ಎಂದು ಒತ್ತಾಯಿಸಿದರು.

ಆರ್‌ಎಫ್‌ಒ ನಂದಕುಮಾರ್ ಮಾತನಾಡಿ, ಪ್ರಸ್ತುತ ವರ್ಷದ ಏಪ್ರಿಲ್ ತಿಂಗಳವರೆಗೂ ಬೆಳೆ ನಾಶ ಪ್ರಕರಣಗಳ ಪರಿಹಾರ ಹಣವನ್ನು ವಿತರಿಸಲಾಗಿದೆ. ಪರಿಹಾರ ತೆಗೆದುಕೊಳ್ಳದಿರುವವರು ಇದ್ದರೆ ಈ ಬಗ್ಗೆ ಮಾಹಿತಿ ನೀಡಿದ್ದಲ್ಲಿ ಪರಿಶೀಲಿಸಲಾಗುವುದು ಎಂದು ತಿಳಿಸಿದರು.

ಡಿಸಿಎಫ್ ಸೀಮಾ ಮಾತನಾಡಿ, ಕಾಡು ಪ್ರಾಣಿಗಳ ದಾಳಿಯಿಂದ ಜಾನುವಾರುಗಳು ಮೃತಪಟ್ಟರೆ ೩೦ ಸಾವಿರ ರೂ. ಪರಿಹಾರ ನೀಡಲಾಗುತ್ತಿದೆ. ಕಾಡುಹಂದಿ ದಾಳಿಯಿಂದ ಬೆಳೆ ನಾಶವಾದರೂ ಪರಿಹಾರ ನೀಡಲಾಗುತ್ತಿದೆ ಎಂದು ಮಾಹಿತಿ ನೀಡಿದರು.

ಕೋತಿಗಳನ್ನು ಹಿಡಿಯುವವ ಯಾರು?: ಸಭೆಯಲ್ಲಿ ಕೋತಿಗಳ ಹಾವಳಿ ನಿಯಂತ್ರಿಸುವ
ಜವಾಬ್ದಾರಿ ಯಾರದ್ದು ಎಂಬ ಪ್ರಶ್ನೆ ಅಧಿಕಾರಿಗಳು ಮತ್ತು ರೈತರ ನಡುವೆ ಜಟಾಪಟಿಗೆ ಕಾರಣವಾಯಿತು. ಈ ವೇಳೆ ಹುಣಸೇಗಾಲ ಗೋವಿಂದೇಗೌಡ ಮಾತನಾಡಿ, ನಾಲೈದು ವರ್ಷಗಳ ಹಿಂದೆ ತಮ್ಮ ಜಮೀನಿನಲ್ಲಿ ಕೋತಿಗಳ ಹಾವಳಿಯಿಂದಾಗಿ ಬೆಳೆ ನಷ್ಟವಾಗಿರುವ ಕುರಿತು ಇಲಾಖೆಗೆ ತಿಳಿಸಿದಾಗ ಕೋತಿಗಳನ್ನು ಹಿಡಿಯುವುದು ಗ್ರಾ.ಪಂ. ಜವಾಬ್ದಾರಿಯಾಗಿದೆ ಎಂದು ಅರಣ್ಯ ಇಲಾಖೆ ತಿಳಿಸಿತು. ಆದರೆ ಗ್ರಾಮೀಣಾಭಿವೃದ್ಧಿ ಇಲಾಖೆ ಹಿರಿಯ ಅಧಿಕಾರಿಗಳು ನಮ್ಮ ಜವಾಬ್ದಾರಿಯಲ್ಲ ಎಂದು ಕೈಚೆಲ್ಲಿದರು. ೭ ಲಕ್ಷ ರೂ. ಪರಿಹಾರ ಕೋರಿ ನ್ಯಾಯಾಲಯದ ಮೆಟ್ಟಿಲು ಏರಿದ್ದೇನೆ. ನನಗೆ ಇನ್ನೂ ನ್ಯಾಯ ಸಿಕ್ಕಿಲ್ಲ ಎಂದರು.

ರೈತ ಬಸವೇಗೌಡ ಮಾತನಾಡಿ, ನಮ್ಮ ಭಾಗದಲ್ಲೂ ಕೋತಿ ಹಾವಳಿಯಿಂದಾಗಿ ಬೆಳೆ ನಾಶವಾಗುತ್ತಿದೆ ಎಂದು ದೂರಿದರು. ಎಸಿಎಫ್ ಲಕ್ಷ್ಮೀಕಾಂತ್ ಮಾತನಾಡಿ, ಸರ್ಕಾರದ ಸುತ್ತೋಲೆ ಪ್ರಕಾರ ಕೋತಿಗಳನ್ನು ಹಿಡಿಯುವ ಕಾರ್ಯ ಗ್ರಾ.ಪಂ.ನದ್ದಾಗಿದ್ದು, ಈ ಕುರಿತು ತಾಲ್ಲೂಕು ಪಂಚಾಯಿತಿ ಇಒಗಳಿಗೆ ಮಾಹಿತಿ ಮಾಹಿತಿ ನೀಡಲಾಗುವುದು ಎಂದು ತಿಳಿಸಿದರು.

ಆಂದೋಲನ ಡೆಸ್ಕ್

Recent Posts

ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಸಾಧಿಸುವ ವಿಶ್ವಾಸವಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ದಾವಣಗೆರೆ: ನುಡಿದಂತೆ ನಡೆಯುವ ಕಾಂಗ್ರೆಸ್ ಪಕ್ಷದ ಮೇಲೆ ಜನರಿಗೆ ಭರವಸೆಯಿದ್ದು, ಈ ಬಾರಿಯ ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಸಾಧಿಸುವ ವಿಶ್ವಾಸವಿದೆ…

7 hours ago

ಕೆ.ಆರ್‌.ನಗರ: ಮಾಜಿ ಸಚಿವ ಸಾ.ರಾ. ಮಹೇಶ್ ಪುತ್ರ ಹಾಗೂ ಉದ್ಯಮಿ ಸಾ.ರಾ.ಜಯಂತ್‌ ಹುಟ್ಟುಹಬ್ಬ ಆಚರಣೆ

ಭೇರ್ಯ ಮಹೇಶ್:‌ ಕೆ.ಆರ್‌.ನಗರ ತಾಲ್ಲೂಕು ವರದಿಗಾರರು  ಕೆ.ಆರ್.ನಗರ : ಜಾತಿ ಬೇದವಿಲ್ಲದೆ ನೊಂದವರಿಗೆ ದ್ವನಿಯಾಗಿ, ಸಂಕಷ್ಟದಲ್ಲಿರುವವರುಗೆ ಆರ್ಥಿಕ ನೆರವು ನೀಡಿ,…

7 hours ago

ಮಾ.28ರಂದು ಮೇಲುಕೋಟೆ ವೈರಮುಡಿ ಜಾತ್ರಾ ಮಹೋತ್ಸವ: 140 ಬಸ್‌ಗಳ ಕಾರ್ಯಾಚರಣೆ

ಮಂಡ್ಯ: ಮಾರ್ಚ್.‌28ರಂದು ಮೇಲುಕೋಟೆ ವೈರಮುಡಿ ಜಾತ್ರಾ ಮಹೋತ್ಸವ ನಡೆಯಲಿರುವ ಹಿನ್ನೆಲೆಯಲ್ಲಿ ಕೆಎಸ್‌ಆರ್‌ಟಿಸಿ ವತಿಯಿಂದ 140 ಬಸ್‌ಗಳು ಕಾರ್ಯಾಚರಣೆ ನಡೆಸಲಿವೆ. ಜಾತ್ರಾ…

8 hours ago

ಎಚ್ಚರಿಕೆ ನೀಡಿದ್ದಕ್ಕೆ ಟ್ರಂಪ್‌ ಕದನ ವಿರಾಮ ಘೋಷಣೆ: ಇರಾನ್‌ ಖಡಕ್‌ ತಿರುಗೇಟು

ಟೆಹರಾನ್: ನಾವು ನೀಡಿದ ಎಚ್ಚರಿಕೆಗೆ ತಲೆಬಾಗಿ ಅಮೇರಿಕಾ ಈಗ ಕದನ ವಿರಾಮ ಘೋಷಣೆ ಮಾಡಿದ ಎಂದು ಇರಾನ್‌ ತಿರುಗೇಟು ನೀಡಿದೆ.…

8 hours ago

ಕೃಷಿ ಹೊಂಡದಲ್ಲಿ ಈಜಲು ಹೋಗಿ ಬಾಲಕ ಸಾವು

ಮಂಡ್ಯ: ಕೃಷಿ ಹೊಂಡದಲ್ಲಿ ಈಜಲು ಹೋಗಿ ಬಾಲಕನೊಬ್ಬ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆ ಮಳವಳ್ಳಿ ತಾಲ್ಲೂಕಿನ ನಂದೀಪುರ ಗ್ರಾಮದಲ್ಲಿ ನಡೆದಿದೆ.…

8 hours ago

ಕೆಪಿಎಸ್‌ಸಿ ಬದಲಿಗೆ ಕೆಇಎ ಮೂಲಕ ಸಹಾಯಕ ಕೃಷಿ ಅಧಿಕಾರಿಗಳ ಹುದ್ದೆಗೆ ನೇಮಕಾತಿ: ಸಚಿವ ಚಲುವರಾಯಸ್ವಾಮಿ

ಬೆಂಗಳೂರು: ಕಳೆದ ವರ್ಷ ಕೃಷಿ ಇಲಾಖೆಯ ಸಮಾರು 945 ಕೃಷಿ ಅಧಿಕಾರಿ ಹಾಗೂ ಸಹಾಯಕ ಕೃಷಿ ಅಧಿಕಾರಿ ಹುದ್ದೆಗಳ ನೇಮಕಾತಿಯನ್ನು…

8 hours ago