ಮೈಸೂರು

ಆನೆ,ಚಿರತೆ,ಹುಲಿ ದಾಳಿ ಬಳಿಕ ಹಂದಿ ಕಾಟ : ಕಾಡು ಹಂದಿ ದಾಳಿಗೆ ರೈತ ಬಲಿ

ನಂಜನಗೂಡು : ಆನೆ, ಚಿರತೆ, ಹುಲಿ ಆಯ್ತು ಈಗ ಹಂದಿ ಕಾಟ ಹೆಚ್ಚಾಗಿದ್ದು, ಕಾಡು ಹಂದಿ ದಾಳಿಗೆ ರೈತನೋರ್ವ ಬಲಿಯಾಗಿರುವ ಘಟನೆ ನಂಜನಗೂಡು ತಾಲ್ಲೂಕಿನ ಹಾಡ್ಯ ಗ್ರಾಮದಲ್ಲಿ ನಡೆದಿದೆ.

ಹುಲ್ಲಹಳ್ಳಿ ಹೋಬಳಿಯ ಹಾಡ್ಯ ಗ್ರಾಮದ ರೈತ ರಂಗಸ್ವಾಮಿ (35) ಕಾಡು ಹಂದಿ ದಾಳಿಗೆ ಬಲಿಯಾಗಿರುವ ಮೃತ ದುರ್ದೈವಿ. ಹಾಡ್ಯ ಗ್ರಾಮದಿಂದ ಬೈಕಿನಲ್ಲಿ ಹುರ ಗ್ರಾಮಕ್ಕೆ ಹೋಗಿ, ವಾಪಸ್ ಸ್ವಗ್ರಾಮಕ್ಕೆ ಬರುತ್ತಿರುವ ಸಂದರ್ಭದಲ್ಲಿ ರಸ್ತೆ ಬದಿಯ ಪೊದೆಯಲ್ಲಿ ಅಡಗಿದ್ದ ಕಾಡುಹಂದಿ ಬೈಕ್ ನಲ್ಲಿ ಬರುತ್ತಿದ್ದ ರಂಗಸ್ವಾಮಿ ಮೇಲೆ ಏಕಾಏಕಿ ದಾಳಿ ಮಾಡಿದೆ. ಕಿರುಚಾಟದ ಶಬ್ದ ಕೇಳಿ ಅಕ್ಕಪಕ್ಕದ ಸಾರ್ವಜನಿಕರು ಸ್ಥಳಕ್ಕೆ ಆಗಮಿಸಿ ನೋಡಿದಾಗ, ಕಾಡು ಹಂದಿ ಅರೆಬರೆ ತಿವಿದು, ಗಂಭೀರ ಗಾಯಗೊಳಿಸುತ್ತಿದ್ದು, ಸಾರ್ವಜನಿಕರನ್ನು ಕಂಡು ಪರಾರಿಯಾಗಿದೆ.

ಇದನ್ನೂ ಓದಿ:-ನವೆಂಬರ್‌ ಕ್ರಾಂತಿ ಬಗ್ಗೆ ಎಚ್‌.ಡಿ.ಕುಮಾರಸ್ವಾಮಿ ಹೇಳಿದ್ದೇನು?

ತಕ್ಷಣವೇ ರಂಗಸ್ವಾಮಿಯನ್ನು ಮೈಸೂರಿನ ಕೆ.ಆರ್ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಘಟನೆ ಸಂಬಂಧ ಹುಲ್ಲಹಳ್ಳಿ ಪೋಲಿಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ವಿಷಯ ತಿಳಿದು ಮೈಸೂರಿನ ಕೆ.ಆರ್ ಆಸ್ಪತ್ರೆಗೆ ಹುಲ್ಲಹಳ್ಳಿ ಅರಣ್ಯ ಇಲಾಖೆ ವಿಭಾಗದ ಡಿ.ಆರ್.ಎಫ್.ಒ ವಿನೋದ್ ಕುಮಾರ್ ಮತ್ತು ಸಿಬ್ಬಂದಿ ಭೇಟಿ ನೀಡಿ ಮಾಹಿತಿ ಕಲೆ ಹಾಕುತ್ತಿದ್ದಾರೆ. ಮೃತ ಕುಟುಂಬಕ್ಕೆ ಸರ್ಕಾರ ಸೂಕ್ತ ಪರಿಹಾರ ನೀಡಬೇಕು ಎಂದು ರೈತರು ಒತ್ತಾಯಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಸುಗಮ ಸಂಗೀತದ ಅದ್ಬುತ ಗಾಯಕ ಮಡಿಕೇರಿ ನಾಗೇಂದ್ರ

ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…

2 hours ago

ಸುಮ್ಮನಿದ್ದರೂ ಪರಿಣಮಿಸುವ ರಂಗಭೂಮಿಯ ಝೆನ್ ಗುರು – ಜಂಬೆ ಮೇಷ್ಟ್ರು

ಸತೀಶ್ ತಿಪಟೂರು ಕರ್ನಾಟಕದ ಯಾವುದೇ ಭಾಗದಲ್ಲಿ ಜಂಬೆ ಮೇಷ್ಟ್ರ ಹಿರಿ - ಕಿರಿಯ ವಿದ್ಯಾರ್ಥಿಗಳು ಮೂರ್ನಾಲ್ಕು ಜನ ಒಂದೆಡೆ ಸೇರಿದರೆಂದರೆ…

2 hours ago

ಮಕ್ಕಳ ಮನದಂಗಳದಲ್ಲಿ ಗಾಂಧಿ ಚಿಂತನೆಯ ಬೇರುಗಳು

ಪ್ರತಿ ಭಾರತೀಯರ ಎದೆ ಬಡಿತದ ಚೇತನ ಗಾಂಧೀಜಿ:  ಕೈಯಲ್ಲೊಂದು ಕೋಲು ಹಿಡಿದು, ದುಂಡು ಕನ್ನಡಕ ಧರಿಸಿ, ಸತ್ಯ, ಅಹಿಂಸೆಯ ಅಸದಿಂದ…

3 hours ago

ಸುಬ್ಬಮ್ಮ ಜೋಯಿಸ್ ಮೈಸೂರಿನಲ್ಲಿ ತ್ರಿವರ್ಣಧ್ವಜ ಹಾರಿಸಿದ್ದು

ಸೋನಿಯಾ ಎಮ್.ವಿ., ಉಪನ್ಯಾಸಕಿ, ಟೆರಿಷಿಯನ್ ಕಾಲೇಜ್ ಎಮ್. ಎನ್. ಜೋಯಿಸ್ ಮತ್ತು ಸುಬ್ಬಮ್ಮ ಜೋಯಿಸ್ ಮೈಸೂರಿನ ಸ್ವತಂತ್ರ ಹೋರಾಟಗಾರರಲ್ಲಿ ತಮ್ಮ…

3 hours ago

ಉರಿ ಉಂಡ ಕರ್ಪೂರ ಟಿ.ಎಸ್.ಸುಬ್ಬಣ್ಣ

ಪರಮಶಿವ ನಡುಬೆಟ್ಟ ಬ್ರಿಟಿಷರ ವಿರುದ್ಧ ಸ್ವಾತಂತ್ರ್ಯ ಹೋರಾಟಗಾರರು ಧ್ವಜ ಸತ್ಯಾಗ್ರಹ ಕಾರ್ಯ ಕ್ರಮವನ್ನು ಹಮ್ಮಿ ಕೊಂಡಿದ್ದರು. ಈ ಧ್ವಜ ಸತ್ಯಾಗ್ರಹವನ್ನು…

3 hours ago

ಬ್ಯಾರಿಸ್ಟರ್ ಏನೋ ಆದೆ ಆದರೆ ಆಮೇಲೆ?

ಗಾಂಧಿ ಮಹಾತ್ಮನ ಆತ್ಮಕಥೆಗೆ ಶತಮಾನೋತ್ಸವದ ಸಂದರ್ಭದಲ್ಲಿ ‘ಆಂದೋಲನ’ ದಿನಪತ್ರಿಕೆಯ ಗಾಂಧಿ ಅಭಿಯಾನ ನಾನು ಇಂಗ್ಲೆಂಡಿಗೆ ಹೋದ ಉದ್ದೇಶವನ್ನು ಬ್ಯಾರಿಸ್ಟರ್ ಆಗುವುದನ್ನು, ಕುರಿತು ನಾನು…

3 hours ago