ಮೈಸೂರು : ಕಾವೇರಿ ಹೋರಾಟಕ್ಕೆ ಕನ್ನಡ ನಟರು ಸಕ್ರಿಯರಾಗಿ ಬರುತ್ತಿಲ್ಲ ಎಂಬ ಕೂಗಿಗೆ ನಟ ದರ್ಶನ್ ಗರಂ ಆಗಿದ್ದಾರೆ.
ಮೈಸೂರು ಜಿಲ್ಲೆಯ ಬನ್ನೂರಿನಲ್ಲಿ ಈ ಬಗ್ಗೆ ಮಾತನಾಡಿರೋ ನಟ ದರ್ಶನ್, ಕಾವೇರಿ ಹೋರಾಟದ ಬಗ್ಗೆ ಮೌನ ಮುರಿದಿದ್ದು ನಟರು ಹೋರಾಟಕ್ಕೆ ಬರುತ್ತಿಲ್ಲ ಎಂಬ ಕೂಗಿಗೆ ಖಾರವಾಗಿ ಪ್ರತಿಕ್ರಿಯಿಸಿದ್ದಾರೆ. ದರ್ಶನ್, ಸುದೀಪ್, ಶಿವಣ್ಣ, ಯಶ್, ಅಭಿ ಮಾತ್ರ ನಿಮ್ಮ ಕಣ್ಣಿಗೆ ಕಾಣೋದಾ ಎಂದು ಪ್ರಶ್ನಿಸಿದ್ದಾರೆ.
ಮೊನ್ನೆ ಬಂದ ತಮಿಳು ಚಿತ್ರದಲ್ಲಿ ಕರ್ನಾಟಕದಲ್ಲೇ ಕೋಟಿ ಕೋಟಿ ಮಾಡಿದವನು ನಿಮಗೆ ಕಾಣ್ತಿಲ್ವ? ಕರ್ನಾಟಕದಲ್ಲೇ ಒಬ್ಬ ವಿತರಕ ತಮಿಳು ಚಿತ್ರದಿಂದ ಕರ್ನಾಟಕದದಲ್ಲೇ 36 ಕೋಟಿ ರೂ. ಮಾಡಿದ. 6 ಕೋಟಿ ಹಾಕಿ 36 ಕೋಟಿ ಮಾಡಿದ. ಅವನಿಗೆ ಯಾಕೆ ನೀವು ಕೇಳಲ್ಲ? ನಾವು ಮಾತ್ರ ನಿಮಗೆ ಕಾಣೋದಾ? ನಿಮಗೆ ಪ್ರಶ್ನೆ ಕೇಳ್ತಾ ಇದ್ದೀನಿ ಹೇಳಿ ಎಂದು ಜನರನ್ನು ದರ್ಶನ್ ಪ್ರಶ್ನಿಸಿದ್ದಾರೆ.
ಮಂಡ್ಯ : ಕೊಬ್ಬರಿ ಶೆಡ್ ಗೆ ಬೆಂಕಿ ಬಿದ್ದು ಲಕ್ಷಾಂತರ ರೂ. ಮೌಲ್ಯದ ಕೊಬ್ಬರಿ ನಾಶವಾಗಿರುವ ಘಟನೆ ತಾಲೂಕಿನ ಗುನ್ನಾಯಕನಹಳ್ಳಿಯಲ್ಲಿ…
ಹನೂರು : ತಾಲೂಕಿನ ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯ ಅಲಗುಮೂಲೆ ಅರಣ್ಯ ಪ್ರದೇಶದಲ್ಲಿ ಬುಧವಾರ ರಾತ್ರಿ ಏಕಾಏಕಿ ಎರಡು ಮೂರು ಕಡೆ…
ಶ್ರೀರಂಗಪಟ್ಟಣ : ಸಿಗರೇಟ್ ಮತ್ತು ತಂಬಾಕು ಉತ್ಪನ್ನಗಳ ಸೇವನೆಯಿಂದ ಕ್ಯಾನ್ಸರ್, ಹೃದಯ, ಶ್ವಾಸಕೋಶ ಸಂಬಂಧಿತ ಮಾರಣಾಂತಿಕ ಕಾಯಿಲೆಗಳು ಬರುತ್ತವೆಂದು ಕ್ಷೇತ್ರ…
ಹೊಸದಿಲ್ಲಿ : ದೇಶದ ಎಲ್ಲ ನಗರಗಳ ರಸ್ತೆಗಳಲ್ಲಿ ಆಂಬ್ಯುಲೆನ್ಸ್ಗಳ ಸಂಚಾರಕ್ಕಾಗಿ ಪ್ರತ್ಯೇಕ ಮೀಸಲು ಮಾರ್ಗಗಳನ್ನು ಒದಗಿಸುವಂತೆ ಸಮಾಜವಾದಿ ಪಕ್ಷದ ಸಂಸದೆ…
ಗುಂಡ್ಲುಪೇಟೆ : ಜಾನುವಾರು ಹಾಗೂ ಜಾನುವಾರು ಮೇಯಿಸುತ್ತಿದ್ದ ರೈತರೊಬ್ಬರ ಮೇಲೆ ಹುಲಿ ದಾಳಿ ನಡೆಸಿದೆ. ಪರಿಣಾಮ ರೈತ ಗಾಯಗೊಂಡಿದ್ದಾನೆ. ಘಟನೆ…
ಮೈಸೂರು : ರಾಜ್ಯದ ಪ್ರತಿಯೊಂದೂ ಜಿಲ್ಲೆಗಳ ವಿಶೇಷ ಉತ್ಪನ್ನಗಳ ಪರಿಚಯ, ಮಾರಾಟಕ್ಕೆ ಅವಕಾಶ ಕಲ್ಪಿಸಿಕೊಡುವ ಉದ್ದೇಶದಿಂದ ಕೇಂದ್ರ ಸರ್ಕಾರ ನಿರ್ಮಿಸುತ್ತಿರುವ…