ಮೈಸೂರು

29 ವರ್ಷದ ಬಳಿಕ ಬದನವಾಳು ಗ್ರಾಮದಲ್ಲಿ ವೀರಶೈವರು-ದಲಿತರ ಮಧ್ಯೆ ರಾಹುಲ್ ಗಾಂಧಿ ಸಮ್ಮುಖದಲ್ಲಿ ಸಹಭೋಜನ

 ಮೈಸೂರು: ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಸಮ್ಮುಖದಲ್ಲಿ ನಂಜನಗೂಡು ಬದನವಾಳು ಗ್ರಾಮದಲ್ಲಿ 29 ವರ್ಷದ ಬಳಿಕ ವೀರಶೈವ ಮತ್ತು ದಲಿತ ಸಮುದಾಯದ ಜನರಿಂದ ಸಹಭೋಜನ ನಡೆಯಿತು. ಗ್ರಾಮದ ವಿವಿಧ ಸಮುದಾಯದ 28 ಜನರು ಭಾರತ್ ಜೋಡೋ ಅಂಗವಾಗಿ ನಡೆದ ಕಾರ್ಯಕ್ರಮದಲ್ಲಿ ಸಹಭೋಜನ ಮಾಡಿದರು.

ಬದನವಾಳು ಗ್ರಾಮದಲ್ಲಿರುವ ಸಿದ್ದೇಶ್ವರ ಸ್ವಾಮಿ ದೇವಾಲಯದ ಜೀರ್ಣೋದ್ಧಾರಕ್ಕಾಗಿ ಗ್ರಾಮದ ಎಲ್ಲರೂ ದೇಣಿಗೆ ನೀಡಬೇಕೆಂದು ಬೇಡಿಕೆ ಇಡಲಾಗಿತ್ತು. ಆದರೆ, ದೇವಸ್ಥಾನದಲ್ಲಿ ಪ್ರವೇಶ ನೀಡದ ಕಾರಣ ದಲಿತರು ದೇಣಿಗೆ ನೀಡಲು ವಿರೋಧ ಮಾಡಿದ್ದರು. ದೇವಸ್ಥಾನದೊಳಗೆ ಪ್ರವೇಶ ನೀಡಿದರೆ ಮಾತ್ರ ದೇಣಿಗೆ ನೀಡುವುದಾಗಿ ಷರತ್ತು ಹಾಕಿದ್ದರು. ಆದರೆ ದೇಗುಲದ ಸಮಾರಂಭದ ಹೊತ್ತಿಗೆ ದಲಿತರಿಗೆ ಪ್ರವೇಶ ನಿರಾಕರಿಸಿದ್ದರು. ಇದರಿಂದ ರೊಚ್ಚಿಗೆದ್ದ ದಲಿತರು ಸಮಾರಂಭ ರದ್ದಾಗುವಂತೆ ಮಾಡಿದ್ದರು. ಸೇಡು ತೀರಿಸಿಕೊಳ್ಳಲು ಹವಣಿಸುತ್ತಿದ್ದ ವೀರಶೈವರು ದಲಿತರ ಮೇಲೆ ದಾಳಿ ನಡೆಸಿ ಮೂವರನ್ನು ಹತ್ಯೆ ಮಾಡಿದ್ದರು

1993 ರಲ್ಲಿ ದೇವಸ್ಥಾನ ಉದ್ಘಾಟನೆ ವಿಚಾರವಾಗಿ ವೀರಶೈವ ಹಾಗೂ ದಲಿತರ ನಡುವೆ ಗಲಾಟೆ‌ ನಡೆದಿತ್ತು. ಇದೇ ವಿಚಾರವಾಗಿ ಮೂವರು ದಲಿತರ ಹತ್ಯೆಯೂ ನಡೆದಿತ್ತು. ಈ ಘಟನೆ ಹಿನ್ನಲೆಯಲ್ಲಿ ಎರಡು ಸಮುದಾಯದ ನಡುವೆ ವೈಷಮ್ಯ ಮೂಡಿತ್ತು. ಇದಕ್ಕೂ ಮೊದಲು ಬದನವಾಳು ಗ್ರಾಮದಲ್ಲಿ ಮುಚ್ಚಲ್ಪಟ್ಟಿದ್ದ ರಸ್ತೆಯನ್ನು ಶ್ರಮದಾನದ ಮೂಲಕ ಮತ್ತೆ ಎರಡು ಸಮುದಾಯದವರಿಗೆ ಉಪಯೋಗಕ್ಕೆ ಅವಕಾಶ ಕಲ್ಪಿಸಲಾಗಿದೆ.

ಇನ್ನು ಇದೇ ವಿಚಾರವಾಗಿ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ಬದನವಾಳು ಗ್ರಾಮದಲ್ಲಿ ನಡೆದ ಹತ್ಯಾಕಾಂಡದ ಹಿನ್ನೆಲೆಯಲ್ಲಿ ಹೃದಯಗಳನ್ನು ಒಟ್ಟು ಮಾಡುವ ನಿಟ್ಟಿನಲ್ಲಿ ಸವರ್ಣೀಯರು ಹಾಗೂ ದಲಿತರ ನಡುವೆ ಸಂಪರ್ಕ ರಸ್ತೆ ನಿರ್ಮಾಣ ಮಾಡಿ ಶ್ರಮದಾನ ಮಾಡಿದ್ದೇವೆ. ರಾಹುಲ್ ಗಾಂಧಿ ಜೊತೆ ಎರಡು ಸಮಾಜದವರ ಸಹಭೋಜನ ಕೂಡಾ ಮಾಡಲಾಗಿದೆ. ದೇಶದಲ್ಲಿ ಮೊದಲನೇ ಬಾರಿ ಈ ಪ್ರಯತ್ನ ನಡೆದಿದೆ ಎಂದರು.

andolana

Recent Posts

ಶ್ರೀ ಬೆಟ್ಟಳ್ಳಿ ಮಾರಮ್ಮ ಜಾತ್ರಾ ಮಹೋತ್ಸವ: ವಿಜೃಂಭಣೆಯಿಂದ ನಡೆದ ತಂಪುಜ್ಯೋತಿ ಹಾಗೂ ರಥೋತ್ಸವ

ಮಹಾದೇಶ್ ಎಂ.ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಪಟ್ಟಣದ ಗ್ರಾಮದೇವತೆ ಶ್ರೀ ಬೆಟ್ಟಳ್ಳಿ ಮಾರಮ್ಮ ಜಾತ್ರಾ ಮಹೋತ್ಸವದ ಎರಡನೇ ದಿನ…

38 seconds ago

ನಾಳೆಯಿಂದ ರಾಜ್ಯಾದ್ಯಂತ ವೈದ್ಯರ ಮುಷ್ಕರ: ಸರ್ಕಾರಿ ಆಸ್ಪತ್ರೆ ಒಪಿಡಿ ಬಂದ್‌

ಬೆಂಗಳೂರು: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ರಾಜ್ಯ ಆರೋಗ್ಯ ಇಲಾಖೆ ನೌಕರರು ನಾಳೆಯಿಂದ ಮುಷ್ಕರ ಕೈಗೊಂಡಿದ್ದಾರೆ. ನಾಳೆಯಿಂದ ಆರೋಗ್ಯ ಇಲಾಖೆ…

25 mins ago

ಮಧ್ಯಪ್ರಾಚ್ಯ ಬಿಕ್ಕಟ್ಟು: ಕನ್ನಡಿಗರ ರಕ್ಷಣೆಗೆ ಕೇಂದ್ರ ಸಚಿವ ಜೈಶಂಕರ್‌ಗೆ ಮನವಿ

ನವದೆಹಲಿ: ಇಸ್ರೇಲ್-ಇರಾನ್‌ ಸಂಘರ್ಷ ಮುಂದುವರಿದಿರುವ ಹಿನ್ನೆಲೆಯಲ್ಲಿ ವಿಮಾನಗಳ ಹಾರಾಟ ಸಂಪೂರ್ಣವಾಗಿ ಬಂದ್‌ ಆಗಿದೆ. ಸೌದಿ ಅರೇಬಿಯಾ ಸೇರಿದಂತೆ ವಿವಿಧ ದೇಶಗಳಲ್ಲಿ…

2 hours ago

ಮುಂದುವರಿದ ಇರಾನ್‌-ಇಸ್ರೇಲ್‌ ಸಂಘರ್ಷ: ಬೆಂಗಳೂರಿನಲ್ಲಿ 17 ವಿಮಾನಗಳ ಹಾರಾಟ ರದ್ದು

ಬೆಂಗಳೂರು: ಇರಾನ್‌-ಇಸ್ರೇಲ್‌ ಯುದ್ಧ ಮತ್ತೆ ತೀವ್ರಗೊಂಡ ಪರಿಣಾಮ ಬೆಂಗಳೂರಿಗೆ ಆಗಮಿಸಬೇಕಿದ್ದ 8 ಮತ್ತು ನಿರ್ಗಮಿಸಬೇಕಿದ್ದ 9 ವಿಮಾನಗಳ ಹಾರಾಟ ರದ್ದಾಗಿದೆ.…

2 hours ago

ಡಿ.ಕೆ.ಶಿವಕುಮಾರ್‌ ಅತ್ಯಂತ ಯಶಸ್ವಿ ಅಧ್ಯಕ್ಷ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಕೆಪಿಸಿಸಿ ಅಧ್ಯಕ್ಷರಾಗಿ ಇವತ್ತಿಗೆ ಆರು ವರ್ಷಗಳಾಗಿದ್ದು, ಅತ್ಯಂತ ಯಶಸ್ವಿ ಅಧ್ಯಕ್ಷ ಎನಿಸಿಕೊಂಡಿದ್ದಾರೆ ಎಂದು ಸಚಿವೆ…

3 hours ago

ಸ್ಮೃತಿ ಇರಾನಿ ಕಾಣುತ್ತಿಲ್ಲ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ವ್ಯಂಗ್ಯ

ಬೆಂಗಳೂರು: ಅಡುಗೆ ಅನಿಲದ ಬೆಲೆ ಏರಿಕೆ ಮಾಡುವ ಮೂಲಕ ಮಹಿಳೆಯರಿಗೆ ಉಡುಗೊರೆ ನೀಡಿರುವ ಕೇಂದ್ರ ಸರ್ಕಾರಕ್ಕೆ ಅಭಿನಂದನೆ ಸಲ್ಲಿಸಲು ಬಯಸುವೆ.…

3 hours ago