ಮೈಸೂರು

29 ವರ್ಷದ ಬಳಿಕ ಬದನವಾಳು ಗ್ರಾಮದಲ್ಲಿ ವೀರಶೈವರು-ದಲಿತರ ಮಧ್ಯೆ ರಾಹುಲ್ ಗಾಂಧಿ ಸಮ್ಮುಖದಲ್ಲಿ ಸಹಭೋಜನ

 ಮೈಸೂರು: ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಸಮ್ಮುಖದಲ್ಲಿ ನಂಜನಗೂಡು ಬದನವಾಳು ಗ್ರಾಮದಲ್ಲಿ 29 ವರ್ಷದ ಬಳಿಕ ವೀರಶೈವ ಮತ್ತು ದಲಿತ ಸಮುದಾಯದ ಜನರಿಂದ ಸಹಭೋಜನ ನಡೆಯಿತು. ಗ್ರಾಮದ ವಿವಿಧ ಸಮುದಾಯದ 28 ಜನರು ಭಾರತ್ ಜೋಡೋ ಅಂಗವಾಗಿ ನಡೆದ ಕಾರ್ಯಕ್ರಮದಲ್ಲಿ ಸಹಭೋಜನ ಮಾಡಿದರು.

ಬದನವಾಳು ಗ್ರಾಮದಲ್ಲಿರುವ ಸಿದ್ದೇಶ್ವರ ಸ್ವಾಮಿ ದೇವಾಲಯದ ಜೀರ್ಣೋದ್ಧಾರಕ್ಕಾಗಿ ಗ್ರಾಮದ ಎಲ್ಲರೂ ದೇಣಿಗೆ ನೀಡಬೇಕೆಂದು ಬೇಡಿಕೆ ಇಡಲಾಗಿತ್ತು. ಆದರೆ, ದೇವಸ್ಥಾನದಲ್ಲಿ ಪ್ರವೇಶ ನೀಡದ ಕಾರಣ ದಲಿತರು ದೇಣಿಗೆ ನೀಡಲು ವಿರೋಧ ಮಾಡಿದ್ದರು. ದೇವಸ್ಥಾನದೊಳಗೆ ಪ್ರವೇಶ ನೀಡಿದರೆ ಮಾತ್ರ ದೇಣಿಗೆ ನೀಡುವುದಾಗಿ ಷರತ್ತು ಹಾಕಿದ್ದರು. ಆದರೆ ದೇಗುಲದ ಸಮಾರಂಭದ ಹೊತ್ತಿಗೆ ದಲಿತರಿಗೆ ಪ್ರವೇಶ ನಿರಾಕರಿಸಿದ್ದರು. ಇದರಿಂದ ರೊಚ್ಚಿಗೆದ್ದ ದಲಿತರು ಸಮಾರಂಭ ರದ್ದಾಗುವಂತೆ ಮಾಡಿದ್ದರು. ಸೇಡು ತೀರಿಸಿಕೊಳ್ಳಲು ಹವಣಿಸುತ್ತಿದ್ದ ವೀರಶೈವರು ದಲಿತರ ಮೇಲೆ ದಾಳಿ ನಡೆಸಿ ಮೂವರನ್ನು ಹತ್ಯೆ ಮಾಡಿದ್ದರು

1993 ರಲ್ಲಿ ದೇವಸ್ಥಾನ ಉದ್ಘಾಟನೆ ವಿಚಾರವಾಗಿ ವೀರಶೈವ ಹಾಗೂ ದಲಿತರ ನಡುವೆ ಗಲಾಟೆ‌ ನಡೆದಿತ್ತು. ಇದೇ ವಿಚಾರವಾಗಿ ಮೂವರು ದಲಿತರ ಹತ್ಯೆಯೂ ನಡೆದಿತ್ತು. ಈ ಘಟನೆ ಹಿನ್ನಲೆಯಲ್ಲಿ ಎರಡು ಸಮುದಾಯದ ನಡುವೆ ವೈಷಮ್ಯ ಮೂಡಿತ್ತು. ಇದಕ್ಕೂ ಮೊದಲು ಬದನವಾಳು ಗ್ರಾಮದಲ್ಲಿ ಮುಚ್ಚಲ್ಪಟ್ಟಿದ್ದ ರಸ್ತೆಯನ್ನು ಶ್ರಮದಾನದ ಮೂಲಕ ಮತ್ತೆ ಎರಡು ಸಮುದಾಯದವರಿಗೆ ಉಪಯೋಗಕ್ಕೆ ಅವಕಾಶ ಕಲ್ಪಿಸಲಾಗಿದೆ.

ಇನ್ನು ಇದೇ ವಿಚಾರವಾಗಿ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ಬದನವಾಳು ಗ್ರಾಮದಲ್ಲಿ ನಡೆದ ಹತ್ಯಾಕಾಂಡದ ಹಿನ್ನೆಲೆಯಲ್ಲಿ ಹೃದಯಗಳನ್ನು ಒಟ್ಟು ಮಾಡುವ ನಿಟ್ಟಿನಲ್ಲಿ ಸವರ್ಣೀಯರು ಹಾಗೂ ದಲಿತರ ನಡುವೆ ಸಂಪರ್ಕ ರಸ್ತೆ ನಿರ್ಮಾಣ ಮಾಡಿ ಶ್ರಮದಾನ ಮಾಡಿದ್ದೇವೆ. ರಾಹುಲ್ ಗಾಂಧಿ ಜೊತೆ ಎರಡು ಸಮಾಜದವರ ಸಹಭೋಜನ ಕೂಡಾ ಮಾಡಲಾಗಿದೆ. ದೇಶದಲ್ಲಿ ಮೊದಲನೇ ಬಾರಿ ಈ ಪ್ರಯತ್ನ ನಡೆದಿದೆ ಎಂದರು.

andolana

Recent Posts

ಮಹಪಂಚ್‌ ಕಾರ್ಟೂನ್‌

ಮಹಪಂಚ್‌ ಕಾರ್ಟೂನ್‌ |ಜುಲೈ 8 ಬುಧವಾರ  

2 hours ago

ಮಲೆನಾಡಿನಲ್ಲಿ ಮಳೆಯ ಅಬ್ಬರ: ಜೋಗ ಜಲಪಾತಕ್ಕೆ ಜೀವಕಳೆ

ಶಿವಮೊಗ್ಗ: ಮಲೆನಾಡಿನಲ್ಲಿ ಭಾರೀ ಮಳೆಯಾಗುತ್ತಿರುವ ಪರಿಣಾಮ ವಿಶ್ವವಿಖ್ಯಾತ ಜೋಗ ಜಲಪಾತ ಜೀವಕಳೆ ಪಡೆದುಕೊಂಡಿದೆ. ಕಳೆದ ನಾಲ್ಕೈದು ದಿನಗಳಿಂದ ಶಿವಮೊಗ್ಗದಲ್ಲಿ ಭಾರೀ…

17 hours ago

ಕೊಡಗು ಜಿಲ್ಲೆಯ ಮಳೆ ವಿವರ

ಕೊಡಗು: ಜಿಲ್ಲೆಯಲ್ಲಿ ಕಳೆದ ನಾಲ್ಕೈದು ದಿನಗಳಿಂದ ಧಾರಾಕಾರ ಮಳೆಯಾಗುತ್ತಿದ್ದು, ರೈತರ ಮೊಗದಲ್ಲಿ ಮಂದಹಾಸ ಮನೆಮಾಡಿದೆ. ಜಿಲ್ಲೆಯ ಮಳೆಯ ವಿವರ ಈ…

18 hours ago

ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ-2026: ಗಜಪಡೆ ಆಯ್ಕೆ ಪ್ರಕ್ರಿಯೆಗೆ ಚಾಲನೆ

ಮಡಿಕೇರಿ: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಗಜಪಡೆಗೆ ಆಯ್ಕೆ ಪ್ರಕ್ರಿಯೆಗೆ ಅಧಿಕೃತ ಚಾಲನೆ ಸಿಕ್ಕಿದೆ. ಇದರ ಭಾಗವಾಗಿ…

19 hours ago

ವಯನಾಡಿನಲ್ಲಿ ಮೇಘಸ್ಫೋಟ: ಇಬ್ಬರು ಕಾರ್ಮಿಕರು ಜೀವಂತ ಸಮಾಧಿ: 30 ಮಂದಿ ನಾಪತ್ತೆ

ತಿರುವನಂತಪುರಂ: ವಯನಾಡಿನಲ್ಲಿ ಮತ್ತೊಂದು ದುರಂತ ಸಂಭವಿಸಿದ್ದು, ಮೆಪ್ಪಾಡಿಯಲ್ಲಿ ಭಾರೀ ಮಳೆಯಿಂದಾಗಿ ಭೂಕುಸಿತ ಉಂಟಾಗಿದೆ. ವಯನಾಡಿನ ಸುರಂಗ ನಿರ್ಮಾಣ ಪ್ರದೇಶದ ಮೀನಾಕ್ಷಿ…

19 hours ago

ಬ್ರಿಡ್ಜ್‌ ಮ್ಯಾನ್‌ ಖ್ಯಾತಿಯ ಪದ್ಮಶ್ರೀ ಡಾ.ಗಿರೀಶ್‌ ಭಾರದ್ವಾಜ್‌ ನಿಧನ

ಮಂಗಳೂರು: ತೂಗುಸೇತುವೆಗಳ ಸರದಾರ, ಸುಳ್ಯದ ವಿಶ್ವೇಶ್ವರಯ್ಯ ಎಂದೇ ಖ್ಯಾತರಾಗಿದ್ದ ಪದ್ಮಶ್ರೀ ಪುರಸ್ಕೃತ ಎಂಜಿನಿಯರ್‌ ಡಾ.ಗಿರೀಶ್‌ ಭಾರದ್ವಾಜ್‌ ಅವರು ಇಂದು ನಿಧನರಾಗಿದ್ದಾರೆ.…

20 hours ago