ಮೈಸೂರು: ಕಾಡಾನೆಗಳು ಊರಿಗೆ ಬರದಂತೆ ಅರಣ್ಯ ಇಲಾಖೆಯು ಎಐ ಆಧಾರಿರ ಕೂಗು ಕ್ಯಾಮರಾವನ್ನು ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯಲ್ಲಿ ಅಳವಡಿಸಿದೆ.
ನಾಗರಹೊಳೆಯ ವೀರನಹೊಸಳ್ಳಿ ವಲಯ ವ್ಯಾಪ್ತಿಯ ಬೊಮ್ಮಲಾಪುರ ಹಾಡಿಯ ಗಡಿಯಲ್ಲಿ ಕೃತಕ ಬುದ್ಧಿಮತ್ತೆ ಆಧಾರಿತ ಈ ಕೂಗು ಕ್ಯಾಮರಾ ಅಳವಡಿಕೆ ಮಾಡಲಾಗಿದೆ.
ಇದನ್ನು ಫಾರ್ಮ್ಗಾರ್ಡ್ ಎಂದೂ ಕರೆಯಲಾಗುತ್ತಿದೆ. ಕ್ಯಾಮರಾದಲ್ಲಿ ಸದ್ಯಕ್ಕೆ ಕಾಡನ್ನು ದಾಟಿ ಹೊರಬರುವ ಆನೆಗಳನ್ನು ಮಾತ್ರ ಗುರುತಿಸಿ ಕ್ರಿಯಾಶೀಲವಾಗುವಂತಹ ಪ್ರೋಗ್ರಾಂ ಮಾಡಿ ಅಳವಡಿಸಲಾಗಿದೆ.
ಕಾಡಿನಿಂದ ಊರುಗಳತ್ತ ಆಹಾರ ಆಹಾರ ಅರಸಿಕೊಂಡು ಕಾಡಾನೆಗಳು ಬರುತ್ತವೆ ಎಂದು ಗುರುತಿಸುವ ಮಾರ್ಗಗಳಲ್ಲಿ ಈ ಕೂಗು ಕ್ಯಾಮರಾ ಅಳವಡಿಸಲಾಗಿದೆ. ಆನೆಯು ಅರಣ್ಯದಿಂದ ಹೊರಬರುತ್ತಿರುವುದು ಕ್ಯಾಮರಾ ಕಣ್ಣಿಗೆ ಬಿದ್ದ ತಕ್ಷಣ, ಕ್ಯಾಮರಾದಲ್ಲಿ ಇರುವ ಧ್ವನಿವರ್ಧಕದ ಮೂಲಕ ಆನೆಯನ್ನು ವಿಚಲಿತಗೊಳಿಸುವ, ಭಯಬೀಳಿಸುವ ಸದ್ದುಗಳು ಜೋರಾಗಿ ಹೊರಬರುತ್ತದೆ.
ಈ ಸದ್ದಿಗೆ ಆನೆ ಭಯಗೊಂಡು ನಾಡಿಗೆ ಬಾರದೇ ಕಾಡಿಗೆ ಹಿಂದಿರುಗುತ್ತದೆ. ಕ್ಯಾಮರಾವು ಆನೆಯನ್ನು 150 ಮೀಟರ್ ದೂರದಲ್ಲೇ ಪತ್ತೆ ಹಚ್ಚಿಬಿಡುತ್ತದೆ. ಆ ರೀತಿಯಾಗಿ ಕ್ಯಾಮರಾಗಳಲ್ಲಿ ಪ್ರೋಗ್ರಾಂ ಅಳವಡಿಸಲಾಗಿದೆ.
ಬೆಂಗಳೂರು : ಮುಖ್ಯಮಂತ್ರಿ ಸ್ಥಾನಕ್ಕೆ ರಾಜಿನಾಮೆ ಸಲ್ಲಿಸಿದ ಸಿದ್ದರಾಮಯ್ಯ ಅವರು ತಮ್ಮ ವಿದಾಯದ ಕೊನೇ ಕ್ಷಣದಲ್ಲೂ ಮಹತ್ವದ ಕ್ರಮ ಕೈಗೊಂಡಿದ್ದು,…
ಬೆಂಗಳೂರು : ನನಗೆ ರಾಷ್ಟ್ರ ರಾಜಕಾರಣದಲ್ಲಿ ಆಸಕ್ತಿ ಇಲ್ಲ. ರಾಜ್ಯ ರಾಜಕಾರಣದಲ್ಲೇ ಮುಂದುವರಿಯುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಸಿಎಂ…
ಬೆಂಗಳೂರು : ಹೈಕಮಾಂಡ್ ಸೂಚನೆಯಂತೆ ನಾನು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ…
ಕೊಪ್ಪಳ: ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡುವ ವಿಚಾರ ಸಂಬಂಧ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಪ್ರತಿಕ್ರಿಯೆ ನೀಡಿದ್ದಾರೆ. ಈ ಬಗ್ಗೆ…
ಮೈಸೂರು: ಅಧಿಕಾರ ಬದಲಾವಣೆ ಎನ್ನುವುದು ಹೈಕಮಾಂಡ್ ನಿರ್ಧಾರ ಎಂದು ಶಾಸಕ ತನ್ವೀರ್ ಸೇಠ್ ಹೇಳಿದ್ದಾರೆ. ಸಿಎಂ ಸಿದ್ದರಾಮಯ್ಯ ಅಧಿಕಾರ ಹಸ್ತಾಂತರ…
ಬೆಂಗಳೂರು: ಬ್ರೇಕ್ಫಾಸ್ಟ್ ಸಭೆಯಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಮಂತ್ರಿಗಳ ಜೊತೆ ಸಹಕಾರವನ್ನು ಕೇಳಿದ್ದಾರೆ. ಸಿಎಂ ಹುದ್ದೆಗೆ ಇಂದು ಸಿದ್ದರಾಮಯ್ಯ ರಾಜೀನಾಮೆ…