ಮೈಸೂರು: ಮಾಹಿತಿ ತಂತ್ರಜ್ಞಾನ ಮತ್ತು ಎಲೆಕ್ಟ್ರಾನಿಕ್ಸ್ ಮಂತ್ರಾಲಯ ಹಾಗೂ ಜಿಲ್ಲಾ ಮಾಹಿತಿ ಕೇಂದ್ರದ ವತಿಯಿಂದ ಜಿಪಂ ಕಚೇರಿಯ ಅಬ್ದುಲ್ ನಜೀರ್ ಸಾಬ್ ಸಭಾಂಗಣದಲ್ಲಿ ಇಂದು “ಸುರಕ್ಷಿತ ಇಂಟರ್ ನೆಟ್ ದಿನ” ಆಚರಣೆ ಅಂಗವಾಗಿ ಆಯೋಜಿಸಿದ್ದ ಒಂದು ದಿನದ ಕಾರ್ಯಗಾರವನ್ನು ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಎಂ.ಗಾಯಿತ್ರಿ ಚಾಲನೆ ನೀಡಿದರು.
ಬಳಿಕ ಮಾತನಾಡಿದ ಅವರು, ದೈನಂದಿನ ಜೀವನದಲ್ಲಿ ತಂತ್ರಜ್ಞಾನ ಹೆಚ್ಚಾಗಿ ಆವರಿಸಿದ್ದು, ತಂತ್ರಜ್ಞಾನದ ಪ್ರಯೋಜನ ಹಾಗೂ ದುಷ್ಪರಿಣಾಮಗಳ ಬಗ್ಗೆ ಅರಿವು ಅಗತ್ಯವಾಗಿದ್ದು ಹಾಗೂ ಅಪರಾಧಗಳನ್ನು ತಡೆಗಟ್ಟಲು, ಸಮಾಜದ ಮೇಲೆ ಕೆಟ್ಟ ಪರಿಣಾಮಗಳ ಬಗ್ಗೆ ಜಾಗೃತಿ ಮೂಡಿಸಲು ಈ ಕಾರ್ಯಾಗಾರ ಅನುಕೂಲವಾಗಿದೆ ಎಂದು ಹೇಳಿದರು.
ತಂತ್ರಜ್ಞಾನ ಬಳಕೆಯಿಂದ ವಿವಿಧ ರೀತಿಯಲ್ಲಿ ಮೋಸ ಮಾಡುವ ಪ್ರವೃತ್ತಿ ಹಾಗೂ ಸಾಮಾಜಿಕ ಜಾಲತಾಣಗಳನ್ನು ದುರ್ಬಳಕೆ ಮಾಡಿಕೊಂಡು ವಂಚಿಸುತ್ತಿರುವುದು ಕಂಡು ಬರುತ್ತಿದೆ. ಇದರಿಂದ ಯಾವುದೇ ಆಮೀಷಗಳಿಗೆ ಒಳಗಾಗದೇ ಅಂತರ್ಜಾಲದ ಉಪಯೋಗಗಳ ಬಗ್ಗೆ ಹೆಚ್ಚಿನ ಅರಿವು ಮೂಡಿಸಿಕೊಂಡು ವಂಚಿತರಾಗದೇ ಬದುಕು ನಡೆಸಿ ಎಂದು ಅರಿವು ಮೂಡಿಸಿದರು.
ಅಪರ ಜಿಲ್ಲಾಧಿಕಾರಿಗಳಾದ ಡಾ.ಪಿ. ಶಿವರಾಜು ಅವರು ಮಾತನಾಡಿ, ಕಾಲಬದಲಾದಂತೆ ತಂತ್ರಜ್ಞಾನವು ಆಲದ ಮರದಂತೆ ಬೆಳೆದಿದ್ದು, ಮನುಷ್ಯನಿಗಿಂತ ಸಾವಿರಪಟ್ಟು ಬೆಳೆಯುತ್ತಿದೆ. ಇದರಿಂದ ತಂತ್ರಜ್ಞಾನದ ಅರಿವು ಮೊದಲು ಅಗತ್ಯವಾಗಿದ್ದು, ದೈನಂದಿನ ಕೆಲಸ ಕಾರ್ಯಗಳಿಗೆ ಅಗತ್ಯವಿರುವ ತಂತ್ರಜ್ಞಾನದ ಅರಿವು, ಮೋಸ ಹೋಗದಂತೆ ಸೈಬರ್ ಜಾಗೃತಿಗಳನ್ನು ಅಳವಡಿಸಿಕೊಳ್ಳಬೇಕು. ಕಚೇರಿಗಳಲ್ಲಿ ನಿಮ್ಮ ವೈಯಕ್ತಿಕ ಲಾಗಿನ್ ಗಳ ಬಗ್ಗೆ ಅರಿವಿನ ಜೊತೆಗೆ ಇತರರಿಗೆ ಲಾಗಿನ್ ಗಳನ್ನು ಶೇರ್ ಮಾಡದಂತೆ ಎಚ್ಚರಿಕೆ ವಹಿಸಿ ಎಂದು ತಿಳಿಸಿದರು.
ಕುವೆಂಪುನಗರದ ಪ್ರಥಮ ದರ್ಜೆ ಕಾಲೇಜಿನ ಸಹಾಯಕ ಪ್ರಾಧ್ಯಾಪಕರಾದ ಶಿಲ್ಪ ರವರು ಸಂಪನ್ಮೂಲ ವ್ಯಕ್ತಗಳಾಗಿ ದೈನಂದಿನ ಜೀವನದಲ್ಲಿ ಇಂಟರ್ ನೆಟ್ ಬಳಕೆ, ಇಂಟರ್ ನೆಟ್ ಅಪಾಯಗಳು, ಆನ್ ಲೈನ್ ವಂಚನೆ, ಸೈಕಾಲಾಜಿಕಲ್ ವಂಚನೆ, ಬ್ಯಾಂಕಿಂಗ್ ವಂಚನೆ, ಮೋಸ ಹೋಗದಂತೆ ಮುನ್ನೇಚರಿಕೆ ಕ್ರಮಗಳ ಕುರಿತು ಅರಿವು ಮೂಡಿಸಿದರು.
ಕಾರ್ಯಕ್ರಮದಲ್ಲಿ ಉಪಕಾರ್ಯದರ್ಶಿ(ಆಡಳಿತ) ಸವಿತಾ, ಮುಖ್ಯ ಲೆಕ್ಕಾಧಿಕಾರಿ ಸಿದ್ದಗಂಗಮ್ಮ, ಜಿಲ್ಲಾ ಸೂಚನಾ ವಿಜ್ಞಾನ ಅಧಿಕಾರಿ ಸುದರ್ಶನ್ ರವರು ಸೇರಿದಂತೆ ಇತರರು ಹಾಜರಿದ್ದರು.
ಹೆಚ್.ಡಿ.ಕೋಟೆ ತಾಲ್ಲೂಕಿನ ಮಾದಾಪುರ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ಇಂಗ್ಲಿಷ್ ಶಿಕ್ಷಕರು ಇಲ್ಲದೆ ವಿದ್ಯಾರ್ಥಿಗಳು ಈ ಪ್ರೌಢಶಾಲೆಗೆ ಸೇರಲು ಹಿಂದೇಟು ಹಾಕುತ್ತಿದ್ದಾರೆ.…
ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಅವರ ಪತ್ನಿ ಚನ್ನಮ್ಮ ನವರು ಅವರ ರಾಜಕೀಯ ಜೀವನದಲ್ಲಿ ದೊಡ್ಡ ಶಕ್ತಿಯಾಗಿ ನಿಂತಿದ್ದರು. ಅಂದು ತಮ್ಮ…
ಸರ್ಕಾರಿ ಶಾಲಾ ಶಿಕ್ಷಕರು ತಮ್ಮ ವೈಯಕ್ತಿಕ ಮೊಬೈಲ್ ಹಾಗೂ ಇಂಟರ್ನೆಟ್ ಬಳಸಿ ಇಲಾಖೆಯ ಆನ್ಲೈನ್ ಕೆಲಸಗಳನ್ನು ನಿರ್ವಹಿಸುತ್ತಿರುವುದು ಮತ್ತು ಕಚೇರಿ…
ಲಕ್ಷ್ಮೀಕಾಂತ್ ಕೊಮಾರಪ್ಪ ಮಳೆಗಾಲದಲ್ಲಿ ಕತ್ತಲೆಯ ಬದುಕು; ಬೇಸತ್ತು ಗ್ರಾಮವನ್ನೇ ತೊರೆಯುತ್ತಿರುವ ಕೃಷಿಕರು ಸೋಮವಾರಪೇಟೆ: ಅತಿ ಹೆಚ್ಚು ಪ್ರವಾಸಿಗರನ್ನು ಸೆಳೆಯುವ ತಾಲ್ಲೂಕಿನ…
ಮಂಡ್ಯ : ಲಂಚ ಪಡೆಯುತ್ತಿದ್ದಾಗ ಸೆಸ್ಕಾಂ ಉಪ ವಿಭಾಗದ ಸಹಾಯಕ ಇಂಜಿನಿಯರ್ (ಎಇ) ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಘಟನೆ…