ಮೈಸೂರು

ಬೌದ್ಧರುದ್ಯಾನ ಪದ ಸೇರಿಸಿ ನಾಡಗೀತೆ ಪೂರ್ಣಗೊಳಿಸಿ : ಪ್ರೊ.ಅರವಿಂದ ಮಾಲಗತ್ತಿ

ಮೈಸೂರು : ರಾಜ್ಯ ಸರ್ಕಾರವು ಅಧಿಕೃತಗೊಳಿಸಿರುವ ಕುವೆಂಪು ರಚಿತ ನಾಡಗೀತೆಯಲ್ಲಿ ಬೌದ್ಧರನ್ನು ಸೇರ್ಪಡೆ ಮಾಡಬೇಕು ಎಂದು ಹಿರಿಯ ಸಾಹಿತಿ ಪ್ರೊ.ಅರವಿಂದ ಮಾಲಗತ್ತಿ ಮನವಿ ಮಾಡಿದರು.

ನಾಡಗೀತೆಗೆ ಸಂಬಂಧಿಸಿದಂತೆ ಸಾಕಷ್ಟು ವಾಗ್ವಾದ, ಭಿನ್ನಾಭಿಪ್ರಾಯಗಳಿವೆ. ಇಂತಹ ವಾಗ್ವಾದ, ಭಿನ್ನಾಭಿಪ್ರಾಯಗಳು ಎಲ್ಲಿವರೆಗೆ ಇರುತ್ತವೆಯೋ ಅಲ್ಲಿಯವರೆಗೂ ನಾವು ಜೀವಂತವಾಗಿರುತ್ತೇವೆ. ಕುವೆಂಪು ಅವರು ಹಲವು ಬಾರಿ ಈ ನಾಡಗೀತೆಯನ್ನು ತಿದ್ದುಪಡಿಗೆ ಒಳಪಡಿಸಿದ್ದಾರೆ. ಕೆಲವರು ಈ ಗೀತೆಯಲ್ಲಿ ಮಹಿಳೆಯರ ಹೆಸರು ಬರಬೇಕು ಎಂದರೆ, ಮತ್ತೆ ಕೆಲವರು ಬುದ್ಧರ ಹೆಸರು ಬಂದಿಲ್ಲ ಎಂದು ಹೇಳಿದ್ದಾರೆ. ಕೇಳಿ ಬಂದ ಪದಗಳನ್ನೆಲ್ಲಾ ಸೇರಿಸುತ್ತ್ತಾ ಹೋದರೆ ಅದು ಸ್ತುತಿ ಗೀತೆಯಾಗುತ್ತದೆ ಎಂದರು.

ಕುವೆಂಪು ಅವರು ಜೈನರುದ್ಯಾನ ಎಂಬ ಪದವನ್ನು ಬಳಸುವ ಮುನ್ನ ಬೌದ್ಧರುದ್ಯಾನ ಎಂಬ ಪದವನ್ನು ಬಳಸಿದ್ದರು. ಆದರೆ ಆ ಶಬ್ದವನ್ನು ಯಾವ ಕಾರಣಕ್ಕೆ ೭೦ ದಶಕದಲ್ಲಿ ಕೈಬಿಟ್ಟರೋ ಗೊತ್ತಿಲ್ಲ. ಆದರೆ ಆ ಶಬ್ದವನ್ನು ಇದರ ಜತೆಗೆ ಜೋಡಿಸುವುದರಿಂದ ನಾಡಿಗೂ ಗೌರವಸಲ್ಲಿಸಿದಂತಾಗುತ್ತದೆ ಮತ್ತು ನಾಡಿನ ಸಂಕೇತಕ್ಕೆ ಸೂಚಕವಾಗಿ ನಿಂತುಕೊಳ್ಳುತ್ತದೆ ಎಂದು ಹೇಳಿದರು.

ಇದರಿಂದ ನಾಡಗೀತೆಯ ಆಶಯವೂ ಪೂರ್ಣಗೊಳ್ಳುತ್ತದೆ. ಅಲ್ಲದೇ ಈ ಪದವನ್ನು ಸೇರಿಸುವುದರಿಂದ ಹಾಡುವುದಕ್ಕಾಗಲಿ, ರಾಗಕ್ಕಾಗಲೀ ಯಾವುದೇ ತೊಂದರೆಯಾಗುವುದಿಲ್ಲ. ಆದ್ದರಿಂದ ಸರ್ಕಾರವು ಬೌದ್ಧರುದ್ಯಾನ ಎಂಬ ಪದವನ್ನು ಸೇರ್ಪಡೆಗೊಳಿಸಿ, ಗೀತೆಯನ್ನು ಜಾರಿಗೆ ತರಬೇಕು ಎಂದರು.

ನಮ್ಮ ರಾಜ್ಯದ ನಾಡಗೀತೆಗೆ ಪರಂಪರೆಯೇ ಇದೆ. ಮೈಸೂರು ಸಂಸ್ಥಾನದಲ್ಲಿ ೧೮೮೧ರಲ್ಲೇ ನಾಡಗೀತೆಯನ್ನು ಹಾಡಲಾಗುತ್ತಿತ್ತು. ‘ಕಾಯೇ ಶ್ರೀ ಗೌರಿ..’ ಹಾಡು ಸಂಸ್ಥಾನದ ಗೀತೆಯಾಗಿತ್ತು. ಬೆಳಗಾವಿಯಲ್ಲಿ ನಡೆದ ಕಾಂಗ್ರೆಸ್ ಅಧಿವೇಶನದಲ್ಲಿ ಹುಯಿಲುಗೋಳ ನಾರಾಯಣರಾಯರು ಬರೆದ ‘ಉದಯವಾಗಲಿ ನಮ್ಮ ಚಲುವ ಕನ್ನಡ ನಾಡು’ಗೀತೆಯನ್ನು ಸ್ವಾಗತ ಗೀತೆಯಾಗಿ ಹಾಡಲಾಗಿತ್ತು. ಇದನ್ನೇ ನಾಡಗೀತೆಯಾಗಿ ಮುಂದುವರಿಸಲಾಗಿತ್ತು. ಬಳಿಕ ೧೯೭೦ರಲ್ಲಿ ಕುವೆಂಪು ಅವರ ಜಯ ಭಾರತ ಜನನಿಯ ತನುಜಾತೆ ಕವಿತೆಯನ್ನು ನಾಡಗೀತೆಯಾಗಿ ಆಚರಣೆಗೆ ತರಲಾಯಿತು ಎಂದರು.

ಆಂದೋಲನ ಡೆಸ್ಕ್

Recent Posts

ರಾಜ್ಯ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ: ತುಟ್ಟಿ ಭತ್ಯೆ ಹೆಚ್ಚಳ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ತುಟ್ಟಿಭತ್ಯೆ(ಡಿಎ)ಯನ್ನು ಶೇ.1.50ರಷ್ಟು ಹೆಚ್ಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. 2026 ಜನವರಿ 1ರಿಂದ ಅನ್ವಯವಾಗುವಂತೆ…

10 hours ago

ಮೇ.13ರಂದು ಬೆಂಗಳೂರು ಜನತೆಗೆ ಬಿಗ್‌ ಗಿಫ್ಟ್:‌ ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ಮೇ.13ಕ್ಕೆ ಬೆಂಗಳೂರು ಜನತೆಗೆ ಬಿಗ್‌ ಗಿಫ್ಟ್‌ ನೀಡಲಿದ್ದೇವೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ತಿಳಿಸಿದ್ದಾರೆ. ಈ ಬಗ್ಗೆ ಮಾಧ್ಯಮದವರೊಂದಿಗೆ…

10 hours ago

ದೇವರಾಜ ಮಾರುಕಟ್ಟೆಗೆ ಸಂಸದ ಯದುವೀರ್‌ ಒಡೆಯರ್‌ ಭೇಟಿ

ಮೈಸೂರು: ಮೈಸೂರಿನ ಪಾರಂಪರಿಕ ಕಟ್ಟಡದಲ್ಲಿ ಒಂದಾಗಿರುವ ದೇವರಾಜ ಮಾರುಕಟ್ಟೆಗೆ ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರಿಂದು ಭೇಟಿ ನೀಡಿ…

11 hours ago

ಪಂಚಭೂತಗಳಲ್ಲಿ ಲೀನರಾದ ಸಚಿವ ಡಿ.ಸುಧಾಕರ್‌

ಚಿತ್ರದುರ್ಗ: ಸಕಲ ಸರ್ಕಾರಿ ಗೌರವಗಳೊಂದಿಗೆ ಚಳ್ಳಕೆರೆಯ ಚಿತಾಗಾರದಲ್ಲಿ ಹಿರಿಯೂರು ಶಾಸಕ ಡಿ.ಸುಧಾಕರ್‌ ಅವರ ಅಂತ್ಯಕ್ರಿಯೆ ನೆರವೇರಿತು. ಬೆಳಿಗ್ಗೆಯಿಂದ ಸುಧಾಕರ್‌ ಅವರ…

11 hours ago

ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ರೈತನ ಮೇಲೆ ಕಾಡಾನೆ ದಾಳಿ: ಗಂಭೀರ ಗಾಯ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ಜಮೀನಿನಲ್ಲಿದ್ದ ರೈತನೋರ್ವನ ಮೇಲೆ ಕಾಡಾನೆ ದಾಳಿ ಮಾಡಿದ ಪರಿಣಾಮ ತೀವ್ರ…

11 hours ago

ಎಂ.ಕೆ.ಸ್ಟಾಲಿನ್‌ ಭೇಟಿಯಾದ ತಮಿಳುನಾಡು ನೂತನ ಸಿಎಂ ವಿಜಯ್‌

ಚೆನ್ನೈ: ತಮಿಳುನಾಡಿನ ನೂತನ ಸಿಎಂ ವಿಜಯ್‌ ಅವರಿಂದು ಮಾಜಿ ಸಿಎಂ ಎಂ.ಕೆ.ಸ್ಟಾಲಿನ್‌ ಅವರನ್ನು ಭೇಟಿಯಾದರು. ಸದ್ಯ ಇಂದಿನ ಸಭೆಯಲ್ಲಿ ಇಬ್ಬರು…

13 hours ago