ಮೈಸೂರು: ಮಾಹಿತಿ ತಂತ್ರಜ್ಞಾನ ಮತ್ತು ಎಲೆಕ್ಟ್ರಾನಿಕ್ಸ್ ಮಂತ್ರಾಲಯ ಹಾಗೂ ಜಿಲ್ಲಾ ಮಾಹಿತಿ ಕೇಂದ್ರದ ವತಿಯಿಂದ ಜಿಪಂ ಕಚೇರಿಯ ಅಬ್ದುಲ್ ನಜೀರ್ ಸಾಬ್ ಸಭಾಂಗಣದಲ್ಲಿ ಇಂದು “ಸುರಕ್ಷಿತ ಇಂಟರ್ ನೆಟ್ ದಿನ” ಆಚರಣೆ ಅಂಗವಾಗಿ ಆಯೋಜಿಸಿದ್ದ ಒಂದು ದಿನದ ಕಾರ್ಯಗಾರವನ್ನು ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಎಂ.ಗಾಯಿತ್ರಿ ಚಾಲನೆ ನೀಡಿದರು.
ಬಳಿಕ ಮಾತನಾಡಿದ ಅವರು, ದೈನಂದಿನ ಜೀವನದಲ್ಲಿ ತಂತ್ರಜ್ಞಾನ ಹೆಚ್ಚಾಗಿ ಆವರಿಸಿದ್ದು, ತಂತ್ರಜ್ಞಾನದ ಪ್ರಯೋಜನ ಹಾಗೂ ದುಷ್ಪರಿಣಾಮಗಳ ಬಗ್ಗೆ ಅರಿವು ಅಗತ್ಯವಾಗಿದ್ದು ಹಾಗೂ ಅಪರಾಧಗಳನ್ನು ತಡೆಗಟ್ಟಲು, ಸಮಾಜದ ಮೇಲೆ ಕೆಟ್ಟ ಪರಿಣಾಮಗಳ ಬಗ್ಗೆ ಜಾಗೃತಿ ಮೂಡಿಸಲು ಈ ಕಾರ್ಯಾಗಾರ ಅನುಕೂಲವಾಗಿದೆ ಎಂದು ಹೇಳಿದರು.
ತಂತ್ರಜ್ಞಾನ ಬಳಕೆಯಿಂದ ವಿವಿಧ ರೀತಿಯಲ್ಲಿ ಮೋಸ ಮಾಡುವ ಪ್ರವೃತ್ತಿ ಹಾಗೂ ಸಾಮಾಜಿಕ ಜಾಲತಾಣಗಳನ್ನು ದುರ್ಬಳಕೆ ಮಾಡಿಕೊಂಡು ವಂಚಿಸುತ್ತಿರುವುದು ಕಂಡು ಬರುತ್ತಿದೆ. ಇದರಿಂದ ಯಾವುದೇ ಆಮೀಷಗಳಿಗೆ ಒಳಗಾಗದೇ ಅಂತರ್ಜಾಲದ ಉಪಯೋಗಗಳ ಬಗ್ಗೆ ಹೆಚ್ಚಿನ ಅರಿವು ಮೂಡಿಸಿಕೊಂಡು ವಂಚಿತರಾಗದೇ ಬದುಕು ನಡೆಸಿ ಎಂದು ಅರಿವು ಮೂಡಿಸಿದರು.
ಅಪರ ಜಿಲ್ಲಾಧಿಕಾರಿಗಳಾದ ಡಾ.ಪಿ. ಶಿವರಾಜು ಅವರು ಮಾತನಾಡಿ, ಕಾಲಬದಲಾದಂತೆ ತಂತ್ರಜ್ಞಾನವು ಆಲದ ಮರದಂತೆ ಬೆಳೆದಿದ್ದು, ಮನುಷ್ಯನಿಗಿಂತ ಸಾವಿರಪಟ್ಟು ಬೆಳೆಯುತ್ತಿದೆ. ಇದರಿಂದ ತಂತ್ರಜ್ಞಾನದ ಅರಿವು ಮೊದಲು ಅಗತ್ಯವಾಗಿದ್ದು, ದೈನಂದಿನ ಕೆಲಸ ಕಾರ್ಯಗಳಿಗೆ ಅಗತ್ಯವಿರುವ ತಂತ್ರಜ್ಞಾನದ ಅರಿವು, ಮೋಸ ಹೋಗದಂತೆ ಸೈಬರ್ ಜಾಗೃತಿಗಳನ್ನು ಅಳವಡಿಸಿಕೊಳ್ಳಬೇಕು. ಕಚೇರಿಗಳಲ್ಲಿ ನಿಮ್ಮ ವೈಯಕ್ತಿಕ ಲಾಗಿನ್ ಗಳ ಬಗ್ಗೆ ಅರಿವಿನ ಜೊತೆಗೆ ಇತರರಿಗೆ ಲಾಗಿನ್ ಗಳನ್ನು ಶೇರ್ ಮಾಡದಂತೆ ಎಚ್ಚರಿಕೆ ವಹಿಸಿ ಎಂದು ತಿಳಿಸಿದರು.
ಕುವೆಂಪುನಗರದ ಪ್ರಥಮ ದರ್ಜೆ ಕಾಲೇಜಿನ ಸಹಾಯಕ ಪ್ರಾಧ್ಯಾಪಕರಾದ ಶಿಲ್ಪ ರವರು ಸಂಪನ್ಮೂಲ ವ್ಯಕ್ತಗಳಾಗಿ ದೈನಂದಿನ ಜೀವನದಲ್ಲಿ ಇಂಟರ್ ನೆಟ್ ಬಳಕೆ, ಇಂಟರ್ ನೆಟ್ ಅಪಾಯಗಳು, ಆನ್ ಲೈನ್ ವಂಚನೆ, ಸೈಕಾಲಾಜಿಕಲ್ ವಂಚನೆ, ಬ್ಯಾಂಕಿಂಗ್ ವಂಚನೆ, ಮೋಸ ಹೋಗದಂತೆ ಮುನ್ನೇಚರಿಕೆ ಕ್ರಮಗಳ ಕುರಿತು ಅರಿವು ಮೂಡಿಸಿದರು.
ಕಾರ್ಯಕ್ರಮದಲ್ಲಿ ಉಪಕಾರ್ಯದರ್ಶಿ(ಆಡಳಿತ) ಸವಿತಾ, ಮುಖ್ಯ ಲೆಕ್ಕಾಧಿಕಾರಿ ಸಿದ್ದಗಂಗಮ್ಮ, ಜಿಲ್ಲಾ ಸೂಚನಾ ವಿಜ್ಞಾನ ಅಧಿಕಾರಿ ಸುದರ್ಶನ್ ರವರು ಸೇರಿದಂತೆ ಇತರರು ಹಾಜರಿದ್ದರು.
ಹನೂರು: ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಮಲೆ ಮಹದೇಶ್ವರ ವನ್ಯಜೀವಿ ವಿಭಾಗದ ಹೂಗ್ಯಂ ವನ್ಯಜೀವಿ ವಲಯದ ಜಲ್ಲಿಪಾಳ್ಯ ಹತ್ತಿರ ಬೈಕ್ನಲ್ಲಿ…
ಬೆಳಗಾವಿ: ಸಿದ್ದರಾಮಯ್ಯ ಔಟ್ ಗೋಯಿಂಗ್ ಸಿಎಂ. ಇದು ಅವರ ಕೊನೆಯ ಅಧಿವೇಶನ ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಲೇವಡಿ ಮಾಡಿದ್ದಾರೆ.…
ಮೈಸೂರಿನ ಕುವೆಂಪು ನಗರದ ಅಪೋಲೋ ಆಸ್ಪತ್ರೆಯ ಹಿಂಭಾಗ ದಲ್ಲಿರುವ ಬಿಜಿಎಸ್ ಪದವಿಪೂರ್ವ ಕಾಲೇಜಿನ ಎದುರಿನ ದೊಡ್ಡಮೋರಿ ಯಿಂದ ತೆಗೆದ ಕಸವನ್ನು…
ಕಳೆದ ಮೂರು ವರ್ಷಗಳ ಅವಧಿಯಲ್ಲಿ, ರಾಜ್ಯದಲ್ಲಿ ೨,೮೪೭ ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ರಾಷ್ಟ್ರೀಯ ಅಪರಾಧ ದಾಖಲೆಗಳ ವಿಭಾಗ (ಎನ್ಸಿಆರ್ಬಿ)…
ಭಾರತದ ಶಿಕ್ಷಣ ನೀತಿ ಮಕ್ಕಳ ಆರೋಗ್ಯದ ಕುರಿತು ಸ್ಪಷ್ಟ ಮಾರ್ಗಸೂಚಿ ನೀಡಿದ್ದರೂ, ಬಹುತೇಕ ಶಾಲೆಗಳು ಇದನ್ನು ಪಾಲಿಸುತ್ತಿಲ್ಲ ಎಂಬುದು ವಿಷಾದಕರ…
ಕೇಂದ್ರ ಸರ್ಕಾರದಲ್ಲಿ ಕೃಷಿ, ರೈತ ಕಲ್ಯಾಣ ಮತ್ತು ಗ್ರಾಮೀಣ ಅಭಿವೃದ್ಧಿ ಸಚಿವರಾಗಿರುವ ಶಿವರಾಜ್ ಸಿಂಗ್ ಚೌಹಾಣ್ ಅವರು ಡಿಸೆಂಬರ್ ೧೬ರಂದು…