ಮೈಸೂರು

29 ವರ್ಷದ ಬಳಿಕ ಬದನವಾಳು ಗ್ರಾಮದಲ್ಲಿ ವೀರಶೈವರು-ದಲಿತರ ಮಧ್ಯೆ ರಾಹುಲ್ ಗಾಂಧಿ ಸಮ್ಮುಖದಲ್ಲಿ ಸಹಭೋಜನ

 ಮೈಸೂರು: ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಸಮ್ಮುಖದಲ್ಲಿ ನಂಜನಗೂಡು ಬದನವಾಳು ಗ್ರಾಮದಲ್ಲಿ 29 ವರ್ಷದ ಬಳಿಕ ವೀರಶೈವ ಮತ್ತು ದಲಿತ ಸಮುದಾಯದ ಜನರಿಂದ ಸಹಭೋಜನ ನಡೆಯಿತು. ಗ್ರಾಮದ ವಿವಿಧ ಸಮುದಾಯದ 28 ಜನರು ಭಾರತ್ ಜೋಡೋ ಅಂಗವಾಗಿ ನಡೆದ ಕಾರ್ಯಕ್ರಮದಲ್ಲಿ ಸಹಭೋಜನ ಮಾಡಿದರು.

ಬದನವಾಳು ಗ್ರಾಮದಲ್ಲಿರುವ ಸಿದ್ದೇಶ್ವರ ಸ್ವಾಮಿ ದೇವಾಲಯದ ಜೀರ್ಣೋದ್ಧಾರಕ್ಕಾಗಿ ಗ್ರಾಮದ ಎಲ್ಲರೂ ದೇಣಿಗೆ ನೀಡಬೇಕೆಂದು ಬೇಡಿಕೆ ಇಡಲಾಗಿತ್ತು. ಆದರೆ, ದೇವಸ್ಥಾನದಲ್ಲಿ ಪ್ರವೇಶ ನೀಡದ ಕಾರಣ ದಲಿತರು ದೇಣಿಗೆ ನೀಡಲು ವಿರೋಧ ಮಾಡಿದ್ದರು. ದೇವಸ್ಥಾನದೊಳಗೆ ಪ್ರವೇಶ ನೀಡಿದರೆ ಮಾತ್ರ ದೇಣಿಗೆ ನೀಡುವುದಾಗಿ ಷರತ್ತು ಹಾಕಿದ್ದರು. ಆದರೆ ದೇಗುಲದ ಸಮಾರಂಭದ ಹೊತ್ತಿಗೆ ದಲಿತರಿಗೆ ಪ್ರವೇಶ ನಿರಾಕರಿಸಿದ್ದರು. ಇದರಿಂದ ರೊಚ್ಚಿಗೆದ್ದ ದಲಿತರು ಸಮಾರಂಭ ರದ್ದಾಗುವಂತೆ ಮಾಡಿದ್ದರು. ಸೇಡು ತೀರಿಸಿಕೊಳ್ಳಲು ಹವಣಿಸುತ್ತಿದ್ದ ವೀರಶೈವರು ದಲಿತರ ಮೇಲೆ ದಾಳಿ ನಡೆಸಿ ಮೂವರನ್ನು ಹತ್ಯೆ ಮಾಡಿದ್ದರು

1993 ರಲ್ಲಿ ದೇವಸ್ಥಾನ ಉದ್ಘಾಟನೆ ವಿಚಾರವಾಗಿ ವೀರಶೈವ ಹಾಗೂ ದಲಿತರ ನಡುವೆ ಗಲಾಟೆ‌ ನಡೆದಿತ್ತು. ಇದೇ ವಿಚಾರವಾಗಿ ಮೂವರು ದಲಿತರ ಹತ್ಯೆಯೂ ನಡೆದಿತ್ತು. ಈ ಘಟನೆ ಹಿನ್ನಲೆಯಲ್ಲಿ ಎರಡು ಸಮುದಾಯದ ನಡುವೆ ವೈಷಮ್ಯ ಮೂಡಿತ್ತು. ಇದಕ್ಕೂ ಮೊದಲು ಬದನವಾಳು ಗ್ರಾಮದಲ್ಲಿ ಮುಚ್ಚಲ್ಪಟ್ಟಿದ್ದ ರಸ್ತೆಯನ್ನು ಶ್ರಮದಾನದ ಮೂಲಕ ಮತ್ತೆ ಎರಡು ಸಮುದಾಯದವರಿಗೆ ಉಪಯೋಗಕ್ಕೆ ಅವಕಾಶ ಕಲ್ಪಿಸಲಾಗಿದೆ.

ಇನ್ನು ಇದೇ ವಿಚಾರವಾಗಿ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ಬದನವಾಳು ಗ್ರಾಮದಲ್ಲಿ ನಡೆದ ಹತ್ಯಾಕಾಂಡದ ಹಿನ್ನೆಲೆಯಲ್ಲಿ ಹೃದಯಗಳನ್ನು ಒಟ್ಟು ಮಾಡುವ ನಿಟ್ಟಿನಲ್ಲಿ ಸವರ್ಣೀಯರು ಹಾಗೂ ದಲಿತರ ನಡುವೆ ಸಂಪರ್ಕ ರಸ್ತೆ ನಿರ್ಮಾಣ ಮಾಡಿ ಶ್ರಮದಾನ ಮಾಡಿದ್ದೇವೆ. ರಾಹುಲ್ ಗಾಂಧಿ ಜೊತೆ ಎರಡು ಸಮಾಜದವರ ಸಹಭೋಜನ ಕೂಡಾ ಮಾಡಲಾಗಿದೆ. ದೇಶದಲ್ಲಿ ಮೊದಲನೇ ಬಾರಿ ಈ ಪ್ರಯತ್ನ ನಡೆದಿದೆ ಎಂದರು.

andolana

Recent Posts

ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಒ

ಮೈಸೂರು: ಇ-ಸ್ವತ್ತು ಮಾಡಿ ಕೊಡಲು ಅರ್ಜಿದಾರರಿಗೆ ಹಣ ನೀಡುವಂತೆ ಒತ್ತಾಯ ಮಾಡಿದ ಗ್ರಾಮ ಪಂಚಾಯಿತಿ ಪಿಡಿಒ ಕುಳ್ಳೇಗೌಡ ನಾಲ್ಕು ಸಾವಿರ…

4 hours ago

ಅರ್ಥಪೂರ್ಣವಾಗಿ ಕನ್ನಡ ರಾಜ್ಯೋತ್ಸವ ಆಚರಣೆ – ಡಾ. ಪಿ ಶಿವರಾಜ್

ಮೈಸೂರು: ಕಳೆದ ಬಾರಿಯಂತೆ ಈ ಬಾರಿಯೂ ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ…

5 hours ago

ನಗರದ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ: ಜಿ ಟಿ ದೇವೇಗೌಡ

ಮೈಸೂರು: ನಗರವನ್ನು ಸ್ವಚ್ಛಗೊಳಿಸುವ ಮೂಲಕ ಜನರ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ ವಾಗಿದ್ದು, ಅವರು ಈ ವಿಷಯದಲ್ಲಿ ನಿರ್ಲಕ್ಷ್ಯ…

6 hours ago

ಹನೂರು: ಗುಂಡಿಮಯವಾದ ರಸ್ತೆ, ಸಾಮಾಜಿಕ ಜಾಲತಾಣ ಮೂಲಕ ಯುವಕ ವ್ಯಂಗ್ಯ

ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಪ್ರಸಿದ್ಧಿ ಪಡೆದಿರುವ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ಮುಖ್ಯ…

6 hours ago

ಇಶಾ ಫೌಂಡೇಶನ್‌ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂಕೋರ್ಟ್‌

ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್‌ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್‌ವಾಶ್‌ ಮಾಡಲಾಗಿದೆ ಎಂಬ…

7 hours ago

ಮಡಿಕೇರಿ: ಮಗನಿಂದಲೇ ತಂದೆಯ ಹತ್ಯೆ..

ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…

8 hours ago