ಮೈಸೂರು: ಮೈಸೂರು-ಕೇರಳ ನಡುವೆ ಪ್ರವಾಸೋದ್ಯಮ ಉತ್ತೇಜಿಸುವ ಉದ್ದೇಶದಿಂದ ಏರ್ ಕೇರಳ ಸಂಸ್ಥೆ ವಿಮಾನಯಾನ ಸೇವೆಯನ್ನು ಶೀಘ್ರವೆ ಆರಂಭಿಸಲಿದೆ.
ಶುಕ್ರವಾರ ಮಂಡಕಳ್ಳಿ ವಿಮಾನ ನಿಲ್ದಾಣದಲ್ಲಿ ಏರ್ ಕೇರಳ ತಂಡ ಮತ್ತು ವಿಮಾನ ನಿಲ್ದಾಣ ಪ್ರಾಧಿಕಾರದ ಅಧಿಕಾರಿಗಳು, ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ಶಾಸಕ ಜಿ.ಟಿ.ದೇವೇಗೌಡ ಅವರ ಸಮ್ಮುಖದಲ್ಲಿ ನಡೆದ ಸಭೆಯಲ್ಲಿ ಮುಂಬರುವ ಮೇ ಅಥವಾ ಜೂನ್ ತಿಂಗಳಲ್ಲಿ ವಿಮಾನ ಯಾನ ಸೇವೆ ಆರಂಭಿಸುವ ತೀರ್ಮಾನಕ್ಕೆ ಬರಲಾಯಿತು.
ಏರ್ ಕೇರಳ ಅಧ್ಯಕ್ಷ ಅಫಿ ಅಹಮ್ಮದ್ ಮಾತನಾಡಿ, ಮೇ, ಜೂನ್ ತಿಂಗಳಲ್ಲಿ ಮೂರು ಹಾಗೂ ನಂತರದ ಹಂತದಲ್ಲಿ ಮೂರು ಏರ್ ಕ್ರಾ-ಗಳನ್ನು ಖರೀದಿಸಲಾಗುವುದು. ಕೇರಳದ ಯಾವ ನಿಲ್ದಾಣದದಿಂದ ಮೈಸೂರಿಗೆ ವಿಮಾನಯಾನ ಸೇವೆ ಆರಂಭಿಸಬೇಕು ಎಂಬುದನ್ನು ಇನ್ನೂ ನಿರ್ಧರಿಸಿಲ್ಲ.
ಮೈಸೂರು ವಿಮಾನ ನಿಲ್ದಾಣ ಪ್ರಾಧಿಕಾರದ ಅಧಿಕಾರಿಗಳು ಏರ್ ಕೇರಳ ಸಂಸ್ಥೆಯ ವಿಮಾನಯಾನ ಸೇವೆಯ ಆರಂಭಕ್ಕೆ ಅಗತ್ಯ ಸಹಕಾರ ನೀಡುವ ಭರವಸೆ ನೀಡಿದ್ದಾರೆ. ಹೀಗಾಗಿ ಸೇವೆ ಆರಂಭಿಸಲು ಸಿದ್ಧತೆ ಮಾಡಿಕೊಳ್ಳುತ್ತೇವೆ ಎಂದು ತಿಳಿಸಿದರು.
ಸಂಸದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಮಾತನಾಡಿ, ವಿಮಾನ ನಿಲ್ದಾಣದ ಮೂಲಸೌಕರ್ಯವನ್ನು ಅಭಿವೃದ್ಧಿಪಡಿಸುವ ಮತ್ತು ದೇಶದ ಎಲ್ಲ ಪ್ರದೇಶಗಳಿಗೆ ವಾಯು ಯಾನ ಸಂಪರ್ಕವನ್ನು ಸುಧಾರಿಸುವ ದೃಷ್ಟಿಕೋನವನ್ನು ಹೊಂದಿರುವ ಪ್ರಧಾನಿ ನರೇಂದ್ರ ಮೋದಿ ಹಾಗೂ ನಾಗರಿಕ ವಿಮಾನ ಯಾನ ಸಚಿವ ರಾಮ್ ಮೋಹನ್ ನಾಯ್ಡು ಅವರಿಗೆ ಧನ್ಯವಾದ ಹೇಳಿದರು.
ಮೈಸೂರು ಪ್ರವಾಸಿ ತಾಣವಾಗಿರುವುದರಿಂದ ವರ್ಷ ಪೂರ್ತಿ ಇಲ್ಲಿಗೆ ರಾಜ್ಯ ಮತ್ತು ಹೊರ ರಾಜ್ಯಗಳಿಂದ ಮೈಸೂರಿನ ದೇವಾಲಯಗಳು ಹಾಗೂ ಇನ್ನಿತರ ಧಾರ್ಮಿಕ ಕೇಂದ್ರಗಳ ವೀಕ್ಷಣೆಗೆ ಆಗಮಿಸುತ್ತಾರೆ. ಇಲ್ಲಿನ ಸಾಂಸ್ಕೃತಿಕ ಪರಂಪರೆ, ಇತಿಹಾಸ, ಯೋಗ, ಆರೋಗ್ಯ ಕೇಂದ್ರ, ಅರಮನೆ, ದಸರಾ ಮಹೋತ್ಸವದಂತಹ ಉತ್ಸವಗಳು ನಡೆಯುವುದು, ಬಂಡೀಪುರ, ನಾಗರಹೊಳೆ ಅಭಯಾರಣ್ಯಗಳಿವೆ. ಕೈಗಾರಿಕೋದ್ಯಮ, ಆಮದು, ರಫ್ತು ಚಟುವಟಿಕೆಯೂ ನಡೆಯುತ್ತಿದೆ. ಈ ಎಲ್ಲ ಕ್ಷೇತ್ರಗಳಿಗೆ ಉತ್ತೇಜನ ನೀಡುವ ದೃಷ್ಟಿಯಿಂದ ಈ ನೂತನ ಸೇವೆ ಸಹಾಯಕವಾಗಲಿದೆ ಎಂದರು.
ಏರ್ ಕೇರಳ ಉಪಾಧ್ಯಕ್ಷ ಅಯೂಬ್ ಕಲ್ಲಡ, ಸಿಇಒ ಹರೀಶ್ ಕುಟ್ಟಿ, ಗ್ರೌಂಡ್ ಆಪರೇಷ ಮುಖ್ಯಸ್ಥ ಶಾಮನ್ ಪಟ್ಟವಾತುಕಲ, ಮೈಸೂರು ವಿಮಾನ ನಿಲ್ದಾಣದ ನಿರ್ದೇಶಕ ಜೆ.ಆರ್.ಅನೂಪ್, ಹೋಟೆಲ್ ಮಾಲೀಕರ ಸಂಘದ ಅಧ್ಯಕ್ಷ ಸಿ.ನಾರಾಯಣಗೌಡ, ಕೈಗಾರಿಕೆ ಸಂಘಗಳ ಒಕ್ಕೂಟದ ಅಧ್ಯಕ್ಷ ಬಿ.ಎಸ್.ಪ್ರಶಾಂತ್, ಸ್ಕಾಲ್ ಅಧ್ಯಕ್ಷ ಜಯಕುಮಾರ್ ಹಾಗೂ ಇನ್ನಿತರ ಸಂಘ ಸಂಸ್ಥೆಗಳ ಪ್ರತಿನಿಽಗಳು ಸಭೆಯಲ್ಲಿ ಭಾಗವಹಿಸಿದ್ದರು.
ಹೊಸದಿಲ್ಲಿ : ಸಾರ್ವಜನಿಕರ ಸಮ್ಮುಖದಲ್ಲಿ ಅಥವಾ ಸಾರ್ವಜನಿಕರ ವೀಕ್ಷಣೆಗೆ ಒಳಪಡುವ ಸ್ಥಳದಲ್ಲಿ ಜಾತಿ ನಿಂದನೆ ನಡೆದಿರುವುದು ಸಾಬೀತಾಗದಿದ್ದರೆ, ಅದನ್ನು ಪರಿಶಿಷ್ಟ…
ಬೆಂಗಳೂರು : ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣದಲ್ಲಿ ದುರುಪಯೋಗವಾಗಿದೆ ಎಂದು ಹೇಳಲಾಗಿದ್ದ 187 ಕೋಟಿ ರೂಪಾಯಿ…
ಹನೂರು : ಅರಣ್ಯ ಇಲಾಖೆ ಸಿಬ್ಬಂದಿ ಗುಂಡಿಗೆ ಮೂವರು ಬಲಿ ಪ್ರಕರಣಕ್ಕೆ ದಿನಕ್ಕೊಂದು ಟ್ವಿಸ್ಟ್ ಸಿಗುತ್ತಿದೆ. ದನ ಹುಡುಕಲು ಹೋಗಿದ್ದವರ…
ಬೆಂಗಳೂರು: ಬೆಂಗಳೂರು ದಕ್ಷಿಣದ ದೊಡ್ಡೇರಿಯಲ್ಲಿ ಬೃಹತ್ ನಕಲಿ ಔಷಧ ಜಾಲ ಪತ್ತೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸರ್ಕಾರ ಈ ಪ್ರಕರಣವನ್ನು…
ಸದ್ದಿಲ್ಲದೆ ಕೈಗೊಂಡ ತೀರ್ಮಾನಕ್ಕೆ ಬೆಚ್ಚಿದ ರಿಯಲ್ ಎಸ್ಟೇಟ್ ಉದ್ಯಮಿಗಳು; ಮೂರು ಪಕ್ಷಗಳಲ್ಲೂ ತಳಮಳ ಕೆ.ಬಿ.ರಮೇಶನಾಯಕ ಮೈಸೂರು : ಕಳೆದ ಎರಡು…
ಮೊದಲಬಾರಿಗೆ ರಾಷ್ಟ್ರರಾಜಧಾನಿಯಿಂದ ಹೊರಗೆ ಆಯೋಜನೆ 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭವು ಇದೇ ಮೊದಲ ಬಾರಿಗೆ ನವದೆಹಲಿಯಿಂದ…