ಮೈಸೂರು

ಹೈನುಗಾರಿಕೆಗೆ ನೆರವು ನೀಡುವ ನಿಟ್ಟಿನಲ್ಲಿ ಕ್ರಮ : ಸಚಿವ ವೆಂಕಟೇಶ್‌

ಬೈಲಕುಪ್ಪೆ : ರೈತರು ಹೈನುಗಾರಿಕೆಯಿಂದ ಬದುಕು ರೂಪಿಸಿಕೊಳ್ಳುವ ನಿಟ್ಟಿನಲ್ಲಿ ಪೂರಕವಾಗಿ ಕೆಲಸ ಮಾಡುತ್ತಾ ಬಂದಿದ್ದೇನೆ ಎಂದು ಪಶು ಸಂಗೋಪನೆ ಮತ್ತು ರೇಷ್ಮೆ ಸಚಿವ ಕೆ.ವೆಂಕಟೇಶ್ ತಿಳಿಸಿದರು.

ಪಿರಿಯಾಪಟ್ಟಣ ತಾಲ್ಲೂಕಿನ ಬೈಲಕುಪ್ಪೆ ಗ್ರಾಪಂ ವ್ಯಾಪ್ತಿಯ ದೊಡ್ಡಹರವೆ ಒಂದನೇ ಬ್ಲಾಕ್ ಗ್ರಾಮದಲ್ಲಿ ಪಶು ಆಸ್ಪತ್ರೆ ಉದ್ಘಾಟಿಸಿ ಅವರು ಮಾತನಾಡಿದರು. ಕಾಡಂಚಿನ ಗ್ರಾಮವಾದ ದೊಡ್ಡ ಹರವೆ ೨ನೇ ಬ್ಲಾಕ್, ರಾಣಿ ಗೇಟ್, ಗಿರಿಜನರ ಹಾಡಿಗಳು ಸೇರಿದಂತೆ ಸುತ್ತಮುತ್ತ ರೈತರು ಹೈನುಗಾರಿಕೆಯನ್ನು ಉಪಕಸುಬು ಮಾಡಿಕೊಂಡು ಉತ್ತಮ ಬದುಕು ಕಟ್ಟಿಕೊಳ್ಳುತ್ತಿದ್ದಾರೆ. ರೈತರು ಸಾಕಿದ ಜಾನುವಾರುಗಳಿಗೆ ಯಾವುದೇ ಸಮಸ್ಯೆ ಬಂದರೆ ಕೂಡಲೇ ಹತ್ತಿರದಲ್ಲಿ ಪಶು ಆಸ್ಪತ್ರೆ ಇದ್ದಲ್ಲಿ ಅನುಕೂಲವಾಗುತ್ತದೆ. ಆ ನಿಟ್ಟಿನಲ್ಲಿ ಯೋಚಿಸಿ ಇಲಾಖೆ ವತಿಯಿಂದ ಸರ್ವೆ ಕಾರ್ಯ ನಡೆಸಿ ಜನರ ಬೇಡಿಕೆಯಂತೆ ಪಶು ಆಸ್ಪತ್ರೆ ಉದ್ಘಾಟಿಸಿದ್ದೇನೆ ಎಂದು ತಿಳಿಸಿದರು.

ಇದನ್ನು ಓದಿ: ಹಳ್ಳಿಗರ ಬೆಳ್ಳಿ ರೇಖೆಯಾಗುತ್ತಿರುವ ಹೈನುಗಾರಿಕೆ

ನಂತರ ಕೊಪ್ಪ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಡೋಂಗ್ರಿ ಗೆರೋಸಿಯ ಕಾಲೋನಿಯ ಜನರ ಕುಂದು ಕೊರತೆಗಳನ್ನು ಆಲಿಸಿದರು. ಕಾಲೋನಿಯಲ್ಲಿ ಕೆಲವರಿಗೆ ಮಾತ್ರ ಹಕ್ಕುಪತ್ರ ವಿತರಿಸಿದ್ದಾರೆ. ಇನ್ನುಳಿದವರಿಗೆ ಸಂಬಂಧಪಟ್ಟ ಅಧಿಕಾರಿಗಳು ಹಕ್ಕು ಪತ್ರ ನೀಡದ ಕಾರಣ ಇಲ್ಲಿಯ ಗ್ರಾಮಸ್ಥರು ವಾಸದ ಮನೆ ನಿರ್ಮಿಸಿಕೊಳ್ಳಲಾಗುತ್ತಿಲ್ಲ ಎಂದು ಸಚಿವರಿಗೆ ಗ್ರಾಮಸ್ಥರು ತಿಳಿಸಿದರು. ಆಗ ಸ್ಥಳದಲ್ಲೇ ಇದ್ದ ತಾಪಂ ಇಒ ಅವರಿಗೆ, ಸ್ಥಳ ಪರಿಶೀಲಿಸಿ ಕ್ರಮ ತೆಗೆದುಕೊಳ್ಳುವಂತೆ ಸಚಿವರು ಸೂಚಿಸಿದರು.

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಡಿ.ಟಿ.ಸ್ವಾಮಿ, ರೆಹಮತ್ ಜಾನ್ ಬಾಬು, ಈಚೂರು ಲೋಕೇಶ್, ಚೆನ್ನಕಲ್ ಶೇಖರ್, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸದಸ್ಯ ಧನರಾಜ್, ಸಮಿ ಉಲ್ಲಾಖಾನ್, ಸುಬ್ರಹ್ಮಣ್ಯ, ಗ್ರಾಪಂ ಸದಸ್ಯರಾದ ರಾಜಯ್ಯ, ನಿಸಾರ್ ಅಹ್ಮದ್, ಬಾಲಾಜಿ, ರಘು, ಭಾರತಿ ಪ್ರಕಾಶ್, ರಾಜು, ಮುಖಂಡರುಗಳಾದ ಬಸವರಾಜ್, ಮಹಾದೇವ್, ರಾಮಸ್ವಾಮಿ, ಮಲ್ಲೇಶ, ಮೋಹನ್, ಭರತ್, ಆನಂದ್, ಶಂಕರ್, ರಿಯಾಜ್, ಚೆನ್ನಪ್ಪ, ರಾಮೇಗೌಡ, ಗೋವಿಂದಯ್ಯ, ಸಣ್ಣಯ್ಯ,ಹೊನ್ನಾಚಾರಿ, ತಹಸಿಲ್ದಾರ್ ನಿಸರ್ಗ ಪ್ರಿಯ, ಇಒ ಸುನಿಲ್, ಪಿಡಿಒ ಬೋರೇಗೌಡ, ಇತರ ಅಧಿಕಾರಿಗಳು ಹಾಜರಿದ್ದರು.

ಆಂದೋಲನ ಡೆಸ್ಕ್

Recent Posts

2026ರ ದಸರಾ ಗಜಪಡೆ ಪಟ್ಟಿ ಬಿಡುಗಡೆ: ಅಂಬಾರಿ ಸಾರಥಿ ಅಭಿಮನ್ಯುವಿಗೆ ಕೊಕ್‌

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ಕ್ಕೆ ಸಿದ್ಧತೆಗಳು ಆರಂಭವಾಗಿದ್ದು, ಈ ಬಾರಿ ದಸರಾ ಗಜಪಡೆಯ ಪಟ್ಟಿಯಲ್ಲಿ ಮಹತ್ವದ…

1 hour ago

ಹನೂರು ಶೂಟೌಟ್‌ ಪ್ರಕರಣ: ತಮಿಳುನಾಡು ಸರ್ಕಾರದಿಂದಲೂ ಮೃತರ ಕುಟುಂಬಕ್ಕೆ ತಲಾ 10 ಲಕ್ಷ ಪರಿಹಾರ

ಚೆನ್ನೈ: ಹನೂರು ಶೂಟೌಟ್ ಪ್ರಕರಣದಲ್ಲಿ ಮೃತರ ಕುಟುಂಬಗಳಿಗೆ ತಮಿಳುನಾಡು ಸರ್ಕಾರದಿಂದಲೂ ತಲಾ 10 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಲಾಗಿದೆ.…

2 hours ago

ಗ್ಯಾರೇಜ್‌ಗೆ ಬೆಂಕಿ ಲಕ್ಷಾಂತರ ಮೌಲ್ಯದ ವಸ್ತುಗಳು ಭಸ್ಮ

ಗುಂಡ್ಲುಪೇಟೆ: ಪಟ್ಟಣದ ಕೇರಳ ರಸ್ತೆಯಲ್ಲಿರುವ ಗ್ಯಾರೇಜ್‌ಗೆ ಬೆಂಕಿ ತಗುಲಿ ಸಂಪೂರ್ಣ ಗ್ಯಾರೇಜ್ ಸುಟ್ಟುಹೋಗಿರುವ ಘಟನೆ ನಡೆದಿದೆ. ಪಟ್ಟಣದ ವಾಹಿದ್ ಎಂಬುವವರಿಗೆ…

2 hours ago

ಕೆಆರ್‌ಎಸ್‌ನಿಂದ ತಮಿಳುನಾಡಿಗೆ 4917 ಕ್ಯೂಸೆಕ್‌ ನೀರು ಬಿಡುಗಡೆ

ಮಂಡ್ಯ: ರಾಜ್ಯದಲ್ಲಿ ಕೆಆರ್‌ಎಸ್‌ ಜಲಾಶಯದ ನೀರಿನ ವಿಚಾರವೂ ಚರ್ಚೆಗೆ ಬಂದಿದ್ದು, ಕೇವಲ 1951 ಕ್ಯೂಸೆಕ್ಸ್‌ ನೀರು ಹರಿದು ಬರುತ್ತಿರುವ ಡ್ಯಾಂನಿಂದ…

3 hours ago

ಕಾಡಾನೆಗಳ ಸೆರೆಗೆ ಕಾರ್ಯಾಚರಣೆ: ಮುಂಜಾಗ್ರತಾ ಕ್ರಮವಾಗಿ ಸೆಕ್ಷನ್ 144 ಜಾರಿ

ಕೊಡಗು: ಸಾರ್ವಜನಿಕರಿಗೆ ಉಪಟಳ ನೀಡುತ್ತಿರುವ ಮೂರು ಗಂಡಾನೆಗಳನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಆದೇಶ ನೀಡಿದೆ. ಇಂದು ಬೆಳಿಗ್ಗೆ 10…

8 hours ago

ಹನೂರು ಎನ್‌ಕೌಂಟರ್: ಆತ್ಮರಕ್ಷಣೆಗಾಗಿ ಗುಂಡು ಹಾರಿಸಿದೆವು: ACF ಮರಿಸ್ವಾಮಿ

ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ನಡೆದ ಹನೂರು ಎನ್‌ಕೌಂಟರ್ ಬಗ್ಗೆ ಮೊದಲ ಬಾರಿಗೆ ಕಾವೇರಿ ವನ್ಯಧಾಮದ ACF ಮರಿಸ್ವಾಮಿ ಮಾಧ್ಯಮಗಳಿಗೆ ಪ್ರತಿಕ್ರಿಯೆ…

8 hours ago