ಮೈಸೂರು

ಮೃತ ಆನೆ ಅರ್ಜುನ ಸಮಾಧಿಗೆ ನೆರವು ನೀಡಿದ ನಟ ದರ್ಶನ್‌

ಮೈಸೂರು: ಕಳೆದ ವರ್ಷ ಕಾಡಾನೆ ಸೆರೆಹಿಡಿಯುವ ಕಾರ್ಯಚರಣೆಯಲ್ಲಿ ಮೃತಪಟ್ಟ ದಸರಾ ಅಂಬಾರಿ ಆನೆ ಅರ್ಜುನನ ಸಮಾಧಿ ಆದಷ್ಟು ಬೇಗನೇ ನಿರ್ಮಿಸಿ ಎಂದು ನಟ ದರ್ಶನ್‌ ಸಾಮಾಜಿಕ ಜಾಲತಾಣದಲ್ಲಿ ಮನವಿ ಮಾಡಿದ್ದರು. ಮಳೆಗಾಲ ಶುರುವಾಗುವ ಮುನ್ನ ಸಮಾಧಿ ನಿರ್ಮಾಣ ಕೆಲಸ ಆರಂಭವಾಗಲಿ ಎನ್ನುವುದು ನನ್ನ ಕೋರಿಕೆ ಎಂದು ಅವರು ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿದ್ದರು.

ಮೇ. ೨ ರಂದು ನಟ ದರ್ಶನ್‌ ತೂಗುದೀಪ ಅವರು, ʻದಸರಾ ಸಡಗರದ ವೇಳೆ ಬಹಳಷ್ಟು ಬಾರಿ ಅಂಬಾರಿ ಹೊತ್ತು ತನ್ನ ಗಜಗಾಂಭೀರ್ಯಕ್ಕೆ ಹೆಸರುವಾಸಿಯಾಗಿದ್ದ ಅರ್ಜುನ ಕಳೆದ ವರ್ಷ ನಡೆದ ಕಾಡಾನೆ ಕಾರ್ಯಾಚರಣೆಯಲ್ಲಿ ಸಾವನ್ನಪ್ಪಿರುವುದು ತಿಳಿದೇ ಇದೆ. ಆತನ ಸಮಾಧಿಗೆ ಯಾರು ದಿಕ್ಕು-ದೆಸೆ ಇಲ್ಲದಂತೆ ಭಾಸವಾಗುತ್ತಿದೆ. ಆತನಿಗೆ ಸಲ್ಲಬೇಕಾದ ಗೌರವ ಆದಷ್ಟು ಬೇಗ ದೊರೆಯಲಿ. ಇನ್ನೇನು ಮಳೆಗಾಲ ಶುರುವಾಗುವ ಮುನ್ನ ಇದಕ್ಕೊಂದು ಒಳ್ಳೆ ವ್ಯವಸ್ಥೆಯಾಗಲಿ ಎಂಬ ಕೋರಿಕೆ ನಮ್ಮದುʼ ಎಂದು ಎಕ್ಸ್‌ನಲ್ಲಿ ಬರೆದುಕೊಂಡು ವಿನಂತಿ ಮಾಡಿದ್ದರು.

ಅದರಂತೆ ನಟ ದರ್ಶನ್‌ ಅವರೇ ಅರ್ಜುನ ಆನೆ ಸಮಾಧಿಗೆ ನೆರವು ನೀಡಿ ಕಲ್ಲುಗಳನ್ನು ಕಳುಹಿಸಿ ತಾತ್ಕಲಿಕ ಹೊದಿಕೆ ನಿರ್ಮಾಣಕ್ಕೆ ಮುಂದಾಗಿದ್ದಾರೆ. ಈ ಬಗ್ಗೆ ದರ್ಶನ್‌ ಅಭಿಮಾನಿ ಬಳಗದ ಸಾಮಾಜಿಕ ಜಾಲತಾಣದಲ್ಲಿ ಸಮಾಧಿ ಹೊದಿಕೆ ಕಾರ್ಯಚರಣೆಗಳು ನಡೆಯುತ್ತಿರುವ ವಿಡಿಯೋಗಳು ಹೆಚ್ಚೆಚ್ಚು ಶೇರ್‌ ಆಗುತ್ತಿವೆ. ಕೊಟ್ಟ ಮಾತಿನಂತೆ ಅರ್ಜುನನ ಸ್ಮಾರಕಕ್ಕೆ ನೆರವು ನೀಡಿದ ನಮ್ಮ ಪ್ರೀತಿಯ ಡಿ ಬಾಸ್‌ ಎನ್ನುವ ಟ್ಯಾಗ್ ಲೈನ್‌ಗಳನ್ನು ಬರೆದು ವಿಡಿಯೋಗಳನ್ನು ಹಂಚಿಕೊಳ್ಳುತ್ತಿದ್ದಾರೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಅಮೇರಿಕಾದಲ್ಲಿ ಕಾಣೆಯಾಗಿದ್ದ ಕರ್ನಾಟಕ ಮೂಲದ ವಿದ್ಯಾರ್ಥಿ ಮೃತದೇಹ ಪತ್ತೆ

ನ್ಯೂಯಾರ್ಕ್: ಅಮೆರಿಕದ ಕ್ಯಾಲಿಫೋರ್ನಿಯಾದ ಬರ್ಕ್ಲಿಯಲ್ಲಿ ಕಾಣೆಯಾಗಿದ್ದ ಕರ್ನಾಟಕದ ವಿದ್ಯಾರ್ಥಿ ಸಾಕೇತ್ ಶ್ರೀನಿವಾಸಯ್ಯ (22) ಅವರ ಮೃತದೇಹ ಪತ್ತೆಯಾಗಿದೆ ಎಂದು ಸ್ಯಾನ್…

3 hours ago

ವಿವಾಹಪೂರ್ವ ದೈಹಿಕ ಸಂಬಂಧದಲ್ಲಿ ಎಚ್ಚರಿಕೆ ಅಗತ್ಯ : ಸುಪ್ರೀಂ ಕೋರ್ಟ್‌

ಹೊಸದಿಲ್ಲಿ : ವಿವಾಹಪೂರ್ವ ದೈಹಿಕ ಸಂಬಂಧಗಳಲ್ಲಿ ಅತ್ಯಂತ ಜಾಗರೂಕತೆ ವಹಿಸಬೇಕು ಎಂದು ಸುಪ್ರೀಂ ಕೋರ್ಟ್‌ ಎಚ್ಚರಿಕೆ ನೀಡಿದೆ. ಮದುವೆಯ ಸುಳ್ಳು…

4 hours ago

ಎಕ್ಸ್‌ ವೆಬ್‌ಸೈಟ್‌ ಸ್ಥಗಿತ : ಜಾಗತಿಕ ಬಳಕೆದಾರರ ಪರದಾಟ

ಮೈಸೂರು : ಎಲಾನ್ ಮಸ್ಕ್ ಒಡೆತನದ ಸಾಮಾಜಿಕ ಜಾಲತಾಣ ಎಕ್ಸ್ (X, ಹಿಂದಿನ ಟ್ವಿಟರ್) ಇಂದು ಸಂಜೆ (ಫೆಬ್ರವರಿ 16)…

5 hours ago

ರಾಹುಲ್‌ ಗಾಂಧಿ ಪ್ರಶ್ನೆಗೆ ಪ್ರಾಮಾಣಿಕವಾಗಿ ಉತ್ತರಿಸಿ : ಪ್ರಧಾನಿಗೆ ಸಿಎಂ ಸಿದ್ದರಾಮಯ್ಯ ಆಗ್ರಹ

ಬೆಂಗಳೂರು : ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ರೈತರ ಮೇಲೆ ಪರಿಣಾಮ ಬೀರುವ ಭಾರತ-ಅಮೆರಿಕ ವ್ಯಾಪಾರ…

5 hours ago

ಕಾಡಾನೆಗಳ ದಾಳಿ ; ಗುಡಿಸಲು, ಸೋಲಾರ್ ತಂತಿಬೇಲಿ ನಾಶ

ಮಲ್ಕುಂಡಿ : ಕಾಡಾನೆಗಳ ದಾಳಿಯಿಂದ ಗುಡಿಸಲು ಹಾಗೂ ಸೋಲಾರ್ ತಂತಿ ಬೇಲಿ ನಾಶವಾಗಿರುವ ಘಟನೆ ನಂಜನಗೂಡು ತಾಲ್ಲೂಕಿನ ದೇವರಾಯಶೆಟ್ಟಿಪುರ ಗ್ರಾಮದಲ್ಲಿ…

6 hours ago

ಮೈಸೂರು | ಅಪರಾಧ ನಿಯಂತ್ರಣ ಕುರಿತು ಎಡಿಜಿಪಿ ಸಭೆ

ಮೈಸೂರು : ನಗರದಲ್ಲಿ ಅಪರಾಧ ನಿಯಂತ್ರಣ ಮತ್ತು ಪತ್ತೆ ಸಂಬಂಧ ರಾಜ್ಯ ಪೊಲೀಸ್ ಇಲಾಖೆಯ ಅಪರಾಧ ಮತ್ತು ತಾಂತ್ರಿಕ ಸೇವೆ…

6 hours ago