ಮೈಸೂರು

ಬೌದ್ಧರುದ್ಯಾನ ಪದ ಸೇರಿಸಿ ನಾಡಗೀತೆ ಪೂರ್ಣಗೊಳಿಸಿ : ಪ್ರೊ.ಅರವಿಂದ ಮಾಲಗತ್ತಿ

ಮೈಸೂರು : ರಾಜ್ಯ ಸರ್ಕಾರವು ಅಧಿಕೃತಗೊಳಿಸಿರುವ ಕುವೆಂಪು ರಚಿತ ನಾಡಗೀತೆಯಲ್ಲಿ ಬೌದ್ಧರನ್ನು ಸೇರ್ಪಡೆ ಮಾಡಬೇಕು ಎಂದು ಹಿರಿಯ ಸಾಹಿತಿ ಪ್ರೊ.ಅರವಿಂದ ಮಾಲಗತ್ತಿ ಮನವಿ ಮಾಡಿದರು.

ನಾಡಗೀತೆಗೆ ಸಂಬಂಧಿಸಿದಂತೆ ಸಾಕಷ್ಟು ವಾಗ್ವಾದ, ಭಿನ್ನಾಭಿಪ್ರಾಯಗಳಿವೆ. ಇಂತಹ ವಾಗ್ವಾದ, ಭಿನ್ನಾಭಿಪ್ರಾಯಗಳು ಎಲ್ಲಿವರೆಗೆ ಇರುತ್ತವೆಯೋ ಅಲ್ಲಿಯವರೆಗೂ ನಾವು ಜೀವಂತವಾಗಿರುತ್ತೇವೆ. ಕುವೆಂಪು ಅವರು ಹಲವು ಬಾರಿ ಈ ನಾಡಗೀತೆಯನ್ನು ತಿದ್ದುಪಡಿಗೆ ಒಳಪಡಿಸಿದ್ದಾರೆ. ಕೆಲವರು ಈ ಗೀತೆಯಲ್ಲಿ ಮಹಿಳೆಯರ ಹೆಸರು ಬರಬೇಕು ಎಂದರೆ, ಮತ್ತೆ ಕೆಲವರು ಬುದ್ಧರ ಹೆಸರು ಬಂದಿಲ್ಲ ಎಂದು ಹೇಳಿದ್ದಾರೆ. ಕೇಳಿ ಬಂದ ಪದಗಳನ್ನೆಲ್ಲಾ ಸೇರಿಸುತ್ತ್ತಾ ಹೋದರೆ ಅದು ಸ್ತುತಿ ಗೀತೆಯಾಗುತ್ತದೆ ಎಂದರು.

ಕುವೆಂಪು ಅವರು ಜೈನರುದ್ಯಾನ ಎಂಬ ಪದವನ್ನು ಬಳಸುವ ಮುನ್ನ ಬೌದ್ಧರುದ್ಯಾನ ಎಂಬ ಪದವನ್ನು ಬಳಸಿದ್ದರು. ಆದರೆ ಆ ಶಬ್ದವನ್ನು ಯಾವ ಕಾರಣಕ್ಕೆ ೭೦ ದಶಕದಲ್ಲಿ ಕೈಬಿಟ್ಟರೋ ಗೊತ್ತಿಲ್ಲ. ಆದರೆ ಆ ಶಬ್ದವನ್ನು ಇದರ ಜತೆಗೆ ಜೋಡಿಸುವುದರಿಂದ ನಾಡಿಗೂ ಗೌರವಸಲ್ಲಿಸಿದಂತಾಗುತ್ತದೆ ಮತ್ತು ನಾಡಿನ ಸಂಕೇತಕ್ಕೆ ಸೂಚಕವಾಗಿ ನಿಂತುಕೊಳ್ಳುತ್ತದೆ ಎಂದು ಹೇಳಿದರು.

ಇದರಿಂದ ನಾಡಗೀತೆಯ ಆಶಯವೂ ಪೂರ್ಣಗೊಳ್ಳುತ್ತದೆ. ಅಲ್ಲದೇ ಈ ಪದವನ್ನು ಸೇರಿಸುವುದರಿಂದ ಹಾಡುವುದಕ್ಕಾಗಲಿ, ರಾಗಕ್ಕಾಗಲೀ ಯಾವುದೇ ತೊಂದರೆಯಾಗುವುದಿಲ್ಲ. ಆದ್ದರಿಂದ ಸರ್ಕಾರವು ಬೌದ್ಧರುದ್ಯಾನ ಎಂಬ ಪದವನ್ನು ಸೇರ್ಪಡೆಗೊಳಿಸಿ, ಗೀತೆಯನ್ನು ಜಾರಿಗೆ ತರಬೇಕು ಎಂದರು.

ನಮ್ಮ ರಾಜ್ಯದ ನಾಡಗೀತೆಗೆ ಪರಂಪರೆಯೇ ಇದೆ. ಮೈಸೂರು ಸಂಸ್ಥಾನದಲ್ಲಿ ೧೮೮೧ರಲ್ಲೇ ನಾಡಗೀತೆಯನ್ನು ಹಾಡಲಾಗುತ್ತಿತ್ತು. ‘ಕಾಯೇ ಶ್ರೀ ಗೌರಿ..’ ಹಾಡು ಸಂಸ್ಥಾನದ ಗೀತೆಯಾಗಿತ್ತು. ಬೆಳಗಾವಿಯಲ್ಲಿ ನಡೆದ ಕಾಂಗ್ರೆಸ್ ಅಧಿವೇಶನದಲ್ಲಿ ಹುಯಿಲುಗೋಳ ನಾರಾಯಣರಾಯರು ಬರೆದ ‘ಉದಯವಾಗಲಿ ನಮ್ಮ ಚಲುವ ಕನ್ನಡ ನಾಡು’ಗೀತೆಯನ್ನು ಸ್ವಾಗತ ಗೀತೆಯಾಗಿ ಹಾಡಲಾಗಿತ್ತು. ಇದನ್ನೇ ನಾಡಗೀತೆಯಾಗಿ ಮುಂದುವರಿಸಲಾಗಿತ್ತು. ಬಳಿಕ ೧೯೭೦ರಲ್ಲಿ ಕುವೆಂಪು ಅವರ ಜಯ ಭಾರತ ಜನನಿಯ ತನುಜಾತೆ ಕವಿತೆಯನ್ನು ನಾಡಗೀತೆಯಾಗಿ ಆಚರಣೆಗೆ ತರಲಾಯಿತು ಎಂದರು.

ಆಂದೋಲನ ಡೆಸ್ಕ್

Recent Posts

ಚಿನ್ನ ಕಳ್ಳ ಸಾಗಾಣಿಕೆ ಪತ್ತೆ : 2.89 ಕೋಟಿ ರೂ. ಮೌಲ್ಯದ ಚಿನ್ನ ವಶ

ಮುಂಬೈ : ಸೌದಿ ಅರೇಬಿಯಾದಿಂದ ಅಂತರರಾಷ್ಟ್ರೀಯ ಕೊರಿಯರ್ ಟರ್ಮಿನಲ್‌ನಲ್ಲಿ ಸಾಗಿಸುತ್ತಿದ್ದ ಗ್ರೈಂಡರ್‌ನಲ್ಲಿ ಬಚ್ಚಿಟ್ಟಿದ್ದ 2.89 ಕೋಟಿ ರೂ.ಮೌಲ್ಯದ ಚಿನ್ನವನ್ನು ಕಂದಾಯ…

14 mins ago

ಗಣರಾಜ್ಯೋತ್ಸವ : ಕರ್ನಾಟಕದ ಸ್ತಬ್ಧಚಿತ್ರಕ್ಕಿಲ್ಲ ಅವಕಾಶ

ಭುಗಿಲೆದ್ದ ಆಕ್ರೋಶ; ಬಿಜೆಪಿ -ಕಾಂಗ್ರೆಸ್ ಆರೋಪ-ಪ್ರತ್ಯಾರೋಪ ಬೆಂಗಳೂರು : ದೇಶದ 77ನೇ ಗಣರಾಜ್ಯೋತ್ಸವ ಸಂಭ್ರಮಕ್ಕೆ ಕ್ಷಣಗಣನೆ ಆರಂಭವಾಗಿದೆ. ಆದರೆ, ಈ…

23 mins ago

ಮೈಷುಗರ್ ಕಾರ್ಖಾನೆ ಖಾಸಗಿಯವರಿಗೆ ವಹಿಸಲ್ಲ : ಸಿ.ಡಿ.ಗಂಗಾಧರ ಸ್ಪಷ್ಟನೆ

ಮಂಡ್ಯ : ಮೈಷುಗರ್ ಕಾರ್ಖಾನೆಯನ್ನು ಯಾವುದೇ ಕಾರಣಕ್ಕೂ ಖಾಸಗಿಯವರಿಗೆ ವಹಿಸುವ ಪ್ರಶ್ನೆಯೇ ಇಲ್ಲ. ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ನಂತರ…

31 mins ago

ಮೈಸೂರು-ಕುಶಾಲನಗರ ರೈಲ್ವೆ ಯೋಜನೆ ಸ್ಥಗಿತ : ಕಾರಣ ಬಿಚ್ಚಿಟ್ಟ ಸಂಸದ ಯದುವೀರ್‌

ಮೈಸೂರು : ಮೈಸೂರು-ಕುಶಾಲನಗರ ರೈಲ್ವೆ ಯೋಜನೆ ಸ್ಥಗಿತವಾಗಿದೆ, ಯೋಜನೆಗೆ ಅಗತ್ಯವಿರುವ ಭೂಮಿಯನ್ನು ರಾಜ್ಯ ಸರ್ಕಾರ ಹಸ್ತಾಂತರ ಮಾಡಿಲ್ಲ. ಈ ಬಗ್ಗೆ…

48 mins ago

ಶಾರ್ಟ್‌ ಸರ್ಕ್ಯೂಟ್ ನಿಂದ ಹೊತ್ತಿ ಉರಿದ ಟಿವಿ ; ದಾಖಲಾತಿಗಳು ಭಸ್ಮ

ಹನೂರು: ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಟಿವಿ ಸೇರಿದಂತೆ ಅತ್ಯಮೂಲ್ಯ ದಾಖಲಾತಿಗಳು ಸುಟ್ಟು ಕರಕಲಾದ ಘಟನೆ ಹನೂರು ತಾಲೂಕಿನ ಬಂಡಳ್ಳಿಯಲ್ಲಿ…

2 hours ago

ಹನೂರು| ರಾಜ್ಯ ಸರ್ಕಾರದ ವಿರುದ್ಧ ಅಂಡೆ ಕುರುಬನದೊಡ್ಡಿ ಗ್ರಾಮಸ್ಥರಿಂದ ಪ್ರತಿಭಟನೆ

ಮಹಾದೇಶ್‌ ಎಂ ಗೌಡ  ಹನೂರು: ಕಳೆದ ಬಿಜೆಪಿ ಸರ್ಕಾರದ ಅವಧಿಯಲ್ಲಿ ಅಂಡೆ ಕುರುಬನ ದೊಡ್ಡಿ ಗ್ರಾಮದ ಡಾಂಬರು ರಸ್ತೆ ಅಭಿವೃದ್ಧಿಗೆ…

2 hours ago