ಮೈಸೂರು: ಚಲನಚಿತ್ರ ನಟ ದರ್ಶನ್ ಚಿಕಿತ್ಸೆ ಮುಗಿದ ಬಳಿಕ ಮತ್ತೆ ಜೈಲಿಗೆ ಹೋಗಬೇಕು. ದರ್ಶನ್ಗೆ ಜಾಮೀನು ಕೊಡಬಾರದು ಎಂದು ಸುಪ್ರೀಂಕೋರ್ಟ್ ಅರ್ಜಿ ಹಾಕುತ್ತೇವೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದರು.
ನಗರದಲ್ಲಿ ಗುರುವಾರ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ರೇಣುಕಾಸ್ವಾಮಿ ಕೊಲೆ ಆರೋಪ ಸಂಬಂಧ ದರ್ಶನ್ ಕೇಸ್ ಇನ್ನೂ ವಿಚಾರಣೆ ನಡೆಯುತ್ತಿದೆ. ಜಾಮೀನು ಕೋರಿ ದರ್ಶನ್ ಮತ್ತೆ ಅರ್ಜಿ ಸಲ್ಲಿಸಬಹುದು. ಆದರೆ ಜಾಮೀನು ಕೊಡಬಾರದು ಎಂದು ನಾವು ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಸುತ್ತೇವೆ ಎಂದರು.
ಸಂಪುಟ ಪುನರ್ ರಚನೆ ಬಗ್ಗೆ ಗೊತ್ತಿಲ್ಲ
ಸಂಪುಟ ಪುನರ್ ರಚನೆ ಸಿಎಂ ವಿವೇಚನೆಗೆ ಬಿಟ್ಟದ್ದು. ಸಚಿವರ ಬದಲಾವಣೆ ವಿಚಾರವೂ ತಿಳಿದಿಲ್ಲ. ಅದೆಲ್ಲವೂ ಮುಖ್ಯಮಂತ್ರಿ ಹಾಗೂ ಹೈಕಮಾಂಡ್ ಮಟ್ಟದಲ್ಲಿ ತೀರ್ಮಾನವಾಗುತ್ತದೆ. ಸಚಿವ ಜಮೀರ್ ಅಹಮದ್ ಖಾನ್ ಬದಲಾವಣೆ ವಿಚಾರವು ಗೊತ್ತಿಲ್ಲ. ಸಿಎಂ ದೆಹಲಿಗೆ ತೆರಳಿರುವುದು ಇಲಾಖೆಯ ಕಾರ್ಯಕ್ರಮಕ್ಕೇ ಹೊರತು ಬೇರೆ ಉದ್ದೇಶಕ್ಕಲ್ಲ ಎಂದು ಪ್ರತಿಕ್ರಿಯಿಸಿದರು.
ಇತ್ತೀಚೆಗೆ ರಾಜ್ಯಸಭಾ ಸದಸ್ಯ, ಎಐಸಿಸಿ ಅಧ್ಯಕ್ಷ ಎಂ.ಮಲ್ಲಿಕಾರ್ಜುನ ಖರ್ಗೆ ಅವರು ಭಾಷಣ ಮಾಡಿದ ಉತ್ತರಾಖಂಡ್ ರಾಜ್ಯದ ಹಲ್ ದ್ವಾನಿಯ ರಾಮಲೀಲಾ…
ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಕಾವೇರಿ ವನ್ಯಜೀವಿ ಧಾಮದಲ್ಲಿ ಅರಣ್ಯ ಸಿಬ್ಬಂದಿ ನಡೆಸಿದ ಎನ್ಕೌಂಟರ್ನಲ್ಲಿ ಮೂವರು ಮೃತಪಟ್ಟಿರುವ ಪ್ರಕರಣ ಹಲವಾರು…
ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾದ ಜಂಬೂಸವಾರಿಯಲ್ಲಿ ೭೫೦ ಕೆಜಿ ತೂಕದ ಅಂಬಾರಿ ಹೊತ್ತು ಸಾಗುತ್ತಿದ್ದ ಅಭಿಮನ್ಯು ಆನೆ ಇನ್ನುಮುಂದೆ ಬರುವುದಿಲ್ಲ…
ಎಚ್.ಹಾಲಪ್ಪ ಇಂದು ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಜಯಂತಿ ದೇಶದಲ್ಲಿ ಜನಪ್ರತಿನಿಧಿಗಳ ಸಂಖ್ಯೆ ಸಾವಿರಾರು. ಆದರೆ, ಕಾಲದ ಪರೀಕ್ಷೆಯಲ್ಲಿ ಮುತ್ಸದ್ದಿ…
ಎಸ್.ಎಸ್.ಭಟ್ ಸುತ್ತಲಿನ ಕ್ರಷರ್ನಿಂದ ತಂದು ಹಾಕುತ್ತಿರುವ ರಾಶಿ ದೂಳಿನಿಂದ ತುಂಬುತ್ತಿದೆ ಕೆರೆ; ಗ್ರಾಮಸ್ಥರ ಆಕ್ರೋಶ ನಂಜನಗೂಡು: ಮಳೆ ಬಂದರೆ ನೀರಿನಿಂದ…