ಮೈಸೂರು

2030ರೊಳಗೆ ಎಚ್‌ಐವಿ ನಿರ್ಮೂಲನೆಗೆ ಗುರಿ : ಸಚಿವ ದಿನೇಶ್‌ ಗುಂಡೂರಾವ್‌

ಮೈಸೂರು : 2030ರೊಳಗೆ ರಾಜ್ಯದಲ್ಲಿ ಎಚ್‌ಐವಿ ಸೋಂಕು ನಿರ್ಮೂಲನೆ ಮಾಡಬೇಕೆಂದು ಸರ್ಕಾರ ಗುರಿ ಹೊಂದಿದ್ದು, ಈ ನಿಟ್ಟಿನಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕಾರ್ಯಪ್ರವೃತ್ತವಾಗಿದೆ ಎಂದು ಆರೋಗ್ಯ ಸಚಿವ ಡಾ.ದಿನೇಶ್ ಗುಂಡೂರಾವ್ ಹೇಳಿದರು.

ನಗರದ ಜೆ.ಕೆ.ಮೈದಾನದ ಅಮೃತ ಭವನದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಕರ್ನಾಟಕ ರಾಜ್ಯ ಏಡ್ಸ್ ಪ್ರಿವೆನ್‌ಷನ್ ಸೊಸೈಟಿ ಸಹಯೋಗದಲ್ಲಿ ಸೋಮವಾರ ನಡೆದ ವಿಶ್ವ ಏಡ್ಸ್ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ರಾಜ್ಯದಲ್ಲಿ ಎಚ್‌ಐವಿ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿದೆ. ವಿಜಯಪುರ, ಬೆಳಗಾವಿ, ಬಾಗಲಕೋಟೆ ಮತ್ತು ಬೆಂಗಳೂರಿನಲ್ಲಿ ಹೆಚ್ಚು ಎಚ್‌ಐವಿ ಸೋಂಕಿತರಿದ್ದಾರೆ. ಮೈಸೂರು ಕೂಡ 15ನೇ ಸ್ಥಾನದೊಳಗಿದೆ. ಈ ನಿಟ್ಟಿನಲ್ಲಿ ಈ ಭಾಗದಲ್ಲಿ ಹೆಚ್ಚು ಜಾಗೃತಿ ಮೂಡಿಸಲಾಗುತ್ತಿದ್ದು, ಎಚ್‌ಐವಿಯನ್ನು ನಿಯಂತ್ರಿಸುವುದೇ ಸರ್ಕಾರದ ಮುಖ್ಯಗುರಿ ಎಂದು ಹೇಳಿದರು.

ಎಚ್‌ಐವಿ ಹರಡುವಿಕೆಯ ನಿಯಂತ್ರಣಕ್ಕೆ ಹಲವಾರು ಕಾರ್ಯಕ್ರಮಗಳನ್ನು ರೂಪಿಸಿ ಚಟುವಟಿಕೆ ಆರಂಭಿಸಿದೆ. ವೈದ್ಯರು, ಆಶಾ ಕಾರ್ಯಕರ್ತೆಯರು ಈ ಬಗ್ಗೆ ಜಾಗೃತಿ ಮೂಡಿಸುತ್ತಿದ್ದಾರೆ. ತಪಾಸಣೆ ವೇಳೆ ಎಚ್‌ಐವಿ ಸೋಂಕು ಪತ್ತೆಯಾದ ತಕ್ಷಣ ಭಯಪಡದೆ ವೈದ್ಯರ ಬಳಿ ಚಿಕಿತ್ಸೆ ಪಡೆಯಬೇಕು. ರೋಗ ನಿರೋಧಕ ಶಕ್ತಿ ಹೆಚ್ಚಿಸುವ ಲಸಿಕೆ ನೀಡಲಾಗುತ್ತದೆ. ನಿಯಮಿತ ಔಷಧದಿಂದ ಆರಾಮದಾಯಕ ಜೀವನ ಸಾಗಿಸಬಹುದು. ಎಚ್‌ಐವಿ ಸೋಂಕಿತರ ಬೆಂಬಲಕ್ಕೆ ಸರ್ಕಾರ ಸದಾ ಇರಲಿದೆ ಎಂದು ಭರವಸೆ ನೀಡಿದರು.

ಇದನ್ನು ಓದಿ:  ಮುಖ್ಯಮಂತ್ರಿ ಸ್ಥಾನದಲ್ಲಿ ಸಿದ್ದರಾಮಯ್ಯ ಗಟ್ಟಿಯಾಗಿದ್ದಾರೆ: ಸಚಿವ ಎಚ್.ಸಿ.ಮಹದೇವಪ್ಪ

ಪುರುಷರಿಂದ ಪುರಷರಿಗೆ ಹರಡುವಿಕೆ ಹೆಚ್ಚು
ಯುವ ಜನರು ಹೆಚ್ಚು ಈ ಸೋಂಕಿಗೆ ತುತ್ತಾಗುತ್ತಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದ ಅವರು, ಮಾದಕ ವಸ್ತು ಸೇವನೆಯ ಸಂದರ್ಭದಲ್ಲಿ ಒಬ್ಬರಿಂದ ಒಬ್ಬರಿಗೆ ಸಿರಂಜ್ ಬಳಸುವುದು, ವಸತಿ ನಿಲಯಗಳು ಹಾಗೂ ಇತರೆ ಕಡೆಗಳಲ್ಲಿ ಸಲಿಂಗ ಕಾಮ ನಡೆಸುತ್ತಿರುವುದರಿಂದ ಯುವ ಜನರಲ್ಲಿ ಹೆಚ್ಚು ಸೋಂಕು ಪತ್ತೆಯಾಗುತ್ತಿದೆ. ಪುರುಷರಿಂದ ಪುರುಷರಿಗೆ ಹೆಚ್ಚು ಎಚ್‌ಐವಿ ಸೋಂಕಿತರಾಗಿದ್ದಾರೆ. ತೃತೀಯ ಲಿಂಗಿಗಳಲ್ಲಿಯೂ ಕಾಣಿಸಿಕೊಳ್ಳುತ್ತಿದೆ. ಹೀಗಾಗಿ ಸೋಂಕಿನ ಬಗ್ಗೆ ಜಾಗೃತವಾಗಿರಬೇಕು. ಸರ್ವೋಚ್ಚ ನ್ಯಾಯಾಲಯವೇ ಸಲಿಂಗ ಕಾಮ ಅಪರಾಧವಲ್ಲ ಎಂದು ಹೇಳಿದೆ. ಆದರೆ, ಸುರಕ್ಷಿತ ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.

ಎಚ್‌ಐವಿ ಸೋಂಕು ಭಾರತದಲ್ಲಿ ಕಾಣಿಸಿಕೊಂಡಾಗ ಚಿಕಿತ್ಸೆ ಇರಲಿಲ್ಲ. ಆದರೆ, ಈಗ ಚಿಕಿತ್ಸೆ ಇದೆ. ಹೀಗಾಗಿ ಸೋಂಕಿತರು ಬಳಸಿಕೊಳ್ಳಬೇಕು. ತಾಯಿಯಿಂದ ಮಗುವಿಗೆ ಹರಡುವ ಸೋಂಕನ್ನು ತಡೆಯಬಹುದು. 6 ವಾರದಿಂದ 18 ತಿಂಗಳವರೆಗೆ ಮಗುವಿನ ಪರೀಕ್ಷೆ ನಡೆಸಿ ಚಿಕಿತ್ಸೆ ಸೂಕ್ತ ಕೊಡಿಸಿದರೆ ಎಚ್‌ಐವಿ ಸೋಂಕಿನಿಂದ ಮಗುವನ್ನು ರಕ್ಷಿಸಬಹುದು ಎಂದು ವಿವರಿಸಿದರು.

ರಾಜ್ಯವನ್ನು ರೋಗ ಮುಕ್ತಗೊಳಿಸಲು ಎಚ್‌ಐವಿ ಸೋಂಕಿತರು ಮೊದಲು ಚಿಕಿತ್ಸೆಗೆ ಒಳಗಾಗಬೇಕು. ಇದರ ಮೂಲಕ ಮತ್ತೊಬ್ಬರಿಗೆ ಹರಡುವುದನ್ನು ತಡೆಯಬಹುದು. ಸೋಂಕಿತರ ಪತ್ತೆ ಹೆಚ್ಚಾದಾಗ ಎಚ್‌ಐವಿ ಏಡ್ಸ್ ಆಗಿ ಪರಿವರ್ತನೆ ಆಗುವುದನ್ನು ತಡೆಯಬಹುದು ಎಂದು ಹೇಳಿದರು.

ವಿಧಾನ ಪರಿಷತ್ ಸದಸ್ಯ ಸಿ.ಎನ್.ಮಂಜೇಗೌಡ, ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷ ಡಾ.ಮಾನಸ, ಆರೋಗ್ಯ ಮತ್ತು ಕುಟುಂಬ ಇಲಾಖೆಯ ನಿರ್ದೇಶಕ ಡಾ.ವಸಂತ ಕುಮಾರ್, ಸೊಸೈಟಿಯ ಯೋಜನಾ ನಿರ್ದೇಶಕ ಪದ್ಮ ಬಸಂತಪ್ಪ, ಮುಡಾ ಮಾಜಿ ಅಧ್ಯಕ್ಷ ಎಚ್.ವಿ.ರಾಜೀವ್, ಜಿಲ್ಲಾ ಆರೋಗ್ಯಾಽಕಾರಿ ಡಾ.ಕುಮಾರಸ್ವಾಮಿ, ಜಿಲ್ಲಾ ಏಡ್ಸ್ ಪ್ರತಿಬಂಧಕ ಮತ್ತು ನಿಯಂತ್ರಕ ಘಟಕದ ಮುಖ್ಯಸ್ಥ ಡಾ.ಮೊಹಮ್ಮದ ಸಿರಾಜ್ ಅಹಮದ್ ಉಪಸ್ಥಿತರಿದ್ದರು.

ಆಂದೋಲನ ಡೆಸ್ಕ್

Recent Posts

ಇರಾನ್ ಮಹಿಳಾ ಫುಟ್ಬಾಲ್ ತಂಡಕ್ಕೆ ಹೆಚ್ಚುತ್ತಿರುವ ಭಯ ; ಆಸ್ಟ್ರೇಲಿಯಾದಲ್ಲಿ ಆಶ್ರಯಕ್ಕೆ ಹೆಚ್ಚುತ್ತಿರುವ ಕರೆ!

ಗೋಲ್ಡ್ ಕೋಸ್ಟ್ (ಆಸ್ಟ್ರೇಲಿಯಾ) :  ಆಸ್ಟ್ರೇಲಿಯಾದಲ್ಲಿ ನಡೆಯುತ್ತಿರುವ ಏಷ್ಯಾ ಮಹಿಳಾ ಫುಟ್ಬಾಲ್ ಕಪ್ 2026ನಲ್ಲಿ ಭಾಗವಹಿಸಿದ್ದ ಇರಾನ್ ರಾಷ್ಟ್ರೀಯ ಮಹಿಳಾ…

3 hours ago

ಜಾಗತಿಕ ತೈಲ ಬೆಲೆಗಳಲ್ಲಿ ಭಾರೀ ಏರಿಕೆ ; ಬ್ಯಾರೆಲ್‌ಗೆ 120 ಡಾಲರ್ ಗಡಿ ದಾಟಿದ ತೈಲ ಬೆಲೆ

ಹೊಸದಿಲ್ಲಿ : ಇರಾನ್ ಮೇಲಿನ ಅಮೆರಿಕಾ-ಇಸ್ರೇಲ್ ದಾಳಿಗಳು ಮತ್ತು ಇರಾನ್‌ಗೆ ಹೊಸ ಸುಪ್ರೀಂ ಲೀಡರ್ ನೇಮಕದ ನಂತರ ಮಧ್ಯಪ್ರಾಚ್ಯದಲ್ಲಿ ತೀವ್ರ…

3 hours ago

ಮಧ್ಯಪ್ರಾಚ್ಯ ಸಂಘರ್ಷ | ದೆಹಲಿಯಿಂದ ಮ್ಯಾಂಚೆಸ್ಟರ್‌ಗೆ ತೆರಳುತಿದ್ದ ಇಂಡಿಗೊ ವಿಮಾನ ಯು-ಟರ್ನ್‌

ಹೊಸದಿಲ್ಲಿ : ಮಧ್ಯಪ್ರಾಚ್ಯದಲ್ಲಿ ಇರಾನ್-ಇಸ್ರೇಲ್-ಅಮೆರಿಕಾ ನಡುವಿನ ಸಂಘರ್ಷದ ಹಿನ್ನೆಲೆಯಲ್ಲಿ ವಾಯುಪ್ರದೇಶದಲ್ಲಿ ತುರ್ತು ನಿರ್ಬಂಧಗಳು ಜಾರಿಯಾಗಿರುವುದರಿಂದ ದೆಹಲಿಯಿಂದ ಮ್ಯಾಂಚೆಸ್ಟರ್‌ಗೆ ಹೋಗುತಿದ್ದ ಇಂಡಿಗೊ…

5 hours ago

ಎಂಡಿಎ ಬಜೆಟ್‌ | ಮೈಸೂರು ಅಭಿವೃದ್ಧಿಗೆ ಒತ್ತು ; 799.90 ಕೋಟಿ ರೂ. ಸಂಪನ್ಮೂಲ ನಿರೀಕ್ಷೆ

ಮೈಸೂರು : ಮೈಸೂರು ಅಭಿವೃದ್ಧಿ ಪ್ರಾಧಿಕಾರ (MDA) ಈ ಬಾರಿಯ ಆರ್ಥಿಕ ವರ್ಷದ ಬಜೆಟ್‌ನಲ್ಲಿ ನಗರದ ಸಮಗ್ರ ಅಭಿವೃದ್ಧಿಗೆ ತೀವ್ರ…

5 hours ago

ಮೈಸೂರು | 24 ಅಪರಾಧ ಪ್ರಕರಣ ಭೇಧಿಸಿದ ಪೊಲೀಸರು ; 20ಕ್ಕೂ ಹೆಚ್ಚು ಆರೋಪಿಗಳು ವಶಕ್ಕೆ

ಮೈಸೂರು : ಮನೆಗಳ್ಳತನ, ವಾಹನ ಕಳ್ಳತನ, ದರೋಡೆ ಸೇರಿದಂತೆ ಕಳೆದ ಎರಡು ತಿಂಗಳಲ್ಲಿ ಜಿಲ್ಲೆಯಲ್ಲಿ ನಡೆದಿದ್ದ 24 ಅಪರಾಧ ಪ್ರಕರಣಗಳನ್ನು…

6 hours ago

ʻಪಂಚ ಗ್ಯಾರಂಟಿʼಯಿಂದ ಮಹಿಳಾ ಸಬಲೀಕರಣ ಸಾಧ್ಯ : ಅರುಣ್ ಕುಮಾರ್

ಮೈಸೂರು : ರಾಜ್ಯ ಸರ್ಕಾರದ ʻಪಂಚ ಗ್ಯಾರಂಟಿʼ ಯೋಜನೆಗಳಿಂದ ಮಹಿಳಾ ಸಬಲೀಕರಣ ಸಾಧ್ಯವಾಗಿದೆ ಎಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ…

6 hours ago