ಮೈಸೂರು: ಕಾಡಾನೆಗಳು ಊರಿಗೆ ಬರದಂತೆ ಅರಣ್ಯ ಇಲಾಖೆಯು ಎಐ ಆಧಾರಿರ ಕೂಗು ಕ್ಯಾಮರಾವನ್ನು ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯಲ್ಲಿ ಅಳವಡಿಸಿದೆ.
ನಾಗರಹೊಳೆಯ ವೀರನಹೊಸಳ್ಳಿ ವಲಯ ವ್ಯಾಪ್ತಿಯ ಬೊಮ್ಮಲಾಪುರ ಹಾಡಿಯ ಗಡಿಯಲ್ಲಿ ಕೃತಕ ಬುದ್ಧಿಮತ್ತೆ ಆಧಾರಿತ ಈ ಕೂಗು ಕ್ಯಾಮರಾ ಅಳವಡಿಕೆ ಮಾಡಲಾಗಿದೆ.
ಇದನ್ನು ಫಾರ್ಮ್ಗಾರ್ಡ್ ಎಂದೂ ಕರೆಯಲಾಗುತ್ತಿದೆ. ಕ್ಯಾಮರಾದಲ್ಲಿ ಸದ್ಯಕ್ಕೆ ಕಾಡನ್ನು ದಾಟಿ ಹೊರಬರುವ ಆನೆಗಳನ್ನು ಮಾತ್ರ ಗುರುತಿಸಿ ಕ್ರಿಯಾಶೀಲವಾಗುವಂತಹ ಪ್ರೋಗ್ರಾಂ ಮಾಡಿ ಅಳವಡಿಸಲಾಗಿದೆ.
ಕಾಡಿನಿಂದ ಊರುಗಳತ್ತ ಆಹಾರ ಆಹಾರ ಅರಸಿಕೊಂಡು ಕಾಡಾನೆಗಳು ಬರುತ್ತವೆ ಎಂದು ಗುರುತಿಸುವ ಮಾರ್ಗಗಳಲ್ಲಿ ಈ ಕೂಗು ಕ್ಯಾಮರಾ ಅಳವಡಿಸಲಾಗಿದೆ. ಆನೆಯು ಅರಣ್ಯದಿಂದ ಹೊರಬರುತ್ತಿರುವುದು ಕ್ಯಾಮರಾ ಕಣ್ಣಿಗೆ ಬಿದ್ದ ತಕ್ಷಣ, ಕ್ಯಾಮರಾದಲ್ಲಿ ಇರುವ ಧ್ವನಿವರ್ಧಕದ ಮೂಲಕ ಆನೆಯನ್ನು ವಿಚಲಿತಗೊಳಿಸುವ, ಭಯಬೀಳಿಸುವ ಸದ್ದುಗಳು ಜೋರಾಗಿ ಹೊರಬರುತ್ತದೆ.
ಈ ಸದ್ದಿಗೆ ಆನೆ ಭಯಗೊಂಡು ನಾಡಿಗೆ ಬಾರದೇ ಕಾಡಿಗೆ ಹಿಂದಿರುಗುತ್ತದೆ. ಕ್ಯಾಮರಾವು ಆನೆಯನ್ನು 150 ಮೀಟರ್ ದೂರದಲ್ಲೇ ಪತ್ತೆ ಹಚ್ಚಿಬಿಡುತ್ತದೆ. ಆ ರೀತಿಯಾಗಿ ಕ್ಯಾಮರಾಗಳಲ್ಲಿ ಪ್ರೋಗ್ರಾಂ ಅಳವಡಿಸಲಾಗಿದೆ.
ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್ಗಳು ಈಗ ಇನ್ಸ್ಟಾಗ್ರಾಂ…
ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…
ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…
ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…
ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…