ಮೈಸೂರು: ಕಾಡಾನೆಗಳು ಊರಿಗೆ ಬರದಂತೆ ಅರಣ್ಯ ಇಲಾಖೆಯು ಎಐ ಆಧಾರಿರ ಕೂಗು ಕ್ಯಾಮರಾವನ್ನು ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯಲ್ಲಿ ಅಳವಡಿಸಿದೆ.
ನಾಗರಹೊಳೆಯ ವೀರನಹೊಸಳ್ಳಿ ವಲಯ ವ್ಯಾಪ್ತಿಯ ಬೊಮ್ಮಲಾಪುರ ಹಾಡಿಯ ಗಡಿಯಲ್ಲಿ ಕೃತಕ ಬುದ್ಧಿಮತ್ತೆ ಆಧಾರಿತ ಈ ಕೂಗು ಕ್ಯಾಮರಾ ಅಳವಡಿಕೆ ಮಾಡಲಾಗಿದೆ.
ಇದನ್ನು ಫಾರ್ಮ್ಗಾರ್ಡ್ ಎಂದೂ ಕರೆಯಲಾಗುತ್ತಿದೆ. ಕ್ಯಾಮರಾದಲ್ಲಿ ಸದ್ಯಕ್ಕೆ ಕಾಡನ್ನು ದಾಟಿ ಹೊರಬರುವ ಆನೆಗಳನ್ನು ಮಾತ್ರ ಗುರುತಿಸಿ ಕ್ರಿಯಾಶೀಲವಾಗುವಂತಹ ಪ್ರೋಗ್ರಾಂ ಮಾಡಿ ಅಳವಡಿಸಲಾಗಿದೆ.
ಕಾಡಿನಿಂದ ಊರುಗಳತ್ತ ಆಹಾರ ಆಹಾರ ಅರಸಿಕೊಂಡು ಕಾಡಾನೆಗಳು ಬರುತ್ತವೆ ಎಂದು ಗುರುತಿಸುವ ಮಾರ್ಗಗಳಲ್ಲಿ ಈ ಕೂಗು ಕ್ಯಾಮರಾ ಅಳವಡಿಸಲಾಗಿದೆ. ಆನೆಯು ಅರಣ್ಯದಿಂದ ಹೊರಬರುತ್ತಿರುವುದು ಕ್ಯಾಮರಾ ಕಣ್ಣಿಗೆ ಬಿದ್ದ ತಕ್ಷಣ, ಕ್ಯಾಮರಾದಲ್ಲಿ ಇರುವ ಧ್ವನಿವರ್ಧಕದ ಮೂಲಕ ಆನೆಯನ್ನು ವಿಚಲಿತಗೊಳಿಸುವ, ಭಯಬೀಳಿಸುವ ಸದ್ದುಗಳು ಜೋರಾಗಿ ಹೊರಬರುತ್ತದೆ.
ಈ ಸದ್ದಿಗೆ ಆನೆ ಭಯಗೊಂಡು ನಾಡಿಗೆ ಬಾರದೇ ಕಾಡಿಗೆ ಹಿಂದಿರುಗುತ್ತದೆ. ಕ್ಯಾಮರಾವು ಆನೆಯನ್ನು 150 ಮೀಟರ್ ದೂರದಲ್ಲೇ ಪತ್ತೆ ಹಚ್ಚಿಬಿಡುತ್ತದೆ. ಆ ರೀತಿಯಾಗಿ ಕ್ಯಾಮರಾಗಳಲ್ಲಿ ಪ್ರೋಗ್ರಾಂ ಅಳವಡಿಸಲಾಗಿದೆ.
ಮೈಸೂರು : ಮೈಸೂರು ಸೇರಿದಂತೆ ದಕ್ಷಿಣ ಒಳನಾಡಿನ ನಾಲ್ಕು ಜಿಲ್ಲೆಗಳಲ್ಲಿ ಡಿ.31ರಿಂದ ಎರಡು ದಿನ ಹಗುರವಾಗಿ ಮಳೆಯಾಗುವ ಸಾಧ್ಯತೆ ಇದೆ…
ಹೊಸದಿಲ್ಲಿ : ಮುಂಬರುವ ಕೇಂದ್ರ ಬಜೆಟ್ ಕುರಿತು ಸಂವಾದ ನಡೆಸಲು ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ಆರ್ಥಿಕ ತಜ್ಞರು…
ಮಳವಳ್ಳಿ : ತಾಲ್ಲೂಕಿನ ಗಗನಚುಕ್ಕಿ ಜಲಪಾತದ ಆವರಣಕ್ಕೆ ನುಗ್ಗಿದ್ದ ಕಾಡಾನೆಗಳು ಪ್ರವಾಸಿಗರು ಜಲಪಾತ ವೀಕ್ಷಣೆಗೆ ಇಳಿಯುವ ಎರಡು ಕಡೆಗಳಲ್ಲೂ ಹಾಕಲಾಗಿದ್ದ…
ಮೈಸೂರು : ಇನ್ನೇನು ಹೊಸ ವರ್ಷಾಚರಣೆಗೆ ಕೆಲವೇ ದಿನಗಳು ಬಾಕಿ ಇದೆ. ಆದ್ದರಿಂದ ಸಾರ್ವಜನಿಕ ಹಿತದೃಷ್ಟಿಯಿಂದ ಮೈಸೂರು ನಗರ ಪೊಲೀಸ್…
ಬೆಂಗಳೂರು : ಬೆಂಗಳೂರಿನ ಕೋಗಿಲು ಬಡಾವಣೆಯಲ್ಲಿ ಸೂರು ಕಳೆದುಕೊಂಡವರಿಗೆ ಬೈಯ್ಯಪ್ಪನಹಳ್ಳಿಯಲ್ಲಿ ಪರ್ಯಾಯ ಮನೆ ಹಂಚಿಕೆ ಮಾಡಲು ಸಿಎಂ ಸಿದ್ದರಾಮಯ್ಯ ತೀರ್ಮಾನಿಸಿದ್ದಾರೆ.…
ಚಾಮರಾಜನಗರ : ರಾಷ್ಟ್ರ ಮಟ್ಟದ ಪುರುಷರ ಮೈಕಟ್ಟು ಸ್ಪರ್ಧೆಯಲ್ಲಿ ವಿಜೇತರಾಗುವ ಮೂಲಕ ತಾಲ್ಲೂಕಿನ ಕೋಡಿಮೋಳೆ ಬಸವನಪುರ ಬಿ.ಆರ್.ಹೇಮಂತ್ ಅವರು ಮಿಸ್ಟರ್…