ಮೈಸೂರು

ಮಂತ್ರ ಮಾಂಗಲ್ಯದ ಮೂಲಕ ದಂಪಾತ್ಯ ಜೀವನಕ್ಕೆ ಕಾಲಿಟ್ಟ ರಂಗಕರ್ಮಿ ಮಂಜುನಾಥ್, ಶೃತಿ

ಮೈಸೂರು : ರಂಗಕರ್ಮಿಗಳಾದ ವೈ.ಮಂಜುನಾಥ ಮತ್ತು ವಿ.ಶ್ರುತಿ ಮಂತ್ರ ಮಾಂಗಲ್ಯದ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿಟ್ಟರು.

ನಗರದ ಬೋಗಾದಿಯ ವನಶ್ರೀ ಗಾರ್ಡನ್ಸ್‌ನಲ್ಲಿ ಜಾತ್ಯತೀತ ಒಲವಿನ ವಿವಾಹ ವೇದಿಕೆ ಮಾನವ ಮಂಟಪ ಸಹಯೋಗದಲ್ಲಿ ಭಾನುವಾರ ನಡೆದ ಸರಳ ವಿವಾಹದಲ್ಲಿ ಎರಡು ಕುಟುಂಬಗಳ ಸಮ್ಮತಿಯೊಂದಿಗೆ ಸರಳ ವಿವಾಹವಾದರು. ಸಾಹಿತಿ ಡಾ.ವೆಂ.ವನಜಾ ಮಂತ್ರ ಮಾಂಗಲ್ಯ ಬೋಧನೆ ಮಾಡಿದರು.

ತಿಪಟೂರು ಮೂಲದ ಶ್ರುತಿ ಹಲವು ವರ್ಷಗಳಿಂದ ರಂಗಭೂಮಿಯಲ್ಲಿ ತೊಡಗಿಸಿಕೊಂಡಿದ್ದು, ನೀನಾಸಂನಲ್ಲಿ ಶಿಕ್ಷಣ ಮುಗಿಸಿ ಹೊಸದಿಲ್ಲಿಯ ಎನ್‌ಎಸ್‌ಡಿಯಲ್ಲಿ ರಂಗದ ಕೆಲಸಗಳನ್ನು ಮಾಡಿದ್ದಾರೆ. ಹಲವಾರು ನಾಟಕಗಳನ್ನು ನಿರ್ದೇಶಿಸಿ ಅಭಿನಯಿಸಿದ್ದಾರೆ. ಭಾರತದ ಖ್ಯಾತ ರಂಗ ನಿರ್ದೇಶಕರೊಟ್ಟಿಗೆ ಸಹಾಯಕ ನಿರ್ದೇಶಕರಾಗಿ ಕೆಲಸ ಮಾಡಿದ್ದಾರೆ. ಪ್ರಸ್ತುತ ಮೈಸೂರು ರಂಗಾಯಣದಲ್ಲಿ ರಂಗ ಶಿಕ್ಷಕಿಯಾಗಿ ಕೆಲಸ ಮಾಡುತ್ತಿದ್ದಾರೆ.

ಇದನ್ನು ಓದಿ: ತಂದೆಗೆ ಹೃದಯಾಘಾತ : ಇಂದು ನಡೆಯೇಕಿದ್ದ ಸ್ಮೃತಿ ಮಂಧಾನ ಮದುವೆ ಮುಂದೂಡಿಕೆ

ಬಳ್ಳಾರಿ ಜಿಲ್ಲೆ ಸಿರುಗುಪ್ಪ ತಾಲ್ಲೂಕಿನ ಸಿರಿಗೆರೆ ಮೂಲದ ವೈ.ಮಂಜುನಾಥ ಸಹ ರಂಗಭೂಮಿಯಲ್ಲಿ ತಮ್ಮ ಛಾಪು ಮೂಡಿಸಿದ್ದು, ಧಾತ್ರಿ ರಂಗ ಸಂಸ್ಥೆ ಕಟ್ಟಿಕೊಂಡು ನಾಟಕಗಳನ್ನು ನಿರ್ದೇಶಿಸಿದ್ದು, ರಂಗ ಶಿಕ್ಷಕರಾಗಿ ಕೆಲಸ ಮಾಡುತ್ತಿದ್ದಾರೆ. ಇವರಿಬ್ಬರು ಪರಸ್ಪರ ಕಳೆದ ಕೆಲವು ವರ್ಷಗಳಿಂದ ಪ್ರೀತಿಸುತ್ತಿದ್ದರು. ಇದೀಗ ಸರಳ ವಿವಾಹದ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.

ಮಾನವ ಮಂಟಪದ ಸದಸ್ಯರಾದ ಉಗ್ರನರಸಿಂಹೇಗೌಡ, ಡಾ.ಲತಾ ಮೈಸೂರು, ಈ.ಧನಂಜಯ ಎಲಿಯೂರು, ಪ್ರೊ.ಕೆ.ಕಾಳಚನ್ನೇಗೌಡ, ರಂಗಾಯಣ ನಿರ್ದೇಶಕ ಸತೀಶ್ ತಿಪಟೂರು, ವಾಣಿ ಸತೀಶ್, ಪ್ರೊ.ಕಾಳೇಗೌಡ ನಾಗವಾರ, ಡಾ.ಸಿ.ಬಸವಲಿಂಗಯ್ಯ, ಸುಶೀಲ ಬಸವಲಿಂಗಯ್ಯ ಇನ್ನಿತರರು ವಿವಾಹದಲ್ಲಿ ಹಾಜರಿದ್ದರು.

ಆಂದೋಲನ ಡೆಸ್ಕ್

Recent Posts

ಮನೆಯ ಚಾವಣಿ ಕುಸಿದು ನಾಲ್ವರು ಸಾವು ; ತಲಾ 5 ಲಕ್ಷ ಪರಿಹಾರ ಘೋಷಣೆ

ವಿಜಯಪುರ : ಭಾರೀ ಗಾಳಿ ಮತ್ತು ಮಳೆಯಿಂದಾಗಿ ಹಳೆಯ ಮನೆಯ ಮೇಲ್ಚಾವಣಿ ಕುಸಿದು ಒಂದೇ ಕುಟುಂಬದ ನಾಲ್ವರು ದುರ್ಮರಣವನ್ನಪ್ಪಿದ ಘಟನೆ…

3 hours ago

ಡಿ.ಕೆ.ಶಿವಕುಮಾರ್‌ ಜನ್ಮದಿನಾಚರಣೆ : ರಾರಾಜಿಸಿದ ಮುಂದಿನ ಮುಖ್ಯಮಂತ್ರಿ ಡಿಕೆಶಿ ಬ್ಯಾನರ್‌ಗಳು

ಬೆಂಗಳೂರು : ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ 64ನೇ ಹುಟ್ಟುಹಬ್ಬದ ಸಂಭ್ರಮದಲ್ಲಿ ಶುಭ ಹಾರೈಸಲು ಅಭಿಮಾನಿಗಳು, ಕಾರ್ಯಕರ್ತರು, ಹಿತೈಷಿಗಳ ದಂಡೇ…

4 hours ago

ದರ್ಶನ್‌ಗೆ ಇನ್ನೂ ಒಂದು ವರ್ಷ ಜಾಮೀನು ಇಲ್ಲ : ಅರ್ಜಿ ವಜಾಗೊಳಿಸಿದ ಸುಪೀಂ

ನವದೆಹಲಿ : ರೇಣುಕಾಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ನಟ ದರ್ಶನ್‌ಗೆ ಸುಪ್ರೀಂ ಕೋರ್ಟ್‌ನಲ್ಲಿ ಭಾರೀ ಹಿನ್ನಡೆಯಾಗಿದ್ದು, ಇನ್ನು ಒಂದು…

4 hours ago

ಜೂನ್‌ 21ರಂದು ನೀಟ್-ಯುಜಿ 2026ರ ಮರು ಪರೀಕ್ಷೆ

ನವದೆಹಲಿ : ಪ್ರಶ್ನೆಪತ್ರಿಕೆ ಸೋರಿಕೆ ಆರೋಪದ ಹಿನ್ನೆಲೆಯಲ್ಲಿ ರದ್ದುಗೊಂಡಿದ್ದ ‘ನೀಟ್-ಯುಜಿ 2026’ ವೈದ್ಯಕೀಯ ಪ್ರವೇಶ ಪರೀಕ್ಷೆಯ ಮರು ಪರೀಕ್ಷೆ ಜೂನ್…

6 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ; ಪ್ರತಿಷ್ಠಿತ ಕಾನ್‌ ಚಿತ್ರೋತ್ಸವದಲ್ಲಿ ಭಾರತ ಚಿತ್ರೋದ್ಯಮ

ಉತ್ಸವಗಳ ಉತ್ಸವ ಎಂದೇ ಪ್ರತೀತಿ ಪಡೆದಿರುವ ಅಂತಾರಾಷ್ಟ್ರೀಯ ಚಿತ್ರೋತ್ಸವ ಫ್ರಾನ್ಸ್‌ನ ಕಾನ್‌ನದು. ಇದೀಗ ಮೊನ್ನೆ ಅದರ ೭೯ನೇ ಆವೃತ್ತಿಗೆ ಚಾಲನೆ…

10 hours ago

ಗಗನಮುಖಿಯಾಗಿದ್ದ ತೆಂಗಿನ ಕಾಯಿ ದರ ಕುಸಿತ

ಎಚ್‌.ಎಸ್.ದಿನೇಶ್‌ ಕುಮಾರ್‌ ಮೈಸೂರು : ಕಳೆದ ವರ್ಷ ಗಗನಕ್ಕೇರಿದ್ದ ತೆಂಗಿನಕಾಯಿ ಬೆಲೆ ಇದೀಗ ಶೇ. ೫೦ರಷ್ಟು ದರ ಇಳಿದಿದೆ. ಇದರಿಂದಾಗಿ…

10 hours ago