ಮೈಸೂರು: ಕಾಡಾನೆಗಳು ಊರಿಗೆ ಬರದಂತೆ ಅರಣ್ಯ ಇಲಾಖೆಯು ಎಐ ಆಧಾರಿರ ಕೂಗು ಕ್ಯಾಮರಾವನ್ನು ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯಲ್ಲಿ ಅಳವಡಿಸಿದೆ.
ನಾಗರಹೊಳೆಯ ವೀರನಹೊಸಳ್ಳಿ ವಲಯ ವ್ಯಾಪ್ತಿಯ ಬೊಮ್ಮಲಾಪುರ ಹಾಡಿಯ ಗಡಿಯಲ್ಲಿ ಕೃತಕ ಬುದ್ಧಿಮತ್ತೆ ಆಧಾರಿತ ಈ ಕೂಗು ಕ್ಯಾಮರಾ ಅಳವಡಿಕೆ ಮಾಡಲಾಗಿದೆ.
ಇದನ್ನು ಫಾರ್ಮ್ಗಾರ್ಡ್ ಎಂದೂ ಕರೆಯಲಾಗುತ್ತಿದೆ. ಕ್ಯಾಮರಾದಲ್ಲಿ ಸದ್ಯಕ್ಕೆ ಕಾಡನ್ನು ದಾಟಿ ಹೊರಬರುವ ಆನೆಗಳನ್ನು ಮಾತ್ರ ಗುರುತಿಸಿ ಕ್ರಿಯಾಶೀಲವಾಗುವಂತಹ ಪ್ರೋಗ್ರಾಂ ಮಾಡಿ ಅಳವಡಿಸಲಾಗಿದೆ.
ಕಾಡಿನಿಂದ ಊರುಗಳತ್ತ ಆಹಾರ ಆಹಾರ ಅರಸಿಕೊಂಡು ಕಾಡಾನೆಗಳು ಬರುತ್ತವೆ ಎಂದು ಗುರುತಿಸುವ ಮಾರ್ಗಗಳಲ್ಲಿ ಈ ಕೂಗು ಕ್ಯಾಮರಾ ಅಳವಡಿಸಲಾಗಿದೆ. ಆನೆಯು ಅರಣ್ಯದಿಂದ ಹೊರಬರುತ್ತಿರುವುದು ಕ್ಯಾಮರಾ ಕಣ್ಣಿಗೆ ಬಿದ್ದ ತಕ್ಷಣ, ಕ್ಯಾಮರಾದಲ್ಲಿ ಇರುವ ಧ್ವನಿವರ್ಧಕದ ಮೂಲಕ ಆನೆಯನ್ನು ವಿಚಲಿತಗೊಳಿಸುವ, ಭಯಬೀಳಿಸುವ ಸದ್ದುಗಳು ಜೋರಾಗಿ ಹೊರಬರುತ್ತದೆ.
ಈ ಸದ್ದಿಗೆ ಆನೆ ಭಯಗೊಂಡು ನಾಡಿಗೆ ಬಾರದೇ ಕಾಡಿಗೆ ಹಿಂದಿರುಗುತ್ತದೆ. ಕ್ಯಾಮರಾವು ಆನೆಯನ್ನು 150 ಮೀಟರ್ ದೂರದಲ್ಲೇ ಪತ್ತೆ ಹಚ್ಚಿಬಿಡುತ್ತದೆ. ಆ ರೀತಿಯಾಗಿ ಕ್ಯಾಮರಾಗಳಲ್ಲಿ ಪ್ರೋಗ್ರಾಂ ಅಳವಡಿಸಲಾಗಿದೆ.
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…