ಮೈಸೂರು: ಭಜರಂಗಿ, ವೇದ ಸೇರಿದಂತೆ ಇನ್ನೂ ಕೆಲವು ಸಿನಿಮಾಗಳಲ್ಲಿ ನಟಿಸಿದ್ದ ನಟಿ ಹಾಗೂ ರಾಜಕಾರಣಿ ವಿದ್ಯಾ ಎಂಬುವವರನ್ನು ಕೊಲೆ ಮಾಡಿ ಪರಾರಿಯಾಗಿದ್ದ ಪತಿ ನಂದೀಶ್ನನ್ನು ಪೊಲೀಸರು ಬುಧವಾರ(ಮೇ.೨೨) ಬೆಂಗಳೂರಿನಲ್ಲಿ ಬಂಧಿಸಿದ್ದಾರೆ.
ನಟಿ ವಿದ್ಯಾ ೨೦೧೮ ರಲ್ಲಿ ನಂದೀಶ್ ಎಂಬುವರೊಟ್ಟಿಗೆ ವಿವಾಹವಾಗಿದ್ದರು. ಆರಂಭದ ಕೆಲ ದಿನಗಳಿಂದಲೂ ಇಬ್ಬರ ಮನಸ್ತಾನ ಏರ್ಪಟ್ಟು, ಇಬ್ಬರು ಆಗಾಗ್ಗೆ ಜಗಳವಾಡುತ್ತಿದ್ದರು. ವಿಚ್ಚೇದನಕ್ಕೂ ಸಹ ಪ್ರಯತ್ನಸಿದ್ದರು ಆದರೆ ಪೋಷಕರು ಬುದ್ಧಿವಾದ ಹೇಳಿ ಇಬ್ಬರನ್ನೂ ಒಂದು ಮಾಡಿದ್ದರು. ಆದರೆ ಜಗಳ ಮಾತ್ರ ಮುಂದುವರೆಯುತ್ತಲೇ ಇತ್ತು.
ವಿದ್ಯಾ ಸೋಮವಾರ(ಮೇ.೨೦) ತಡರಾತ್ರಿ ತಿ.ನರಸೀಪುರ ತಾಲ್ಲೂಕಿನ ತುರಗನೂರಿನಲ್ಲಿರುವ ಪತಿಯ ಮನೆಗೆ ತೆರಳಿದ್ದಾಗ ಇಬ್ಬರ ನಡುವೆ ಜಗಳವಾಗಿ, ಆರೋಪಿಯು ಪತ್ನಿಯ ತಲೆಗೆ ತಲವಾರಿನಿಂದ ಹಲ್ಲೆ ನಡೆಸಿ ಕೊಲೆ ಮಾಡಿದ್ದರು. ಅಲ್ಲಿಂದ ಮಂಡ್ಯದಲ್ಲಿರುವ ಚಿಕ್ಕಮ್ಮನ ಮನೆಗೆ ತೆರಳಿದ್ದ ಆರೋಪಿ, ನಂತರ ಬೆಂಗಳೂರಿನ ಸಂಬಂಧಿಕರೊಬ್ಬರ ಮನೆಗೆ ಹೋಗಿದ್ದರು.
ಈ ಬಗ್ಗೆ ಮಾಹಿತಿ ಪಡೆದ ಜಿಲ್ಲಾ ಪೊಲೀಸರ ತಂಡ ಆತನನ್ನು ಬಂಧಿಸಿ, ಸ್ಥಳ ಮಹಜರು ನಡೆಸಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ವಿದ್ಯಾ ಭಜರಂಗಿ, ವೇದ, ಜೈ ಮಾರುತಿ ೮೦೦, ಅಜಿತ್ ಇನ್ನೂ ಕೆಲವು ಸಿನಿಮಾಗಳಲ್ಲಿ ಪೋಷಕ ನಟಿಯಾಗಿ ನಟಿಸಿದ್ದರು. ರಾಜಕೀಯದಲ್ಲೂ ಸಕ್ರಿಯರಾಗಿದ್ದ ಇವರು ಮೈಸೂರು ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿಯಾಗಿ ಕೆಲಸ ಮಾಡುತ್ತಿದ್ದರು.
ಡಾ.ಎಂ.ಡಿ.ಉಮೇಶ್, ಉಪನ್ಯಾಸಕರು, ಗಾಂಧಿ ಅಧ್ಯಯನ ಕೇಂದ್ರ, ಮೈಸೂರು ವಿ.ವಿ ಬೆಳಗಾವಿ ಜಿಲ್ಲೆಯ ಹುದಲಿ ಗ್ರಾಮದಲ್ಲಿ ಬಾಲ ಕೃಷ್ಣ ಮತ್ತು ರಾಧಾಬಾಯಿ…
ಡಾಕ್ಟರ್ ಮೆಹತಾ ಮತ್ತು ನಾನು ಅವರ ಮಿತ್ರನ ಮನೆಗೆ ಹೋದೆವು. ಅವರು ನನ್ನ ವಿಷಯದಲ್ಲಿ ತುಂಬಾ ಕರುಣೆ ಮತ್ತು ಆದರವುಳ್ಳವರಾಗಿದ್ದರು.…
ನಂಜನಗೂಡು : ಹಾಡಾ ಹಗಲೇ ಜನನಿಬಿಡ ಪ್ರದೇಶದಲ್ಲಿ ನಿಲ್ಲಿಸಿದ್ದ ಸ್ಕೂಟಿಯಿಂದ ಹಣ ಕದ್ದ ಘಟನೆ ಪಟ್ಟಣದ ಮಿನಿ ವಿಧಾನಸೌಧದ ಬಳಿ…
ಮೈಸೂರು : ದಸರಾ ವಸ್ತು ಪ್ರದರ್ಶನವನ್ನು ಜಾಗತಿಕ ಮಟ್ಟದಲ್ಲಿ ಮತ್ತಷ್ಟು ಆಕರ್ಷಣೀಯವಾಗಿಸಲು ಕರ್ನಾಟಕ ಪ್ರದರ್ಶನ ಪ್ರಾಧಿಕಾರವು ವಸ್ತು ಪ್ರದರ್ಶನ ಆವರಣವನ್ನು…
ಬೆಂಗಳೂರು: ಇಂದಿನಿಂದ ಮೂರು ದಿನ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಹವಾಮಾನ ಇಲಾಖೆ ರಾಜ್ಯದ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ…