ಮೈಸೂರು

ಮೃತ ಆನೆ ಅರ್ಜುನ ಸಮಾಧಿಗೆ ನೆರವು ನೀಡಿದ ನಟ ದರ್ಶನ್‌

ಮೈಸೂರು: ಕಳೆದ ವರ್ಷ ಕಾಡಾನೆ ಸೆರೆಹಿಡಿಯುವ ಕಾರ್ಯಚರಣೆಯಲ್ಲಿ ಮೃತಪಟ್ಟ ದಸರಾ ಅಂಬಾರಿ ಆನೆ ಅರ್ಜುನನ ಸಮಾಧಿ ಆದಷ್ಟು ಬೇಗನೇ ನಿರ್ಮಿಸಿ ಎಂದು ನಟ ದರ್ಶನ್‌ ಸಾಮಾಜಿಕ ಜಾಲತಾಣದಲ್ಲಿ ಮನವಿ ಮಾಡಿದ್ದರು. ಮಳೆಗಾಲ ಶುರುವಾಗುವ ಮುನ್ನ ಸಮಾಧಿ ನಿರ್ಮಾಣ ಕೆಲಸ ಆರಂಭವಾಗಲಿ ಎನ್ನುವುದು ನನ್ನ ಕೋರಿಕೆ ಎಂದು ಅವರು ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿದ್ದರು.

ಮೇ. ೨ ರಂದು ನಟ ದರ್ಶನ್‌ ತೂಗುದೀಪ ಅವರು, ʻದಸರಾ ಸಡಗರದ ವೇಳೆ ಬಹಳಷ್ಟು ಬಾರಿ ಅಂಬಾರಿ ಹೊತ್ತು ತನ್ನ ಗಜಗಾಂಭೀರ್ಯಕ್ಕೆ ಹೆಸರುವಾಸಿಯಾಗಿದ್ದ ಅರ್ಜುನ ಕಳೆದ ವರ್ಷ ನಡೆದ ಕಾಡಾನೆ ಕಾರ್ಯಾಚರಣೆಯಲ್ಲಿ ಸಾವನ್ನಪ್ಪಿರುವುದು ತಿಳಿದೇ ಇದೆ. ಆತನ ಸಮಾಧಿಗೆ ಯಾರು ದಿಕ್ಕು-ದೆಸೆ ಇಲ್ಲದಂತೆ ಭಾಸವಾಗುತ್ತಿದೆ. ಆತನಿಗೆ ಸಲ್ಲಬೇಕಾದ ಗೌರವ ಆದಷ್ಟು ಬೇಗ ದೊರೆಯಲಿ. ಇನ್ನೇನು ಮಳೆಗಾಲ ಶುರುವಾಗುವ ಮುನ್ನ ಇದಕ್ಕೊಂದು ಒಳ್ಳೆ ವ್ಯವಸ್ಥೆಯಾಗಲಿ ಎಂಬ ಕೋರಿಕೆ ನಮ್ಮದುʼ ಎಂದು ಎಕ್ಸ್‌ನಲ್ಲಿ ಬರೆದುಕೊಂಡು ವಿನಂತಿ ಮಾಡಿದ್ದರು.

ಅದರಂತೆ ನಟ ದರ್ಶನ್‌ ಅವರೇ ಅರ್ಜುನ ಆನೆ ಸಮಾಧಿಗೆ ನೆರವು ನೀಡಿ ಕಲ್ಲುಗಳನ್ನು ಕಳುಹಿಸಿ ತಾತ್ಕಲಿಕ ಹೊದಿಕೆ ನಿರ್ಮಾಣಕ್ಕೆ ಮುಂದಾಗಿದ್ದಾರೆ. ಈ ಬಗ್ಗೆ ದರ್ಶನ್‌ ಅಭಿಮಾನಿ ಬಳಗದ ಸಾಮಾಜಿಕ ಜಾಲತಾಣದಲ್ಲಿ ಸಮಾಧಿ ಹೊದಿಕೆ ಕಾರ್ಯಚರಣೆಗಳು ನಡೆಯುತ್ತಿರುವ ವಿಡಿಯೋಗಳು ಹೆಚ್ಚೆಚ್ಚು ಶೇರ್‌ ಆಗುತ್ತಿವೆ. ಕೊಟ್ಟ ಮಾತಿನಂತೆ ಅರ್ಜುನನ ಸ್ಮಾರಕಕ್ಕೆ ನೆರವು ನೀಡಿದ ನಮ್ಮ ಪ್ರೀತಿಯ ಡಿ ಬಾಸ್‌ ಎನ್ನುವ ಟ್ಯಾಗ್ ಲೈನ್‌ಗಳನ್ನು ಬರೆದು ವಿಡಿಯೋಗಳನ್ನು ಹಂಚಿಕೊಳ್ಳುತ್ತಿದ್ದಾರೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ತಾಪಮಾನ ಇಳಿಕೆ : ಬೆಂಗಳೂರಲ್ಲಿ ಚಳಿ ಹೆಚ್ಚಳ

ಬೆಂಗಳೂರು : ಬೆಂಗಳೂರಿನಲ್ಲಿ ಕನಿಷ್ಠ 15 ಡಿಗ್ರಿ ಸೆಲ್ಸಿಯಸ್ ಮತ್ತು ಗರಿಷ್ಟ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ವರೆಗೆ ಇರುತ್ತದೆ…

8 hours ago

ಸಿಎ ಸೈಟ್‌ ಕಟ್ಟಡ ನಿರ್ಮಾಣ ಕಾಲಮಿತಿ ; 3 ವರ್ಷದಿಂದ 5 ವರ್ಷ ಹೆಚ್ಚಳದ ಭರವಸೆ

ಬೆಳಗಾವಿ : ಸರ್ಕಾರದಿಂದ ಪಡೆದ ಸಿಎ ನಿವೇಶನಗಳಲ್ಲಿ ಕಟ್ಟಡ ನಿರ್ಮಾಣ ಮಾಡಲು ಈಗಿರುವ ಮೂರು ವರ್ಷಗಳ ಮಿತಿಯನ್ನು ಐದು ವರ್ಷಗಳಿಗೆ…

8 hours ago

ಮೈಸೂರು : ಆನ್‌ಲೈನ್‌ನಲ್ಲಿ ವೈದ್ಯರೊಬ್ಬರಿಗೆ 82 ಲಕ್ಷ ರೂ. ವಂಚನೆ

ಮೈಸೂರು : ಭಾರತೀಯ ದೂರ ಸಂಪರ್ಕ ನಿಯಂತ್ರಣ ಪ್ರಾಧಿಕಾರ(ಟ್ರಾಯ್) ಹಾಗೂ ಮುಂಬೈನ ಬಾಂಧ್ರಾ ಪೊಲೀಸ್ ಅಧಿಕಾರಿ ಸೋಗಿನಲ್ಲಿ ನಗರದ ವೈದ್ಯರೊಬ್ಬರಿಗೆ…

8 hours ago

SC/ST ದೌರ್ಜನ್ಯ ತಡೆ : ನಾಗರಿಕ ಹಕ್ಕು ಜಾರಿ ನೂತನ ಠಾಣೆ ಮೈಸೂರಲ್ಲಿ ಕಾರ್ಯರಂಭ

ಮೈಸೂರು : ಜಾತಿ ನಿಂದನೆ, ಅಸ್ಪೃಶ್ಯತೆ ಆಚರಣೆ ಪ್ರಕರಣಗಳಿಗೆ ಸಂಬಂಧಿಸಿದಂತೆ ದೂರು ದಾಖಲು ಹಾಗೂ ತನಿಖೆ ನಡೆಸುವ ಉದ್ದೇಶದಿಂದ ಆರಂಭಗೊಂಡಿರುವ…

8 hours ago

ಕೆಪಿಎ-ಮಹಿಳಾ-ಮಕ್ಕಳ ಅಭಿವೃದ್ಧಿ ಸಂಸ್ಥೆ ನಡುವೆ ಒಡಂಬಡಿಕೆ

ಮೈಸೂರು : ಕರ್ನಾಟಕ ಪೊಲೀಸ್ ಅಕಾಡೆಮಿ ಮತ್ತು ಸಾವಿತ್ರಿಬಾಯಿ ಫುಲೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಂಸ್ಥೆಯ ನಡುವೆ ಒಡಂಬಡಿಕೆಗೆ…

8 hours ago

ಮೈಸೂರಲ್ಲಿ ಎಸ್.ಎಲ್.ಬೈರಪ್ಪ ಸ್ಮಾರಕ ನಿರ್ಮಾಣ : ಸಿಎಂ ಘೋಷಣೆ

ಬೆಳಗಾವಿ (ಸುವರ್ಣಸೌಧ) : ಇತ್ತೀಚೆಗೆ ನಿಧನರಾದ ಸಾಹಿತಿ ಎಸ್.ಎಲ್.ಭೈರಪ್ಪ ಅವರ ಸ್ಮಾರಕವನ್ನು ಮೈಸೂರಿನಲ್ಲಿ ನಿರ್ಮಿಸಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…

9 hours ago