ಮೈಸೂರು: ಭಜರಂಗಿ, ವೇದ ಸೇರಿದಂತೆ ಇನ್ನೂ ಕೆಲವು ಸಿನಿಮಾಗಳಲ್ಲಿ ನಟಿಸಿದ್ದ ನಟಿ ಹಾಗೂ ರಾಜಕಾರಣಿ ವಿದ್ಯಾ ಎಂಬುವವರನ್ನು ಕೊಲೆ ಮಾಡಿ ಪರಾರಿಯಾಗಿದ್ದ ಪತಿ ನಂದೀಶ್ನನ್ನು ಪೊಲೀಸರು ಬುಧವಾರ(ಮೇ.೨೨) ಬೆಂಗಳೂರಿನಲ್ಲಿ ಬಂಧಿಸಿದ್ದಾರೆ.
ನಟಿ ವಿದ್ಯಾ ೨೦೧೮ ರಲ್ಲಿ ನಂದೀಶ್ ಎಂಬುವರೊಟ್ಟಿಗೆ ವಿವಾಹವಾಗಿದ್ದರು. ಆರಂಭದ ಕೆಲ ದಿನಗಳಿಂದಲೂ ಇಬ್ಬರ ಮನಸ್ತಾನ ಏರ್ಪಟ್ಟು, ಇಬ್ಬರು ಆಗಾಗ್ಗೆ ಜಗಳವಾಡುತ್ತಿದ್ದರು. ವಿಚ್ಚೇದನಕ್ಕೂ ಸಹ ಪ್ರಯತ್ನಸಿದ್ದರು ಆದರೆ ಪೋಷಕರು ಬುದ್ಧಿವಾದ ಹೇಳಿ ಇಬ್ಬರನ್ನೂ ಒಂದು ಮಾಡಿದ್ದರು. ಆದರೆ ಜಗಳ ಮಾತ್ರ ಮುಂದುವರೆಯುತ್ತಲೇ ಇತ್ತು.
ವಿದ್ಯಾ ಸೋಮವಾರ(ಮೇ.೨೦) ತಡರಾತ್ರಿ ತಿ.ನರಸೀಪುರ ತಾಲ್ಲೂಕಿನ ತುರಗನೂರಿನಲ್ಲಿರುವ ಪತಿಯ ಮನೆಗೆ ತೆರಳಿದ್ದಾಗ ಇಬ್ಬರ ನಡುವೆ ಜಗಳವಾಗಿ, ಆರೋಪಿಯು ಪತ್ನಿಯ ತಲೆಗೆ ತಲವಾರಿನಿಂದ ಹಲ್ಲೆ ನಡೆಸಿ ಕೊಲೆ ಮಾಡಿದ್ದರು. ಅಲ್ಲಿಂದ ಮಂಡ್ಯದಲ್ಲಿರುವ ಚಿಕ್ಕಮ್ಮನ ಮನೆಗೆ ತೆರಳಿದ್ದ ಆರೋಪಿ, ನಂತರ ಬೆಂಗಳೂರಿನ ಸಂಬಂಧಿಕರೊಬ್ಬರ ಮನೆಗೆ ಹೋಗಿದ್ದರು.
ಈ ಬಗ್ಗೆ ಮಾಹಿತಿ ಪಡೆದ ಜಿಲ್ಲಾ ಪೊಲೀಸರ ತಂಡ ಆತನನ್ನು ಬಂಧಿಸಿ, ಸ್ಥಳ ಮಹಜರು ನಡೆಸಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ವಿದ್ಯಾ ಭಜರಂಗಿ, ವೇದ, ಜೈ ಮಾರುತಿ ೮೦೦, ಅಜಿತ್ ಇನ್ನೂ ಕೆಲವು ಸಿನಿಮಾಗಳಲ್ಲಿ ಪೋಷಕ ನಟಿಯಾಗಿ ನಟಿಸಿದ್ದರು. ರಾಜಕೀಯದಲ್ಲೂ ಸಕ್ರಿಯರಾಗಿದ್ದ ಇವರು ಮೈಸೂರು ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿಯಾಗಿ ಕೆಲಸ ಮಾಡುತ್ತಿದ್ದರು.
ಮಂಗಳೂರು: ಗುತ್ತಿಗೆ ಆಧಾರದ ಮೇಲೆ ನೇಮಕಗೊಂಡಿದ್ದ ಕೊಲ್ಲಮೊಗ್ರು ಪ್ರಾಥಮಿಕ ಕೇಂದ್ರದ ವೈದ್ಯಾಧಿಕಾರಿಗಳು ಆರು ತಿಂಗಳಿಂದ ಸರಿಯಾಗಿ ಸಂಬಳ ಆಗದ ಕಾರಣ…
ಮೈಸೂರು: ಮೈಸೂರು ಜಿಲ್ಲೆ ಸರಗೂರಿನ ತಾಲ್ಲೂಕು ಕಚೇರಿ ಹಾಗೂ ಹಾಸನದ ಆಲೂರು ತಾಲ್ಲೂಕು ಕಚೇರಿಗಳಿಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ…
ಮೈಸೂರು: ಪ್ರಚೋದನಕಾರಿ ಭಾಷಣ ಮಾಡುವವರು ಮಾತ್ರ ವಿರೋಧಿಸುತ್ತಾರೆ. ಪ್ರಚೋದನಾಕಾರಿ ಭಾಷಣ ಮಾಡದೆ ಹೋದರೆ ಸುಮ್ಮನೆ ಪ್ರಕರಣ ದಾಖಲಿಸುವುದಿಲ್ಲ ಎಂದರು. ಬಿಜೆಪಿಯವರು…
ಮೈಸೂರು: ಸಿಎಂ ಸಿದ್ದರಾಮಯ್ಯ ಅವರಿಂದು ತಮ್ಮ ನಿವಾಸದ ಬಳಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದರು. ಕೆಲ ಸಮಸ್ಯೆಗೆ ಸ್ಥಳದಲ್ಲೇ ಪರಿಹಾರ ಸೂಚಿಸಿದ…
ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಗಾಳಿಯ ಗುಣಮಟ್ಟ ದಿನದಿಂದ ದಿನಕ್ಕೆ ಕುಸಿಯುತ್ತಿದೆ. ಜೊತೆಗೆ ವಿವಿಧ ಜಿಲ್ಲೆಗಳಲ್ಲಿಯೂ ಗಾಳಿಯ ಗುಣಮಟ್ಟ ಕಳಪೆ…
ಬೆಂಗಳೂರು: ಬಿಜೆಪಿ ದೃಷ್ಟಿಯಲ್ಲಿಟ್ಟುಕೊಂಡು ದ್ವೇಷ ಭಾಷಣ ಕಾಯ್ದೆಯನ್ನು ತಂದಿಲ್ಲ. ಇದರಲ್ಲಿ ಬಿಜೆಪಿಯವರು ರಾಜಕಾರಣ ಮಾಡಲು ಹೊರಟಿದ್ದಾರೆ ಎಂದು ಗೃಹ ಸಚಿವ…