ಮೈಸೂರು

ಮಂತ್ರ ಮಾಂಗಲ್ಯದ ಮೂಲಕ ದಂಪಾತ್ಯ ಜೀವನಕ್ಕೆ ಕಾಲಿಟ್ಟ ರಂಗಕರ್ಮಿ ಮಂಜುನಾಥ್, ಶೃತಿ

ಮೈಸೂರು : ರಂಗಕರ್ಮಿಗಳಾದ ವೈ.ಮಂಜುನಾಥ ಮತ್ತು ವಿ.ಶ್ರುತಿ ಮಂತ್ರ ಮಾಂಗಲ್ಯದ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿಟ್ಟರು.

ನಗರದ ಬೋಗಾದಿಯ ವನಶ್ರೀ ಗಾರ್ಡನ್ಸ್‌ನಲ್ಲಿ ಜಾತ್ಯತೀತ ಒಲವಿನ ವಿವಾಹ ವೇದಿಕೆ ಮಾನವ ಮಂಟಪ ಸಹಯೋಗದಲ್ಲಿ ಭಾನುವಾರ ನಡೆದ ಸರಳ ವಿವಾಹದಲ್ಲಿ ಎರಡು ಕುಟುಂಬಗಳ ಸಮ್ಮತಿಯೊಂದಿಗೆ ಸರಳ ವಿವಾಹವಾದರು. ಸಾಹಿತಿ ಡಾ.ವೆಂ.ವನಜಾ ಮಂತ್ರ ಮಾಂಗಲ್ಯ ಬೋಧನೆ ಮಾಡಿದರು.

ತಿಪಟೂರು ಮೂಲದ ಶ್ರುತಿ ಹಲವು ವರ್ಷಗಳಿಂದ ರಂಗಭೂಮಿಯಲ್ಲಿ ತೊಡಗಿಸಿಕೊಂಡಿದ್ದು, ನೀನಾಸಂನಲ್ಲಿ ಶಿಕ್ಷಣ ಮುಗಿಸಿ ಹೊಸದಿಲ್ಲಿಯ ಎನ್‌ಎಸ್‌ಡಿಯಲ್ಲಿ ರಂಗದ ಕೆಲಸಗಳನ್ನು ಮಾಡಿದ್ದಾರೆ. ಹಲವಾರು ನಾಟಕಗಳನ್ನು ನಿರ್ದೇಶಿಸಿ ಅಭಿನಯಿಸಿದ್ದಾರೆ. ಭಾರತದ ಖ್ಯಾತ ರಂಗ ನಿರ್ದೇಶಕರೊಟ್ಟಿಗೆ ಸಹಾಯಕ ನಿರ್ದೇಶಕರಾಗಿ ಕೆಲಸ ಮಾಡಿದ್ದಾರೆ. ಪ್ರಸ್ತುತ ಮೈಸೂರು ರಂಗಾಯಣದಲ್ಲಿ ರಂಗ ಶಿಕ್ಷಕಿಯಾಗಿ ಕೆಲಸ ಮಾಡುತ್ತಿದ್ದಾರೆ.

ಇದನ್ನು ಓದಿ: ತಂದೆಗೆ ಹೃದಯಾಘಾತ : ಇಂದು ನಡೆಯೇಕಿದ್ದ ಸ್ಮೃತಿ ಮಂಧಾನ ಮದುವೆ ಮುಂದೂಡಿಕೆ

ಬಳ್ಳಾರಿ ಜಿಲ್ಲೆ ಸಿರುಗುಪ್ಪ ತಾಲ್ಲೂಕಿನ ಸಿರಿಗೆರೆ ಮೂಲದ ವೈ.ಮಂಜುನಾಥ ಸಹ ರಂಗಭೂಮಿಯಲ್ಲಿ ತಮ್ಮ ಛಾಪು ಮೂಡಿಸಿದ್ದು, ಧಾತ್ರಿ ರಂಗ ಸಂಸ್ಥೆ ಕಟ್ಟಿಕೊಂಡು ನಾಟಕಗಳನ್ನು ನಿರ್ದೇಶಿಸಿದ್ದು, ರಂಗ ಶಿಕ್ಷಕರಾಗಿ ಕೆಲಸ ಮಾಡುತ್ತಿದ್ದಾರೆ. ಇವರಿಬ್ಬರು ಪರಸ್ಪರ ಕಳೆದ ಕೆಲವು ವರ್ಷಗಳಿಂದ ಪ್ರೀತಿಸುತ್ತಿದ್ದರು. ಇದೀಗ ಸರಳ ವಿವಾಹದ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.

ಮಾನವ ಮಂಟಪದ ಸದಸ್ಯರಾದ ಉಗ್ರನರಸಿಂಹೇಗೌಡ, ಡಾ.ಲತಾ ಮೈಸೂರು, ಈ.ಧನಂಜಯ ಎಲಿಯೂರು, ಪ್ರೊ.ಕೆ.ಕಾಳಚನ್ನೇಗೌಡ, ರಂಗಾಯಣ ನಿರ್ದೇಶಕ ಸತೀಶ್ ತಿಪಟೂರು, ವಾಣಿ ಸತೀಶ್, ಪ್ರೊ.ಕಾಳೇಗೌಡ ನಾಗವಾರ, ಡಾ.ಸಿ.ಬಸವಲಿಂಗಯ್ಯ, ಸುಶೀಲ ಬಸವಲಿಂಗಯ್ಯ ಇನ್ನಿತರರು ವಿವಾಹದಲ್ಲಿ ಹಾಜರಿದ್ದರು.

ಆಂದೋಲನ ಡೆಸ್ಕ್

Recent Posts

110 ಅಡಿಗೆ ಇಳಿದ ಕೆಆರ್‌ಎಸ್‌ ಜಲಾಶಯದ ನೀರಿನ ಮಟ್ಟ: ಕುಡಿಯುವ ನೀರಿಗಿಲ್ಲ ತೊಂದರೆ

ಮಂಡ್ಯ: ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನಲ್ಲಿರುವ ರೈತರ ಜೀವನಾಡಿ ಕೆಆರ್‌ಎಸ್‌ ಜಲಾಶಯದ ನೀರಿನ ಮಟ್ಟ 110.44 ಅಡಿಗೆ ಇಳಿದಿದೆ. ಈ ಬಗ್ಗೆ…

19 mins ago

ರಾಜ್ಯಾದ್ಯಂತ ಮಾರ್ಚ್.‌18ರಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಆರಂಭ

ಬೆಂಗಳೂರು: ಮಾರ್ಚ್.‌18ರಿಂದ ರಾಜ್ಯಾದ್ಯಂತ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ಪ್ರಾರಂಭವಾಗಲಿವೆ. ಪರೀಕ್ಷಾ ಅಕ್ರಮಗಳನ್ನು ತಡೆಯಲು ಮತ್ತು ಪಾರದರ್ಶಕತೆ ಕಾಪಾಡಲು ಕಟ್ಟುನಿಟ್ಟಿನ ಮಾರ್ಗಸೂಚಿಗಳನ್ನು ಬಿಡುಗಡೆ…

46 mins ago

ನಾನಿನ್ನೂ ಬದುಕಿದ್ದೇನೆ: ಕ್ಯಾಮರಾ ಮುಂದೆ ಪ್ರತ್ಯಕ್ಷರಾದ ಇಸ್ರೇಲ್‌ ಪ್ರಧಾನಿ

ಜೆರುಸೇಲಂ: ನಾನಿನ್ನೂ ಬದುಕಿದ್ದೇನೆ ಎಂದು ಇಸ್ರೇಲ್‌ ಪ್ರಧಾನಿ ಬೆಂಜಮಿನ್‌ ನೆತನ್ಯಾಹು ಹೇಳಿದ್ದಾರೆ. ಸಾವಿನ ವದಂತಿಗಳ ನಡುವೆ ವಿಡಿಯೋದಲ್ಲಿ ಕಾಣಿಸಿಕೊಂಡು ಸಂದೇಶ…

1 hour ago

ಎಲ್‌ಪಿಜಿ ಕೊರತೆ; ಜನರ ಆತಂಕ ದೂರ ಮಾಡಬೇಕಿದೆ

ಅಮೆರಿಕ-ಇಸ್ರೇಲ್ ಹಾಗೂ ಇರಾನ್ ನಡುವಿನ ಯುದ್ಧಕ್ಕಿಂತಲ್ಲೂ ಹೆಚ್ಚು ಸದ್ದು ಮಾಡುತ್ತಿರುವುದು ಭಾರತದಲ್ಲಿನ ಎಲ್‌ಪಿಜಿ ಪೂರೈಕೆ ವಿಚಾರ. ಯುದ್ಧೋನ್ಮಾದ ವೈರತ್ವ ಹೊಂದಿರುವ…

5 hours ago

ಭಾರತ-ಗಲ್ಛ್ ರಾಷ್ಟ್ರಗಳ ಸಂಬಂಧಕ್ಕೆ ಧಕ್ಕೆ ಇಲ್ಲ!

ಶುಭಾ ಖಟಾವಕರ ಮ್ಹೆತ್ರಸ್ ಬಲಾಢ್ಯ ರಾಷ್ಟ್ರಗಳಾದ ಅಮೆರಿಕ -ಇಸ್ರೇಲ್, ಇರಾನ್ ಮೇಲೆ ದಾಳಿ ಶುರು ಮಾಡಿ ೧೩-೧೪ ದಿನಗಳೇ ಕಳೆದು…

5 hours ago

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ: ಕಾಂಗ್ರೆಸ್‌ನಲ್ಲಿ ನಿರ್ಣಾಯಕ ಘಟ್ಟಕ್ಕೆ ತಲುಪಿದ ಅಧಿಕಾರ ಹಂಚಿಕೆ

ರಾಜ್ಯ ಕಾಂಗ್ರೆಸ್‌ನಲ್ಲಿ ನಡೆಯುತ್ತಿರುವ ಅಧಿಕಾರ ಹಂಚಿಕೆಯ ಕಚ್ಚಾಟ ನಿರ್ಣಾಯಕ ಘಟ್ಟಕ್ಕೆ ತಲುಪಿದಂತೆ ಕಾಣುತ್ತಿದೆ. ಕಾರಣ ಅಧಿಕಾರ ಹಂಚಿಕೆಯ ಮಾತು ಉಳಿದುಕೊಂಡಿದೆ…

5 hours ago