ಮೈಸೂರು

ಮಂತ್ರ ಮಾಂಗಲ್ಯದ ಮೂಲಕ ದಂಪಾತ್ಯ ಜೀವನಕ್ಕೆ ಕಾಲಿಟ್ಟ ರಂಗಕರ್ಮಿ ಮಂಜುನಾಥ್, ಶೃತಿ

ಮೈಸೂರು : ರಂಗಕರ್ಮಿಗಳಾದ ವೈ.ಮಂಜುನಾಥ ಮತ್ತು ವಿ.ಶ್ರುತಿ ಮಂತ್ರ ಮಾಂಗಲ್ಯದ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿಟ್ಟರು.

ನಗರದ ಬೋಗಾದಿಯ ವನಶ್ರೀ ಗಾರ್ಡನ್ಸ್‌ನಲ್ಲಿ ಜಾತ್ಯತೀತ ಒಲವಿನ ವಿವಾಹ ವೇದಿಕೆ ಮಾನವ ಮಂಟಪ ಸಹಯೋಗದಲ್ಲಿ ಭಾನುವಾರ ನಡೆದ ಸರಳ ವಿವಾಹದಲ್ಲಿ ಎರಡು ಕುಟುಂಬಗಳ ಸಮ್ಮತಿಯೊಂದಿಗೆ ಸರಳ ವಿವಾಹವಾದರು. ಸಾಹಿತಿ ಡಾ.ವೆಂ.ವನಜಾ ಮಂತ್ರ ಮಾಂಗಲ್ಯ ಬೋಧನೆ ಮಾಡಿದರು.

ತಿಪಟೂರು ಮೂಲದ ಶ್ರುತಿ ಹಲವು ವರ್ಷಗಳಿಂದ ರಂಗಭೂಮಿಯಲ್ಲಿ ತೊಡಗಿಸಿಕೊಂಡಿದ್ದು, ನೀನಾಸಂನಲ್ಲಿ ಶಿಕ್ಷಣ ಮುಗಿಸಿ ಹೊಸದಿಲ್ಲಿಯ ಎನ್‌ಎಸ್‌ಡಿಯಲ್ಲಿ ರಂಗದ ಕೆಲಸಗಳನ್ನು ಮಾಡಿದ್ದಾರೆ. ಹಲವಾರು ನಾಟಕಗಳನ್ನು ನಿರ್ದೇಶಿಸಿ ಅಭಿನಯಿಸಿದ್ದಾರೆ. ಭಾರತದ ಖ್ಯಾತ ರಂಗ ನಿರ್ದೇಶಕರೊಟ್ಟಿಗೆ ಸಹಾಯಕ ನಿರ್ದೇಶಕರಾಗಿ ಕೆಲಸ ಮಾಡಿದ್ದಾರೆ. ಪ್ರಸ್ತುತ ಮೈಸೂರು ರಂಗಾಯಣದಲ್ಲಿ ರಂಗ ಶಿಕ್ಷಕಿಯಾಗಿ ಕೆಲಸ ಮಾಡುತ್ತಿದ್ದಾರೆ.

ಇದನ್ನು ಓದಿ: ತಂದೆಗೆ ಹೃದಯಾಘಾತ : ಇಂದು ನಡೆಯೇಕಿದ್ದ ಸ್ಮೃತಿ ಮಂಧಾನ ಮದುವೆ ಮುಂದೂಡಿಕೆ

ಬಳ್ಳಾರಿ ಜಿಲ್ಲೆ ಸಿರುಗುಪ್ಪ ತಾಲ್ಲೂಕಿನ ಸಿರಿಗೆರೆ ಮೂಲದ ವೈ.ಮಂಜುನಾಥ ಸಹ ರಂಗಭೂಮಿಯಲ್ಲಿ ತಮ್ಮ ಛಾಪು ಮೂಡಿಸಿದ್ದು, ಧಾತ್ರಿ ರಂಗ ಸಂಸ್ಥೆ ಕಟ್ಟಿಕೊಂಡು ನಾಟಕಗಳನ್ನು ನಿರ್ದೇಶಿಸಿದ್ದು, ರಂಗ ಶಿಕ್ಷಕರಾಗಿ ಕೆಲಸ ಮಾಡುತ್ತಿದ್ದಾರೆ. ಇವರಿಬ್ಬರು ಪರಸ್ಪರ ಕಳೆದ ಕೆಲವು ವರ್ಷಗಳಿಂದ ಪ್ರೀತಿಸುತ್ತಿದ್ದರು. ಇದೀಗ ಸರಳ ವಿವಾಹದ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.

ಮಾನವ ಮಂಟಪದ ಸದಸ್ಯರಾದ ಉಗ್ರನರಸಿಂಹೇಗೌಡ, ಡಾ.ಲತಾ ಮೈಸೂರು, ಈ.ಧನಂಜಯ ಎಲಿಯೂರು, ಪ್ರೊ.ಕೆ.ಕಾಳಚನ್ನೇಗೌಡ, ರಂಗಾಯಣ ನಿರ್ದೇಶಕ ಸತೀಶ್ ತಿಪಟೂರು, ವಾಣಿ ಸತೀಶ್, ಪ್ರೊ.ಕಾಳೇಗೌಡ ನಾಗವಾರ, ಡಾ.ಸಿ.ಬಸವಲಿಂಗಯ್ಯ, ಸುಶೀಲ ಬಸವಲಿಂಗಯ್ಯ ಇನ್ನಿತರರು ವಿವಾಹದಲ್ಲಿ ಹಾಜರಿದ್ದರು.

ಆಂದೋಲನ ಡೆಸ್ಕ್

Recent Posts

ಕಾವೇರಿ ಕೊಳ್ಳದ ರೈತರಿಗೆ 4 ಕಟ್ಟು ನೀರು ; ಕಾವೇರಿ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

ಬೆಂಗಳೂರು : ಮುಂಗಾರು ಮಳೆ ಕೊರತೆ ಮತ್ತು ಕಾವೇರಿ ಜಲಾನಯನ ಪ್ರದೇಶದಲ್ಲಿ ಜಲಾಶಯಗಳಿಗೆ ನಿರೀಕ್ಷಿತ ಪ್ರಮಾಣದಲ್ಲಿ ನೀರು ಹರಿದುಬಾರದ ಹಿನ್ನೆಲೆಯಲ್ಲಿ,…

13 seconds ago

ಮೈಸೂರು | ಭಾರತ್ ಜೋಡೋ ನೋಂದಣಿಗೆ ಚಾಲನೆ

ಮೈಸೂರು: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ ಮುಖ್ಯಮಂತ್ರಿಯವರು ಯುವ ಶಕ್ತಿ ರಾಷ್ಟ್ರ ಶಕ್ತಿ ಎಂಬ ಶೀರ್ಷಿಕೆಯಡಿ ಭಾರತ್…

34 mins ago

ಎಂಡಿಎ ಬದಲಿ ನಿವೇಶನ ಹಂಚಿಕೆ ರದ್ದುಪಡಿಸಿ ಸರ್ಕಾರ ಆದೇಶ

ಮೈಸೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (MDA) ನಿಯಮಗಳನ್ನು ಉಲ್ಲಂಘಿಸಿ ಮಾಡಲಾಗಿರುವ 50:50 ಬದಲಿ ನಿವೇಶನಗಳ ಹಂಚಿಕೆಗೆ ಸಂಬಂಧಿಸಿದಂತೆ ಏಕಸದಸ್ಯ…

46 mins ago

ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕುಷ ತನಿಖೆ : ಸಿ.ಎಂ ಡಿ.ಕೆ.ಶಿವಕುಮಾರ್*

ಬೆಂಗಳೂರು : ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕಷ ತನಿಖೆ ನಡೆಯುತ್ತಿದ್ದು, ತನಿಖೆ ಬಳಿಕ ಪ್ರತಿಕ್ರಿಯೆ ನೀಡುತ್ತೇವೆ ಎಂದು ಸಿಎಂ…

4 hours ago

ಕ್ಯಾಪ್ಟನ್ ಅಭಿಮನ್ಯು ಆನೆಗೆ ರಾಜೋಚಿತ ಬೀಳ್ಕೊಡುಗೆ ನೀಡಿ : ಸಚಿವ ಖಂಡ್ರೆ

ಬೆಂಗಳೂರು : ಆರು ಬಾರಿ ಚಿನ್ನದಂಬಾರಿ ಹೊತ್ತ 60 ವರ್ಷದ ಕ್ಯಾಪ್ಟನ್ ಅರ್ಜುನ ಆನೆಗೆ ಈ ಬಾರಿ ದಸರಾ ಜಂಬೂಸವಾರಿಯಲ್ಲಿ…

6 hours ago

ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕುಷ ತನಿಖೆ: ಸಿಎಂ ಡಿ ಕೆ ಶಿವಕುಮಾರ್

ಬೆಂಗಳೂರು: ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕಷ ತನಿಖೆ ನಡೆಯುತ್ತಿದ್ದು, ತನಿಖೆ ಬಳಿಕ ಪ್ರತಿಕ್ರಿಯೆ ನೀಡುತ್ತೇವೆ ಎಂದು ಸಿಎಂ ಡಿ…

7 hours ago