ಮೈಸೂರು

ಹೆಚ್ಚಾದ ತಂತ್ರಜ್ಞಾನ ; ದುಷ್ಪರಿಣಾಮಗಳ ಅರಿವು ಮುಖ್ಯ : ಕೆ.ಎಂ ಗಾಯಿತ್ರಿ

ಮೈಸೂರು: ಮಾಹಿತಿ ತಂತ್ರಜ್ಞಾನ ಮತ್ತು ಎಲೆಕ್ಟ್ರಾನಿಕ್ಸ್ ಮಂತ್ರಾಲಯ ಹಾಗೂ ಜಿಲ್ಲಾ ಮಾಹಿತಿ ಕೇಂದ್ರದ ವತಿಯಿಂದ ಜಿಪಂ ಕಚೇರಿಯ ಅಬ್ದುಲ್ ನಜೀರ್ ಸಾಬ್ ಸಭಾಂಗಣದಲ್ಲಿ ಇಂದು “ಸುರಕ್ಷಿತ ಇಂಟರ್ ನೆಟ್ ದಿನ” ಆಚರಣೆ ಅಂಗವಾಗಿ ಆಯೋಜಿಸಿದ್ದ ಒಂದು ದಿನದ ಕಾರ್ಯಗಾರವನ್ನು ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಎಂ.ಗಾಯಿತ್ರಿ  ಚಾಲನೆ ನೀಡಿದರು.

ಬಳಿಕ ಮಾತನಾಡಿದ ಅವರು, ದೈನಂದಿನ ಜೀವನದಲ್ಲಿ ತಂತ್ರಜ್ಞಾನ ಹೆಚ್ಚಾಗಿ ಆವರಿಸಿದ್ದು, ತಂತ್ರಜ್ಞಾನದ ಪ್ರಯೋಜನ ಹಾಗೂ ದುಷ್ಪರಿಣಾಮಗಳ ಬಗ್ಗೆ ಅರಿವು ಅಗತ್ಯವಾಗಿದ್ದು ಹಾಗೂ ಅಪರಾಧಗಳನ್ನು ತಡೆಗಟ್ಟಲು, ಸಮಾಜದ ಮೇಲೆ ಕೆಟ್ಟ ಪರಿಣಾಮಗಳ ಬಗ್ಗೆ ಜಾಗೃತಿ ಮೂಡಿಸಲು ಈ ಕಾರ್ಯಾಗಾರ ಅನುಕೂಲವಾಗಿದೆ ಎಂದು ಹೇಳಿದರು.

ತಂತ್ರಜ್ಞಾನ ಬಳಕೆಯಿಂದ ವಿವಿಧ ರೀತಿಯಲ್ಲಿ ಮೋಸ ಮಾಡುವ ಪ್ರವೃತ್ತಿ ಹಾಗೂ ಸಾಮಾಜಿಕ ಜಾಲತಾಣಗಳನ್ನು ದುರ್ಬಳಕೆ ಮಾಡಿಕೊಂಡು ವಂಚಿಸುತ್ತಿರುವುದು ಕಂಡು ಬರುತ್ತಿದೆ. ಇದರಿಂದ ಯಾವುದೇ ಆಮೀಷಗಳಿಗೆ ಒಳಗಾಗದೇ ಅಂತರ್ಜಾಲದ ಉಪಯೋಗಗಳ ಬಗ್ಗೆ ಹೆಚ್ಚಿನ ಅರಿವು ಮೂಡಿಸಿಕೊಂಡು ವಂಚಿತರಾಗದೇ ಬದುಕು ನಡೆಸಿ ಎಂದು ಅರಿವು ಮೂಡಿಸಿದರು.

ಅಪರ ಜಿಲ್ಲಾಧಿಕಾರಿಗಳಾದ ಡಾ.ಪಿ. ಶಿವರಾಜು ಅವರು ಮಾತನಾಡಿ, ಕಾಲಬದಲಾದಂತೆ ತಂತ್ರಜ್ಞಾನವು ಆಲದ ಮರದಂತೆ ಬೆಳೆದಿದ್ದು, ಮನುಷ್ಯನಿಗಿಂತ ಸಾವಿರಪಟ್ಟು ಬೆಳೆಯುತ್ತಿದೆ. ಇದರಿಂದ ತಂತ್ರಜ್ಞಾನದ ಅರಿವು ಮೊದಲು ಅಗತ್ಯವಾಗಿದ್ದು, ದೈನಂದಿನ ಕೆಲಸ ಕಾರ್ಯಗಳಿಗೆ ಅಗತ್ಯವಿರುವ ತಂತ್ರಜ್ಞಾನದ ಅರಿವು, ಮೋಸ ಹೋಗದಂತೆ ಸೈಬರ್ ಜಾಗೃತಿಗಳನ್ನು ಅಳವಡಿಸಿಕೊಳ್ಳಬೇಕು. ಕಚೇರಿಗಳಲ್ಲಿ ನಿಮ್ಮ ವೈಯಕ್ತಿಕ ಲಾಗಿನ್ ಗಳ ಬಗ್ಗೆ ಅರಿವಿನ ಜೊತೆಗೆ ಇತರರಿಗೆ ಲಾಗಿನ್ ಗಳನ್ನು ಶೇರ್ ಮಾಡದಂತೆ ಎಚ್ಚರಿಕೆ ವಹಿಸಿ ಎಂದು ತಿಳಿಸಿದರು.

ಕುವೆಂಪುನಗರದ ಪ್ರಥಮ ದರ್ಜೆ ಕಾಲೇಜಿನ ಸಹಾಯಕ ಪ್ರಾಧ್ಯಾಪಕರಾದ ಶಿಲ್ಪ ರವರು ಸಂಪನ್ಮೂಲ ವ್ಯಕ್ತಗಳಾಗಿ ದೈನಂದಿನ ಜೀವನದಲ್ಲಿ ಇಂಟರ್ ನೆಟ್ ಬಳಕೆ, ಇಂಟರ್ ನೆಟ್ ಅಪಾಯಗಳು, ಆನ್ ಲೈನ್ ವಂಚನೆ, ಸೈಕಾಲಾಜಿಕಲ್ ವಂಚನೆ, ಬ್ಯಾಂಕಿಂಗ್ ವಂಚನೆ, ಮೋಸ ಹೋಗದಂತೆ ಮುನ್ನೇಚರಿಕೆ ಕ್ರಮಗಳ ಕುರಿತು ಅರಿವು ಮೂಡಿಸಿದರು.

ಕಾರ್ಯಕ್ರಮದಲ್ಲಿ ಉಪಕಾರ್ಯದರ್ಶಿ(ಆಡಳಿತ) ಸವಿತಾ, ಮುಖ್ಯ ಲೆಕ್ಕಾಧಿಕಾರಿ ಸಿದ್ದಗಂಗಮ್ಮ, ಜಿಲ್ಲಾ ಸೂಚನಾ ವಿಜ್ಞಾನ ಅಧಿಕಾರಿ ಸುದರ್ಶನ್ ರವರು ಸೇರಿದಂತೆ ಇತರರು ಹಾಜರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ದಕ್ಷಿಣ ಆಫ್ರಿಕಾದಿಂದ ಬನ್ನೇರುಘಟ್ಟ ಮೃಗಾಲಯಕ್ಕೆ ಬಂದ ನಾಲ್ಕು ಚೀತಾ

ಬೆಂಗಳೂರು : ಬನ್ನೇರುಘಟ್ಟ ಮೃಗಾಲಯಕ್ಕೆ ದಕ್ಷಿಣ ಆಫ್ರಿಕಾದಿಂದ ತರಿಸಿಕೊಂಡ 4 ಶಿವಂಗಿ (ಚೀತಾ)ಗಳನ್ನು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ…

6 mins ago

ಕಾಂಗ್ರೆಸ್ ಪಕ್ಷ ಮಹಿಳಾ ಮೀಸಲಾತಿಗೆ ವಿರೋಧಿಸಲ್ಲ: ಗೃಹ ಸಚಿವ ಪರಮೇಶ್ವರ್

ಬೆಂಗಳೂರು- ಕಾಂಗ್ರೆಸ್ ಪಕ್ಷ ಮಹಿಳಾ ಮೀಸಲಾತಿಗೆ ವಿರೋಧ ಇಲ್ಲ. ಕೇಂದ್ರ ಸರ್ಕಾರ ಲೋಕಸಭೆಯ ಸ್ಥಾನಗಳ ಸಂಖ್ಯೆ ಹೆಚ್ಚಿಸುವುದನ್ನು ಮಹಿಳಾ ಮೀಸಲಾತಿಯೊಂದಿಗೆ…

2 hours ago

ಉಡುಪಿ ಶ್ರೀಕೃಷ್ಣನ ದರ್ಶನ ಪಡೆದ ರಾಬರ್ಟ್‌ ವಾದ್ರಾ

ಉಡುಪಿ: ಶ್ರೀಕೃಷ್ಣ ಮಂದಿರಕ್ಕೆ ಸಂಸದೆ ಪ್ರಿಯಾಂಕಾ ಗಾಂಧಿ ಪತಿ ರಾಬರ್ಟ್‌ ವಾದ್ರಾ ಭೇಟಿ ನೀಡಿದರು. ಅವರ ಜನ್ಮದಿನದ ಪ್ರಯುಕ್ತ ಕೆಲವು…

4 hours ago

ಇಂದು ರಾತ್ರಿ ದೇಶವನ್ನು ಉದ್ದೇಶಿಸಿ ಪ್ರಧಾನಿ ಮೋದಿ ಭಾಷಣ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ರಾತ್ರಿ 8.30ಕ್ಕೆ ದೇಶವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಕುರಿತ…

4 hours ago

ಹಾಸನ: ಮೂರು ದಿನಗಳ ಆಪರೇಷನ್‌ ಯಶಸ್ವಿ: ನರಹಂತಕ ಕಾಡಾನೆ ಸೆರೆ

ಹಾಸನ: ಬೇಲೂರು ತಾಲ್ಲೂಕಿನ ಕಾನಳ್ಳಿ ಅರಣ್ಯ ಪ್ರದೇಶದಲ್ಲಿದ್ದ ದೈತ್ಯಾಕಾರದ ನರಹಂತಕ ಕಾಡಾನೆಯನ್ನು ಅರಣ್ಯ ಇಲಾಖೆ ಸಿಬ್ಬಂದಿ ಸೆರೆ ಹಿಡಿದಿದ್ದಾರೆ. ಮೂರನೇ…

5 hours ago

ಏಪ್ರಿಲ್.‌20ರಿಂದ ಸಿಎಂ ಸಿದ್ದರಾಮಯ್ಯ ಮೈಸೂರು, ಚಾಮರಾಜನಗರ ಜಿಲ್ಲಾ ಪ್ರವಾಸ

ಮೈಸೂರು: ಸಿಎಂ ಸಿದ್ದರಾಮಯ್ಯ ಅವರು ಏಪ್ರಿಲ್.‌20 ಹಾಗೂ 21ರಂದು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ಏಪ್ರಿಲ್.‌20ರಂದು ಬೆಳಿಗ್ಗೆ ವಿಶೇಷ ವಿಮಾನದಲ್ಲಿ ಮೈಸೂರಿಗೆ…

5 hours ago