ಮೈಸೂರು: ರಾಜ್ಯದಲ್ಲಿ ಸಿದ್ದರಾಮಯ್ಯನವರ ಸರ್ಕಾರ ಬಂದ ಮೇಲೆ ಮುಸ್ಲಿಮರು ಚಿಗುರಿಕೊಂಡಿದ್ದಾರೆ. ಕರ್ನಾಟಕದಲ್ಲಿ ಬಾಂಬ್ ಸ್ಪೋಟ ಆಗುತ್ತಿದೆ. ಸಿದ್ದರಾಮಯ್ಯನವರು ಮುಸ್ಲಿಮರ ಓಲೈಕೆ, ತುಷ್ಠಿಕರಣದಲ್ಲಿ ತೊಡಗಿದ್ದಾರೆ ಎಂದು ಚಿಂತಕ ಚಕ್ರವರ್ತಿ ಸೂಲಿಬೆಲೆ ಆಕ್ರೋಶ ವ್ತಕ್ತಪಡಿಸಿದರು.
ನಗರದ ಕರ್ನಾಟಕ ವಸ್ತುಪ್ರದರ್ಶನ ಪ್ರಾಧಿಕಾರದ ಆವರಣದಲ್ಲಿರುವ ರಂಗಮಂಟಪದಲ್ಲಿ ನಮೋ ಬಿಗ್ರೇಡ್-ಮೈಸೂರು ವತಿಯಿಂದ ಸೋಮವಾರ ಅಯೋಜಿಸಿದ್ದ ‘ನಮೋಭಾರತ’ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಮೋದಿ ಅಧಿಕಾರಕ್ಕೆ ಬಂದ ನಂತರ ದೇಶದಲ್ಲಿ ಸಾಕಷ್ಟು ಬದಲಾವಣೆಯಾಗಿದೆ. ಯುವಕರು ದೇಶ ಭಕ್ತಿಯನ್ನು ಬೆಳೆಸಿಕೊಳ್ಳುವ ಮೂಲಕ ಸುಭದ್ರ ಭಾರತ ನಿರ್ವಾಣಕ್ಕೆ ಮೋದಿ ಅವರ ಜೊತೆ ಕೈ ಜೋಡಿಸಬೇಕು. ೨೦೨೪ರ ಲೋಕಸಭಾ ಚುನಾವಣೆಯಲ್ಲಿ ಕಳೆದ ಬಾರಿಗಿಂತಲೂ ಹೆಚ್ಚಿನ ಸ್ಥಾನಗಳನ್ನು ಬಿಜೆಪಿ ಪಡೆಯಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ನರೇಂದ್ರ ಮೋದಿ ಬರುವುದಕ್ಕೂ ಮುನ್ನ ಹಿಂದೂ ಎಂದು ಅಂತ ಹೇಳುವುದಕ್ಕೂ ಹೆದರುತ್ತಿದ್ದ ಆ ಕಾಲದಲ್ಲಿ ಪ್ರಸ್ತುತ ಇಂದಿನ ದಿನದಲ್ಲಿ ಹಿಂದೂ ಎಂದು ಧೈರ್ಯವಾಗಿ ಹೇಳುವುದಕ್ಕೆ ಮೋದಿ ಅವರೇ ಕಾರಣಕರ್ತರಾಗಿದ್ದಾರೆ. ನಮ್ಮ ದೇಶವನ್ನು ಕಡೆಗಣಿಸುತ್ತಿದ್ದ ಜಗತ್ತಿನ ರಾಷ್ಟ್ರಗಳು ಮೋದಿಯವರ ಸಮರ್ಥ ನಾಯಕತ್ವದ ಪರಿಣಾಮದಿಂದಾಗಿ ಇಂದು ರಾಜ ಮರ್ಯಾದೆಯನ್ನು ನೀಡುವಂತಾಗಿದೆ ಎಂದರು.
ಜಗತ್ತಿನಲ್ಲೇ ಅತ್ಯಂತ ದೊಡ್ಡ ಪರಿವಾರ ಇದ್ದರೆ ಅದು ಮೋದಿ ಪರಿವಾರ.ಮೊದಲ ಸೀಟು ಬಿಜೆಪಿಗೆ ಬಂದಿದೆ. ಸೂರತ್ ನಲ್ಲಿ ಬಿಜೆಪಿ ಅಭ್ಯರ್ಥಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ೪೦೦ ಕಮಲದಲ್ಲಿ ಮೈಸೂರಿನ ಒಂದು ಕಮಲ ಇರಬೇಕು. ನರೇಂದ್ರ ಮೋದಿ ಭಾರತವನ್ನು ದಕ್ಷೀಣಾರ್ಧ ಗೋಳದ ನಾಯಕನನ್ನಾಗಿ ಮಾಡಿದ್ದಾರೆ. ಸ್ವಾತಂತ್ರ್ಯದ ನಂತರ ಬಂದ ಎಲ್ಲಾ ಸರ್ಕಾರಗಳು ಮಾಡದ ಕೆಲಸಗಳನ್ನು ಕೇವಲ ೧೦ ವರ್ಷಗಳಲ್ಲಿ ಮಾಡಿ ದೇಶವನ್ನು ಜಗತ್ತಿಗೆ ಗುರುತಿಸುವಂತೆ ಮಾಡಿರುವ ಶ್ರೇಯಸ್ಸು ಅವರಿಗೆ ಸಲ್ಲುತ್ತದೆ.
ಹೀಗಾಗಿ ಭವ್ಯ ಭಾರತದ ಭವಿಷ್ಯಕ್ಕೆ ಮತ್ತೆ ನರೇಂದ್ರ ಮೋದಿ ಅತ್ಯವಶ್ಯಕವಾಗಿದ್ದಾರೆ. ಮೈಸೂರಿನ ಲೋಕಸಭೆಗೂ ಕಮಲ ಅರಳಬೇಕೆಂದರು.
ಕೊಡಗು: ಕಾಫಿ ತೋಟದಲ್ಲಿ ಕಾಡಾನೆ ಮೃತದೇಹ ಪತ್ತೆಯಾಗಿದೆ. ಕುಂಜಿಲ-ಕಕ್ಕಬೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಾಲಡಿ ಗ್ರಾಮದಲ್ಲಿ ಘಟನೆ ನಡೆದಿದ್ದು, ಪರದಂಡ…
ಶ್ರೀರಂಗಪಟ್ಟಣ: ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆ.ಆರ್.ಎಸ್ ಗ್ರಾಮದಲ್ಲಿ ತಡರಾತ್ರಿ ಭೀಕರ ಕೊಲೆ ನಡೆದಿದ್ದು, ಯುವಕನೊಬ್ಬನನ್ನು ದುಷ್ಕರ್ಮಿಗಳು ಅತ್ಯಂತ ಬರ್ಬರವಾಗಿ…
ಗುಂಡ್ಲುಪೇಟೆ: ಪಟ್ಟಣ ಮತ್ತು ಮಲ್ಲಯ್ಯನಪುರ ನಡುವಿನ ಅನ್ಗಲ್ ಗುಡ್ಡದ ತಪ್ಪಲಿನ ಪ್ರದೇಶದಲ್ಲಿ ಅಪರೂಪದ ಥೋರಿಯಂ ನಿಕ್ಷೇಪ ಪತ್ತೆಯಾಗಿದೆ. ಹಿಂದಿನ ವರ್ಷ…
ಹೆಚ್.ಡಿ.ಕೋಟೆ ತಾಲ್ಲೂಕಿನ ಮಾದಾಪುರ ಗ್ರಾಮದ ಮೈಸೂರು -ಮಾನಂದವಾಡಿ ಮುಖ್ಯ ರಸ್ತೆಯಲ್ಲಿರುವ ಕರ್ನಾಟಕ ಗ್ರಾಮೀಣ ಬ್ಯಾಂಕ್ ಶಾಖೆ ಖಾಸಗಿ ಕಟ್ಟಡದ ಎರಡನೇ…
ಅಯೋಧ್ಯೆಯ ರಾಮ ಮಂದಿರವೂ ಸೇರಿದಂತೆ ದೇಶದ ವಿವಿಧ ದೇವಾಲಯಗಳಲ್ಲಿ ಕಾಣಿಕೆ ಹಣ, ದೇವರಿಗೆ ಭಕ್ತರು ಕಾಣಿಕೆ ರೂಪದಲ್ಲಿ ಸಲ್ಲಿಸುವ ಚಿನ್ನಾಭರಣಗಳು…
ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ(ಸೆಸ್ಕ್)ದವರು ಮೈಸೂರು ನಗರದ ವಿವಿಧೆಡೆ ಭೂಗತ ಕೇಬಲ್ಗಳನ್ನು ಅಳವಡಿಸುತ್ತಿದ್ದು, ಕಾಮಗಾರಿ ಪ್ರಗತಿಯಲ್ಲಿದೆ. ಸೆಸ್ಕ್ ಯುಜಿ ಕೇಬಲ್…