ಬೈಲಕುಪ್ಪೆ : ರೈತರು ಹೈನುಗಾರಿಕೆಯಿಂದ ಬದುಕು ರೂಪಿಸಿಕೊಳ್ಳುವ ನಿಟ್ಟಿನಲ್ಲಿ ಪೂರಕವಾಗಿ ಕೆಲಸ ಮಾಡುತ್ತಾ ಬಂದಿದ್ದೇನೆ ಎಂದು ಪಶು ಸಂಗೋಪನೆ ಮತ್ತು ರೇಷ್ಮೆ ಸಚಿವ ಕೆ.ವೆಂಕಟೇಶ್ ತಿಳಿಸಿದರು.
ಪಿರಿಯಾಪಟ್ಟಣ ತಾಲ್ಲೂಕಿನ ಬೈಲಕುಪ್ಪೆ ಗ್ರಾಪಂ ವ್ಯಾಪ್ತಿಯ ದೊಡ್ಡಹರವೆ ಒಂದನೇ ಬ್ಲಾಕ್ ಗ್ರಾಮದಲ್ಲಿ ಪಶು ಆಸ್ಪತ್ರೆ ಉದ್ಘಾಟಿಸಿ ಅವರು ಮಾತನಾಡಿದರು. ಕಾಡಂಚಿನ ಗ್ರಾಮವಾದ ದೊಡ್ಡ ಹರವೆ ೨ನೇ ಬ್ಲಾಕ್, ರಾಣಿ ಗೇಟ್, ಗಿರಿಜನರ ಹಾಡಿಗಳು ಸೇರಿದಂತೆ ಸುತ್ತಮುತ್ತ ರೈತರು ಹೈನುಗಾರಿಕೆಯನ್ನು ಉಪಕಸುಬು ಮಾಡಿಕೊಂಡು ಉತ್ತಮ ಬದುಕು ಕಟ್ಟಿಕೊಳ್ಳುತ್ತಿದ್ದಾರೆ. ರೈತರು ಸಾಕಿದ ಜಾನುವಾರುಗಳಿಗೆ ಯಾವುದೇ ಸಮಸ್ಯೆ ಬಂದರೆ ಕೂಡಲೇ ಹತ್ತಿರದಲ್ಲಿ ಪಶು ಆಸ್ಪತ್ರೆ ಇದ್ದಲ್ಲಿ ಅನುಕೂಲವಾಗುತ್ತದೆ. ಆ ನಿಟ್ಟಿನಲ್ಲಿ ಯೋಚಿಸಿ ಇಲಾಖೆ ವತಿಯಿಂದ ಸರ್ವೆ ಕಾರ್ಯ ನಡೆಸಿ ಜನರ ಬೇಡಿಕೆಯಂತೆ ಪಶು ಆಸ್ಪತ್ರೆ ಉದ್ಘಾಟಿಸಿದ್ದೇನೆ ಎಂದು ತಿಳಿಸಿದರು.
ಇದನ್ನು ಓದಿ: ಹಳ್ಳಿಗರ ಬೆಳ್ಳಿ ರೇಖೆಯಾಗುತ್ತಿರುವ ಹೈನುಗಾರಿಕೆ
ನಂತರ ಕೊಪ್ಪ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಡೋಂಗ್ರಿ ಗೆರೋಸಿಯ ಕಾಲೋನಿಯ ಜನರ ಕುಂದು ಕೊರತೆಗಳನ್ನು ಆಲಿಸಿದರು. ಕಾಲೋನಿಯಲ್ಲಿ ಕೆಲವರಿಗೆ ಮಾತ್ರ ಹಕ್ಕುಪತ್ರ ವಿತರಿಸಿದ್ದಾರೆ. ಇನ್ನುಳಿದವರಿಗೆ ಸಂಬಂಧಪಟ್ಟ ಅಧಿಕಾರಿಗಳು ಹಕ್ಕು ಪತ್ರ ನೀಡದ ಕಾರಣ ಇಲ್ಲಿಯ ಗ್ರಾಮಸ್ಥರು ವಾಸದ ಮನೆ ನಿರ್ಮಿಸಿಕೊಳ್ಳಲಾಗುತ್ತಿಲ್ಲ ಎಂದು ಸಚಿವರಿಗೆ ಗ್ರಾಮಸ್ಥರು ತಿಳಿಸಿದರು. ಆಗ ಸ್ಥಳದಲ್ಲೇ ಇದ್ದ ತಾಪಂ ಇಒ ಅವರಿಗೆ, ಸ್ಥಳ ಪರಿಶೀಲಿಸಿ ಕ್ರಮ ತೆಗೆದುಕೊಳ್ಳುವಂತೆ ಸಚಿವರು ಸೂಚಿಸಿದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಡಿ.ಟಿ.ಸ್ವಾಮಿ, ರೆಹಮತ್ ಜಾನ್ ಬಾಬು, ಈಚೂರು ಲೋಕೇಶ್, ಚೆನ್ನಕಲ್ ಶೇಖರ್, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸದಸ್ಯ ಧನರಾಜ್, ಸಮಿ ಉಲ್ಲಾಖಾನ್, ಸುಬ್ರಹ್ಮಣ್ಯ, ಗ್ರಾಪಂ ಸದಸ್ಯರಾದ ರಾಜಯ್ಯ, ನಿಸಾರ್ ಅಹ್ಮದ್, ಬಾಲಾಜಿ, ರಘು, ಭಾರತಿ ಪ್ರಕಾಶ್, ರಾಜು, ಮುಖಂಡರುಗಳಾದ ಬಸವರಾಜ್, ಮಹಾದೇವ್, ರಾಮಸ್ವಾಮಿ, ಮಲ್ಲೇಶ, ಮೋಹನ್, ಭರತ್, ಆನಂದ್, ಶಂಕರ್, ರಿಯಾಜ್, ಚೆನ್ನಪ್ಪ, ರಾಮೇಗೌಡ, ಗೋವಿಂದಯ್ಯ, ಸಣ್ಣಯ್ಯ,ಹೊನ್ನಾಚಾರಿ, ತಹಸಿಲ್ದಾರ್ ನಿಸರ್ಗ ಪ್ರಿಯ, ಇಒ ಸುನಿಲ್, ಪಿಡಿಒ ಬೋರೇಗೌಡ, ಇತರ ಅಧಿಕಾರಿಗಳು ಹಾಜರಿದ್ದರು.
ಬೆಂಗಳೂರು: ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ನೊಟೀಸ್ ನೀಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಪ್ರತಿಕ್ರಿಯೆ…
ಎಚ್.ಡಿ.ಕೋಟೆ: ಬಸ್ ವ್ಯವಸ್ಥೆ ಇಲ್ಲದೇ ಶಾಲಾ ವಿದ್ಯಾರ್ಥಿಗಳು ಪರದಾಟ ನಡೆಸುತ್ತಿರುವ ಘಟನೆ ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲ್ಲೂಕಿನಲ್ಲಿ ನಡೆದಿದೆ. ತಾಲ್ಲೂಕಿನ…
ಮಂಡ್ಯ: ವಿಸಿ ಫಾರ್ಮ್ನ ಕೃಷಿ ಮೇಳದ ಕಾರ್ಯಕ್ರಮದಲ್ಲಿ ಆದಿಚುಂಚನಗಿರಿ ಶ್ರೀಗಳ ಸಮ್ಮುಖದಲ್ಲೇ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಬಹಿರಂಗವಾಗಿ ಕ್ಷಮೆಯಾಚಿಸಿದ್ದಾರೆ.…
ಬೆಂಗಳೂರು: ಬೆಳಗಾವಿಯ ಚಳಿಗಾಲದ ಅಧಿವೇಶನದಲ್ಲಿ ಸರ್ಕಾರದ ವೈಫಲ್ಯಗಳ ವಿರುದ್ಧ ಕಾಂಗ್ರೆಸ್ ಶಾಸಕರೇ ಅವಿಶ್ವಾಸ ನಿರ್ಣಯ ಮಂಡಿಸಿದರೂ ಅಚ್ಚರಿ ಇಲ್ಲ ಎಂದು…
ಹುಣಸೂರು: ಮೈಸೂರು ಜಿಲ್ಲೆಯ ಹುಣಸೂರು ತಾಲ್ಲೂಕಿನ ಗುರುಪುರದ ಬಳಿಯ ಜಮೀನೊಂದರಲ್ಲಿ ಓಡಾಡುತ್ತಿದ್ದ ಒಂದು ವರ್ಷದ ಹುಲಿ ಮರಿಯನ್ನು ಅರಣ್ಯಾಧಿಕಾರಿಗಳು ಸೆರೆ…
ಬೆಂಗಳೂರು: ನ್ಯಾಷನಲ್ ಹೆರಾಲ್ಡ್ ಹಾಗೂ ಯಂಗ್ ಇಂಡಿಯಾ ಸಂಸ್ಥೆಗಳಿಗೆ ದೇಣಿಗೆ ನೀಡಿದ್ದಕ್ಕೆ ಇಡಿ ಸಮನ್ಸ್ ನೀಡಿದೆ. ಆ ಮೂಲಕ ನಮಗೆ…