ಮೈಸೂರು

ಮೈಸೂರು-ಕೇರಳ ನಡುವೆ ಶೀಘ್ರವೆ ವಿಮಾನಯಾನ ಸೇವೆ

ಮೈಸೂರು: ಮೈಸೂರು-ಕೇರಳ ನಡುವೆ ಪ್ರವಾಸೋದ್ಯಮ ಉತ್ತೇಜಿಸುವ ಉದ್ದೇಶದಿಂದ ಏರ್ ಕೇರಳ ಸಂಸ್ಥೆ ವಿಮಾನಯಾನ ಸೇವೆಯನ್ನು ಶೀಘ್ರವೆ ಆರಂಭಿಸಲಿದೆ.

ಶುಕ್ರವಾರ ಮಂಡಕಳ್ಳಿ ವಿಮಾನ ನಿಲ್ದಾಣದಲ್ಲಿ ಏರ್ ಕೇರಳ ತಂಡ ಮತ್ತು ವಿಮಾನ ನಿಲ್ದಾಣ ಪ್ರಾಧಿಕಾರದ ಅಧಿಕಾರಿಗಳು, ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ಶಾಸಕ ಜಿ.ಟಿ.ದೇವೇಗೌಡ ಅವರ ಸಮ್ಮುಖದಲ್ಲಿ ನಡೆದ ಸಭೆಯಲ್ಲಿ ಮುಂಬರುವ ಮೇ ಅಥವಾ ಜೂನ್ ತಿಂಗಳಲ್ಲಿ ವಿಮಾನ ಯಾನ ಸೇವೆ ಆರಂಭಿಸುವ ತೀರ್ಮಾನಕ್ಕೆ ಬರಲಾಯಿತು.

ಏರ್ ಕೇರಳ ಅಧ್ಯಕ್ಷ ಅಫಿ ಅಹಮ್ಮದ್ ಮಾತನಾಡಿ, ಮೇ, ಜೂನ್ ತಿಂಗಳಲ್ಲಿ ಮೂರು ಹಾಗೂ ನಂತರದ ಹಂತದಲ್ಲಿ ಮೂರು ಏರ್ ಕ್ರಾ-ಗಳನ್ನು ಖರೀದಿಸಲಾಗುವುದು. ಕೇರಳದ ಯಾವ ನಿಲ್ದಾಣದದಿಂದ ಮೈಸೂರಿಗೆ ವಿಮಾನಯಾನ ಸೇವೆ ಆರಂಭಿಸಬೇಕು ಎಂಬುದನ್ನು ಇನ್ನೂ ನಿರ್ಧರಿಸಿಲ್ಲ.

ಮೈಸೂರು ವಿಮಾನ ನಿಲ್ದಾಣ ಪ್ರಾಧಿಕಾರದ ಅಧಿಕಾರಿಗಳು ಏರ್ ಕೇರಳ ಸಂಸ್ಥೆಯ ವಿಮಾನಯಾನ ಸೇವೆಯ ಆರಂಭಕ್ಕೆ ಅಗತ್ಯ ಸಹಕಾರ ನೀಡುವ ಭರವಸೆ ನೀಡಿದ್ದಾರೆ. ಹೀಗಾಗಿ ಸೇವೆ ಆರಂಭಿಸಲು ಸಿದ್ಧತೆ ಮಾಡಿಕೊಳ್ಳುತ್ತೇವೆ ಎಂದು ತಿಳಿಸಿದರು.

ಸಂಸದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಮಾತನಾಡಿ, ವಿಮಾನ ನಿಲ್ದಾಣದ ಮೂಲಸೌಕರ್ಯವನ್ನು ಅಭಿವೃದ್ಧಿಪಡಿಸುವ ಮತ್ತು ದೇಶದ ಎಲ್ಲ ಪ್ರದೇಶಗಳಿಗೆ ವಾಯು ಯಾನ ಸಂಪರ್ಕವನ್ನು ಸುಧಾರಿಸುವ ದೃಷ್ಟಿಕೋನವನ್ನು ಹೊಂದಿರುವ ಪ್ರಧಾನಿ ನರೇಂದ್ರ ಮೋದಿ ಹಾಗೂ ನಾಗರಿಕ ವಿಮಾನ ಯಾನ ಸಚಿವ ರಾಮ್ ಮೋಹನ್ ನಾಯ್ಡು ಅವರಿಗೆ ಧನ್ಯವಾದ ಹೇಳಿದರು.

ಮೈಸೂರು ಪ್ರವಾಸಿ ತಾಣವಾಗಿರುವುದರಿಂದ ವರ್ಷ ಪೂರ್ತಿ ಇಲ್ಲಿಗೆ ರಾಜ್ಯ ಮತ್ತು ಹೊರ ರಾಜ್ಯಗಳಿಂದ ಮೈಸೂರಿನ ದೇವಾಲಯಗಳು ಹಾಗೂ ಇನ್ನಿತರ ಧಾರ್ಮಿಕ ಕೇಂದ್ರಗಳ ವೀಕ್ಷಣೆಗೆ ಆಗಮಿಸುತ್ತಾರೆ. ಇಲ್ಲಿನ ಸಾಂಸ್ಕೃತಿಕ ಪರಂಪರೆ, ಇತಿಹಾಸ, ಯೋಗ, ಆರೋಗ್ಯ ಕೇಂದ್ರ, ಅರಮನೆ, ದಸರಾ ಮಹೋತ್ಸವದಂತಹ ಉತ್ಸವಗಳು ನಡೆಯುವುದು, ಬಂಡೀಪುರ, ನಾಗರಹೊಳೆ ಅಭಯಾರಣ್ಯಗಳಿವೆ. ಕೈಗಾರಿಕೋದ್ಯಮ, ಆಮದು, ರಫ್ತು ಚಟುವಟಿಕೆಯೂ ನಡೆಯುತ್ತಿದೆ. ಈ ಎಲ್ಲ ಕ್ಷೇತ್ರಗಳಿಗೆ ಉತ್ತೇಜನ ನೀಡುವ ದೃಷ್ಟಿಯಿಂದ ಈ ನೂತನ ಸೇವೆ ಸಹಾಯಕವಾಗಲಿದೆ ಎಂದರು.

ಏರ್ ಕೇರಳ ಉಪಾಧ್ಯಕ್ಷ ಅಯೂಬ್ ಕಲ್ಲಡ, ಸಿಇಒ ಹರೀಶ್ ಕುಟ್ಟಿ, ಗ್ರೌಂಡ್ ಆಪರೇಷ ಮುಖ್ಯಸ್ಥ ಶಾಮನ್ ಪಟ್ಟವಾತುಕಲ, ಮೈಸೂರು ವಿಮಾನ ನಿಲ್ದಾಣದ ನಿರ್ದೇಶಕ ಜೆ.ಆರ್.ಅನೂಪ್, ಹೋಟೆಲ್ ಮಾಲೀಕರ ಸಂಘದ ಅಧ್ಯಕ್ಷ ಸಿ.ನಾರಾಯಣಗೌಡ, ಕೈಗಾರಿಕೆ ಸಂಘಗಳ ಒಕ್ಕೂಟದ ಅಧ್ಯಕ್ಷ ಬಿ.ಎಸ್.ಪ್ರಶಾಂತ್, ಸ್ಕಾಲ್ ಅಧ್ಯಕ್ಷ ಜಯಕುಮಾರ್ ಹಾಗೂ ಇನ್ನಿತರ ಸಂಘ ಸಂಸ್ಥೆಗಳ ಪ್ರತಿನಿಽಗಳು ಸಭೆಯಲ್ಲಿ ಭಾಗವಹಿಸಿದ್ದರು.

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ-2026: ಗಜಪಡೆ ಆಯ್ಕೆ ಪ್ರಕ್ರಿಯೆಗೆ ಚಾಲನೆ

ಮಡಿಕೇರಿ: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಗಜಪಡೆಗೆ ಆಯ್ಕೆ ಪ್ರಕ್ರಿಯೆಗೆ ಅಧಿಕೃತ ಚಾಲನೆ ಸಿಕ್ಕಿದೆ. ಇದರ ಭಾಗವಾಗಿ…

14 mins ago

ವಯನಾಡಿನಲ್ಲಿ ಮೇಘಸ್ಫೋಟ: ಇಬ್ಬರು ಕಾರ್ಮಿಕರು ಜೀವಂತ ಸಮಾಧಿ: 30 ಮಂದಿ ನಾಪತ್ತೆ

ತಿರುವನಂತಪುರಂ: ವಯನಾಡಿನಲ್ಲಿ ಮತ್ತೊಂದು ದುರಂತ ಸಂಭವಿಸಿದ್ದು, ಮೆಪ್ಪಾಡಿಯಲ್ಲಿ ಭಾರೀ ಮಳೆಯಿಂದಾಗಿ ಭೂಕುಸಿತ ಉಂಟಾಗಿದೆ. ವಯನಾಡಿನ ಸುರಂಗ ನಿರ್ಮಾಣ ಪ್ರದೇಶದ ಮೀನಾಕ್ಷಿ…

32 mins ago

ಬ್ರಿಡ್ಜ್‌ ಮ್ಯಾನ್‌ ಖ್ಯಾತಿಯ ಪದ್ಮಶ್ರೀ ಡಾ.ಗಿರೀಶ್‌ ಭಾರದ್ವಾಜ್‌ ನಿಧನ

ಮಂಗಳೂರು: ತೂಗುಸೇತುವೆಗಳ ಸರದಾರ, ಸುಳ್ಯದ ವಿಶ್ವೇಶ್ವರಯ್ಯ ಎಂದೇ ಖ್ಯಾತರಾಗಿದ್ದ ಪದ್ಮಶ್ರೀ ಪುರಸ್ಕೃತ ಎಂಜಿನಿಯರ್‌ ಡಾ.ಗಿರೀಶ್‌ ಭಾರದ್ವಾಜ್‌ ಅವರು ಇಂದು ನಿಧನರಾಗಿದ್ದಾರೆ.…

1 hour ago

ಕೊಡಗು: ಕಾಫಿ ತೋಟದಲ್ಲಿ ಕಾಡಾನೆ ಮೃತದೇಹ ಪತ್ತೆ

ಕೊಡಗು: ಕಾಫಿ ತೋಟದಲ್ಲಿ ಕಾಡಾನೆ ಮೃತದೇಹ ಪತ್ತೆಯಾಗಿದೆ. ಕುಂಜಿಲ-ಕಕ್ಕಬೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಾಲಡಿ ಗ್ರಾಮದಲ್ಲಿ ಘಟನೆ ನಡೆದಿದ್ದು, ಪರದಂಡ…

3 hours ago

ಪೊಲೀಸ್ ಠಾಣೆ ಕೂಗಳತೆ ದೂರದಲ್ಲಿ ಯುವಕನ ಭೀಕರ ಕೊಲೆ

ಶ್ರೀರಂಗಪಟ್ಟಣ: ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆ.ಆರ್.ಎಸ್ ಗ್ರಾಮದಲ್ಲಿ ತಡರಾತ್ರಿ ಭೀಕರ ಕೊಲೆ ನಡೆದಿದ್ದು, ಯುವಕನೊಬ್ಬನನ್ನು ದುಷ್ಕರ್ಮಿಗಳು ಅತ್ಯಂತ ಬರ್ಬರವಾಗಿ…

4 hours ago

ಮಲ್ಲಯ್ಯನಪುರ ಗುಡ್ಡದಲ್ಲಿ ಥೋರಿಯಂ ಖನಿಜ ನಿಕ್ಷೇಪ ಪತ್ತೆ

ಗುಂಡ್ಲುಪೇಟೆ: ಪಟ್ಟಣ ಮತ್ತು ಮಲ್ಲಯ್ಯನಪುರ ನಡುವಿನ ಅನ್ಗಲ್ ಗುಡ್ಡದ ತಪ್ಪಲಿನ ಪ್ರದೇಶದಲ್ಲಿ ಅಪರೂಪದ ಥೋರಿಯಂ ನಿಕ್ಷೇಪ ಪತ್ತೆಯಾಗಿದೆ. ಹಿಂದಿನ ವರ್ಷ…

9 hours ago