ಮೈಸೂರು

ಕಾಡಾನೆಗಳು ಊರಿಗೆ ಬರದಂತೆ ಎಐ ಆಧಾರಿತ ಕ್ಯಾಮರಾ ಅಳವಡಿಕೆ

ಮೈಸೂರು: ಕಾಡಾನೆಗಳು ಊರಿಗೆ ಬರದಂತೆ ಅರಣ್ಯ ಇಲಾಖೆಯು ಎಐ ಆಧಾರಿರ ಕೂಗು ಕ್ಯಾಮರಾವನ್ನು ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯಲ್ಲಿ ಅಳವಡಿಸಿದೆ.

ನಾಗರಹೊಳೆಯ ವೀರನಹೊಸಳ್ಳಿ ವಲಯ ವ್ಯಾಪ್ತಿಯ ಬೊಮ್ಮಲಾಪುರ ಹಾಡಿಯ ಗಡಿಯಲ್ಲಿ ಕೃತಕ ಬುದ್ಧಿಮತ್ತೆ ಆಧಾರಿತ ಈ ಕೂಗು ಕ್ಯಾಮರಾ ಅಳವಡಿಕೆ ಮಾಡಲಾಗಿದೆ.

ಇದನ್ನು ಫಾರ್ಮ್‌ಗಾರ್ಡ್‌ ಎಂದೂ ಕರೆಯಲಾಗುತ್ತಿದೆ. ಕ್ಯಾಮರಾದಲ್ಲಿ ಸದ್ಯಕ್ಕೆ ಕಾಡನ್ನು ದಾಟಿ ಹೊರಬರುವ ಆನೆಗಳನ್ನು ಮಾತ್ರ ಗುರುತಿಸಿ ಕ್ರಿಯಾಶೀಲವಾಗುವಂತಹ ಪ್ರೋಗ್ರಾಂ ಮಾಡಿ ಅಳವಡಿಸಲಾಗಿದೆ.

ಕಾಡಿನಿಂದ ಊರುಗಳತ್ತ ಆಹಾರ ಆಹಾರ ಅರಸಿಕೊಂಡು ಕಾಡಾನೆಗಳು ಬರುತ್ತವೆ ಎಂದು ಗುರುತಿಸುವ ಮಾರ್ಗಗಳಲ್ಲಿ ಈ ಕೂಗು ಕ್ಯಾಮರಾ ಅಳವಡಿಸಲಾಗಿದೆ. ಆನೆಯು ಅರಣ್ಯದಿಂದ ಹೊರಬರುತ್ತಿರುವುದು ಕ್ಯಾಮರಾ ಕಣ್ಣಿಗೆ ಬಿದ್ದ ತಕ್ಷಣ, ಕ್ಯಾಮರಾದಲ್ಲಿ ಇರುವ ಧ್ವನಿವರ್ಧಕದ ಮೂಲಕ ಆನೆಯನ್ನು ವಿಚಲಿತಗೊಳಿಸುವ, ಭಯಬೀಳಿಸುವ ಸದ್ದುಗಳು ಜೋರಾಗಿ ಹೊರಬರುತ್ತದೆ.

ಈ ಸದ್ದಿಗೆ ಆನೆ ಭಯಗೊಂಡು ನಾಡಿಗೆ ಬಾರದೇ ಕಾಡಿಗೆ ಹಿಂದಿರುಗುತ್ತದೆ. ಕ್ಯಾಮರಾವು ಆನೆಯನ್ನು 150 ಮೀಟರ್‌ ದೂರದಲ್ಲೇ ಪತ್ತೆ ಹಚ್ಚಿಬಿಡುತ್ತದೆ. ಆ ರೀತಿಯಾಗಿ ಕ್ಯಾಮರಾಗಳಲ್ಲಿ ಪ್ರೋಗ್ರಾಂ ಅಳವಡಿಸಲಾಗಿದೆ.

ಆಂದೋಲನ ಡೆಸ್ಕ್

Recent Posts

ವಿಷ ಕುಡಿದು ವ್ಯಕ್ತಿ ಆತ್ಮಹತ್ಯೆ: ಗರಿಕೆ ಖಂಡಿ ಅರಣ್ಯದಲ್ಲಿ ಶವ ಪತ್ತೆ

ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…

9 hours ago

ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಭೇಟಿಯಾದ ಮಾಜಿ ಸಿಎಂ ಸಿದ್ದರಾಮಯ್ಯ

ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…

10 hours ago

ಶ್ರಾವಣ ಮಾಸದ ಕೊನೆಯ ದಿನದ 108 ಕುಂಭಾಭಿಷೇಕ: ಮಲೆ ಮಹದೇಶ್ವರ ಕ್ಷೇತ್ರದಲ್ಲಿ ಭಕ್ತಿ ವೈಭವ

ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…

11 hours ago

ಹನೂರು| ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ: ಮೂವರು ಯುವಕರು ದುರ್ಮರಣ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…

11 hours ago

ಓದುಗರ ಪತ್ರ: ದಸರಾ ಚಿತ್ರೋತ್ಸವ ಮುಂದುವರಿಯಲಿ

ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…

17 hours ago

ಓದುಗರ ಪತ್ರ: ಫಿಲಂ ಸಿಟಿ ಯೋಜನೆ ಆದಷ್ಟು ಬೇಗ ಕಾರ್ಯರೂಪಕ್ಕೆ ಬರಲಿ

ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…

17 hours ago