ಮೈಸೂರು

7ನೇ ದಿನಕ್ಕೆ ಕಾಲಿಟ್ಟ ರೈತರ ಅಹೋರಾತ್ರಿ ಧರಣಿ

ಸರ್ಕಾರ ಹಾಗೂ ಸಚಿವರನ್ನು ಅಣಕಿಸುವ ಭಜನೆ ಹಾಡುಗಳನ್ನು ಹಾಡಿ ಆಕ್ರೋಶ

ಮೈಸೂರು: ಕಬ್ಬಿನ ಬೆಲೆ ನಿಗದಿಗಾಗಿ ಕಬ್ಬು ಬೆಳೆಗಾರರ ಸಂಘದವರು ನಡೆಸುತ್ತಿರುವ ಅಹೋರಾತ್ರಿ ಧರಣಿ ಪ್ರತಿಭಟನೆ ೭ನೇ ದಿನಕ್ಕೆ ಕಾಲಿಟ್ಟಿದ್ದು, ಭಾನುವಾರ ಸರ್ಕಾರ ಹಾಗೂ ಸಚಿವರನ್ನು ಅಣಕಿಸುವ ಭಜನೆ ಹಾಡುಗಳನ್ನು ಹಾಡಿ ರೈತರು ಆಕ್ರೋಶ ವ್ಯಕ್ತಪಡಿಸಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ರೈತರು ಅಹೋರಾತ್ರಿ ಧರಣಿ ನಡೆಸುತ್ತಿದ್ದರೂ ಸೌಜನ್ಯಕ್ಕಾದರೂ ಜಿಲ್ಲಾ ಉಸ್ತುವಾರಿ ಸಚಿವರು ಧರಣಿ ಸ್ಥಳಕ್ಕೆ ಭೇಟಿ ನೀಡಿ ರೈತರ ಸಮಸ್ಯೆಗಳನ್ನು ಆಲಿಸಲಿಲ್ಲ. ಉಸ್ತುವಾರಿ ಸಚಿವರಾಗಿ ಜಿಲ್ಲೆಗೆ ಬಂದ ಮೇಲೆ ರೈತರ ಕುಂದು ಕೊರತೆಗಳ ಸಭೆಯನ್ನು ಈವರೆಗೂ ಕರೆದಿಲ್ಲ ಎಂದು ರೈತರು ಭಜನೆ ಮೂಲಕ ಜಿಲ್ಲೆಯಿಂದ ದೂರವಾದ ಮಂತ್ರಿ ಯಾತಕೆ, ರೈತರನ್ನು ಮರೆತೆ ಯಾತಕೆ, ಜನರಿಗೆ ಏನು ಮಾಡಿದೆ, ಇದು ನ್ಯಾಯವೇ? ಎಂದು ಹಾಡುತ್ತಾ ಸರ್ಕಾರ, ಮಂತ್ರಿಗಳನ್ನು ಅಣಕಿಸಿ ಪ್ರತಿಭಟನೆ ನಡೆಸಿದರು.

ಕಳೆದ ನಾಲ್ಕು ತಿಂಗಳುಗಳಿಂದ ಕಬ್ಬು ಬೆಳೆಗಾರರು ಕಬ್ಬಿನ ದರದಲ್ಲಿ ಅನ್ಯಾಯವಾಗಿದೆ ಎಂದು ಹೋರಾಟ ಮಾಡುತ್ತಿದ್ದರೂ ಇದರ ಬಗ್ಗೆ ಯಾರೂ ಮಾತನಾಡಿಲ್ಲ. ಕಬ್ಬು ಬೆಳೆಗಾರರು ರಾಜ್ಯಾದ್ಯಂತ ಜಿಲ್ಲಾಧಿಕಾರಿ ಕಚೇರಿಗಳ ಮುಂದೆ ನಿರಂತರ ಅಹೋರಾತ್ರಿ ಧರಣಿ ನಡೆಸುತ್ತಿದ್ದರೂ ಸರ್ಕಾರ ವಿಳಂಬ ನೀತಿ ಅನುಸರಿಸುತ್ತಿದೆ. ಇವರನ್ನು ಶಾಸಕರು, ಸಚಿವರು ಅಂತ ಹೇಳಬೇಕಾ? ರೈತ ದ್ರೋಹಿಗಳು, ಸಕ್ಕರೆ ಕಾರ್ಖಾನೆ ಗುಲಾಮರು ಅಂತ ಕರಿಬೇಕಾ?, ಶುಗರ್ ಮಾಫಿಯಾ ದೇಶದಲ್ಲಿ ಬಹುದೊಡ್ಡ ಮಾಫಿಯಾ ಆಗಿದೆ. ಈ ಮಾಫಿಯಾ ಕಬ್ಬು ಬೆಳೆಗಾರರನ್ನು ನಾಶ ಮಾಡುತ್ತಿದೆ ಎಂದು ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್ ಆಕ್ರೋಶ ವ್ಯಕ್ತಪಡಿಸಿದರು.

ಅತ್ತಹಳ್ಳಿ ದೇವರಾಜ್, ಬರಡನಪುರ ನಾಗರಾಜ್, ಕಿರಗಸೂರು ಶಂಕರ್, ಚುಂಚರಾಯನಹುಂಡಿ ಮಂಜು, ಸಿದ್ದರಾಮು, ನಂಜುಂಡಸ್ವಾಮಿ, ಮಲ್ಲಪ್ಪ, ಮಹದೇವ ಸ್ವಾಮಿ, ಮಹದೇವಪ್ಪ, ಶಿವಮೂರ್ತಿ ಕಾಳಸ್ವಾಮಿ, ಮಾರ್ಬಳ್ಳಿ ನೀಲಕಂಠಪ್ಪ, ಕೆಆರ್‌ಎಸ್ ರಾಮೇಗೌಡ, ಅಂಬಳೆ ಮಂಜುನಾಥ್ ಮುಂತಾದವರು ಹಾಜರಿದ್ದರು.

andolana

Recent Posts

ರಾಜ್ಯದಲ್ಲಿ ಮುಂದಿನ 7 ದಿನಗಳ ಕಾಲ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಏಳು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೋಲಾರ, ಹಾಸನ,…

51 mins ago

ಓದುಗರ ಪತ್ರ: ‘ಮನೆಗೊಂದು ಗ್ರಂಥಾಲಯ’ ಯೋಜನೆ ಯಶಸ್ವಿಯಾಗಲಿ

‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…

4 hours ago

ಓದುಗರ ಪತ್ರ: ವಿದ್ಯಾರ್ಥಿ ಬಸ್ ಪಾಸ್ ದೂರ ಮಿತಿ ಹೆಚ್ಚಿಸಲಿ

ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…

4 hours ago

ಓದುಗರ ಪತ್ರ: ಶಾಲಾ ಶಿಕ್ಷಣದಲ್ಲಿ ಕೃಷಿ ಬಗ್ಗೆ ಪಠ್ಯ ಅಳವಡಿಸಿ

ಮನುಷ್ಯನಿಗೆ ಅತ್ಯಗತ್ಯವಾಗಿರುವುದು ಆಹಾರ. ಇದಕ್ಕೆ ಕೃಷಿಯೇ ಮೂಲ. ರೈತನ ಪರಿಶ್ರಮದಿಂದ ಜನರು ನೆಮ್ಮದಿಯಿಂದ ಊಟ ಮಾಡಲು ಸಾಧ್ಯವಾಗಿದೆ. ಆಧುನಿಕ ಆವಿಷ್ಕಾರಗಳಿಂದ…

4 hours ago

ಸೌಹಾರ್ದ ಸಮಾಜಕ್ಕಾಗಿ ಮಕ್ಕಳಲ್ಲಿ ಭಾವೈಕ್ಯತೆ ಬಿತ್ತನೆ ಅತ್ಯಗತ್ಯ

ಟಿ.ಕೆ.ಹರೀಶ್ ತಂತ್ರಜ್ಞಾನ ಬಳಕೆ ಅತಿಯಾದರೆ ಮಕ್ಕಳಲ್ಲಿ ಸಹಾನುಭೂತಿ ಕ್ಷೀಣ  ಮಾನವೀಯತೆಯ ಮೂಲ ಮಂತ್ರವೇ ಸೌಹಾರ್ದತೆ. ಇದು ಕೇವಲ ಸಹಬಾಳ್ವೆಯಲ್ಲ, ಬದಲಿಗೆ…

4 hours ago

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ: ಸೋಲಿನಿಂದ ಸೊರಗಿದ ದೀದಿಯನ್ನು ಕೈಬಿಟ್ಟ ಆಪ್ತರು

ರಾಜಕಾರಣವೀಗ ಅಧಿಕಾರದಾಹಿಗಳ ಅಡ್ಡ ಆಗಿಹೋಗಿದೆ. ಅಧಿಕಾರವಿಲ್ಲದೆ ಯಾರಿಗೂ ಯಾವ ಸೈದ್ಧಾಂತಿಕ ರಾಜಕಾರಣವೂ ಬೇಡವಾಗಿದೆ. ಕಾಲ ಸರಿಯುತ್ತಿದ್ದಂತೆ ನಿತ್ಯದ ರಾಜಕಾರಣದ ಬದಲಾವಣೆಯೂ…

4 hours ago