ಮೈಸೂರು: ಮೈಸೂರು-ಕೇರಳ ನಡುವೆ ಪ್ರವಾಸೋದ್ಯಮ ಉತ್ತೇಜಿಸುವ ಉದ್ದೇಶದಿಂದ ಏರ್ ಕೇರಳ ಸಂಸ್ಥೆ ವಿಮಾನಯಾನ ಸೇವೆಯನ್ನು ಶೀಘ್ರವೆ ಆರಂಭಿಸಲಿದೆ.
ಶುಕ್ರವಾರ ಮಂಡಕಳ್ಳಿ ವಿಮಾನ ನಿಲ್ದಾಣದಲ್ಲಿ ಏರ್ ಕೇರಳ ತಂಡ ಮತ್ತು ವಿಮಾನ ನಿಲ್ದಾಣ ಪ್ರಾಧಿಕಾರದ ಅಧಿಕಾರಿಗಳು, ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ಶಾಸಕ ಜಿ.ಟಿ.ದೇವೇಗೌಡ ಅವರ ಸಮ್ಮುಖದಲ್ಲಿ ನಡೆದ ಸಭೆಯಲ್ಲಿ ಮುಂಬರುವ ಮೇ ಅಥವಾ ಜೂನ್ ತಿಂಗಳಲ್ಲಿ ವಿಮಾನ ಯಾನ ಸೇವೆ ಆರಂಭಿಸುವ ತೀರ್ಮಾನಕ್ಕೆ ಬರಲಾಯಿತು.
ಏರ್ ಕೇರಳ ಅಧ್ಯಕ್ಷ ಅಫಿ ಅಹಮ್ಮದ್ ಮಾತನಾಡಿ, ಮೇ, ಜೂನ್ ತಿಂಗಳಲ್ಲಿ ಮೂರು ಹಾಗೂ ನಂತರದ ಹಂತದಲ್ಲಿ ಮೂರು ಏರ್ ಕ್ರಾ-ಗಳನ್ನು ಖರೀದಿಸಲಾಗುವುದು. ಕೇರಳದ ಯಾವ ನಿಲ್ದಾಣದದಿಂದ ಮೈಸೂರಿಗೆ ವಿಮಾನಯಾನ ಸೇವೆ ಆರಂಭಿಸಬೇಕು ಎಂಬುದನ್ನು ಇನ್ನೂ ನಿರ್ಧರಿಸಿಲ್ಲ.
ಮೈಸೂರು ವಿಮಾನ ನಿಲ್ದಾಣ ಪ್ರಾಧಿಕಾರದ ಅಧಿಕಾರಿಗಳು ಏರ್ ಕೇರಳ ಸಂಸ್ಥೆಯ ವಿಮಾನಯಾನ ಸೇವೆಯ ಆರಂಭಕ್ಕೆ ಅಗತ್ಯ ಸಹಕಾರ ನೀಡುವ ಭರವಸೆ ನೀಡಿದ್ದಾರೆ. ಹೀಗಾಗಿ ಸೇವೆ ಆರಂಭಿಸಲು ಸಿದ್ಧತೆ ಮಾಡಿಕೊಳ್ಳುತ್ತೇವೆ ಎಂದು ತಿಳಿಸಿದರು.
ಸಂಸದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಮಾತನಾಡಿ, ವಿಮಾನ ನಿಲ್ದಾಣದ ಮೂಲಸೌಕರ್ಯವನ್ನು ಅಭಿವೃದ್ಧಿಪಡಿಸುವ ಮತ್ತು ದೇಶದ ಎಲ್ಲ ಪ್ರದೇಶಗಳಿಗೆ ವಾಯು ಯಾನ ಸಂಪರ್ಕವನ್ನು ಸುಧಾರಿಸುವ ದೃಷ್ಟಿಕೋನವನ್ನು ಹೊಂದಿರುವ ಪ್ರಧಾನಿ ನರೇಂದ್ರ ಮೋದಿ ಹಾಗೂ ನಾಗರಿಕ ವಿಮಾನ ಯಾನ ಸಚಿವ ರಾಮ್ ಮೋಹನ್ ನಾಯ್ಡು ಅವರಿಗೆ ಧನ್ಯವಾದ ಹೇಳಿದರು.
ಮೈಸೂರು ಪ್ರವಾಸಿ ತಾಣವಾಗಿರುವುದರಿಂದ ವರ್ಷ ಪೂರ್ತಿ ಇಲ್ಲಿಗೆ ರಾಜ್ಯ ಮತ್ತು ಹೊರ ರಾಜ್ಯಗಳಿಂದ ಮೈಸೂರಿನ ದೇವಾಲಯಗಳು ಹಾಗೂ ಇನ್ನಿತರ ಧಾರ್ಮಿಕ ಕೇಂದ್ರಗಳ ವೀಕ್ಷಣೆಗೆ ಆಗಮಿಸುತ್ತಾರೆ. ಇಲ್ಲಿನ ಸಾಂಸ್ಕೃತಿಕ ಪರಂಪರೆ, ಇತಿಹಾಸ, ಯೋಗ, ಆರೋಗ್ಯ ಕೇಂದ್ರ, ಅರಮನೆ, ದಸರಾ ಮಹೋತ್ಸವದಂತಹ ಉತ್ಸವಗಳು ನಡೆಯುವುದು, ಬಂಡೀಪುರ, ನಾಗರಹೊಳೆ ಅಭಯಾರಣ್ಯಗಳಿವೆ. ಕೈಗಾರಿಕೋದ್ಯಮ, ಆಮದು, ರಫ್ತು ಚಟುವಟಿಕೆಯೂ ನಡೆಯುತ್ತಿದೆ. ಈ ಎಲ್ಲ ಕ್ಷೇತ್ರಗಳಿಗೆ ಉತ್ತೇಜನ ನೀಡುವ ದೃಷ್ಟಿಯಿಂದ ಈ ನೂತನ ಸೇವೆ ಸಹಾಯಕವಾಗಲಿದೆ ಎಂದರು.
ಏರ್ ಕೇರಳ ಉಪಾಧ್ಯಕ್ಷ ಅಯೂಬ್ ಕಲ್ಲಡ, ಸಿಇಒ ಹರೀಶ್ ಕುಟ್ಟಿ, ಗ್ರೌಂಡ್ ಆಪರೇಷ ಮುಖ್ಯಸ್ಥ ಶಾಮನ್ ಪಟ್ಟವಾತುಕಲ, ಮೈಸೂರು ವಿಮಾನ ನಿಲ್ದಾಣದ ನಿರ್ದೇಶಕ ಜೆ.ಆರ್.ಅನೂಪ್, ಹೋಟೆಲ್ ಮಾಲೀಕರ ಸಂಘದ ಅಧ್ಯಕ್ಷ ಸಿ.ನಾರಾಯಣಗೌಡ, ಕೈಗಾರಿಕೆ ಸಂಘಗಳ ಒಕ್ಕೂಟದ ಅಧ್ಯಕ್ಷ ಬಿ.ಎಸ್.ಪ್ರಶಾಂತ್, ಸ್ಕಾಲ್ ಅಧ್ಯಕ್ಷ ಜಯಕುಮಾರ್ ಹಾಗೂ ಇನ್ನಿತರ ಸಂಘ ಸಂಸ್ಥೆಗಳ ಪ್ರತಿನಿಽಗಳು ಸಭೆಯಲ್ಲಿ ಭಾಗವಹಿಸಿದ್ದರು.
ಮನುಷ್ಯರಿಗೆ ಅಭಿವೃದ್ಧಿ, ಆನೆಗಳಿಗೆ ಅತಿಕ್ರಮಣ ದೇವನೂರು, ವನ್ಯಜೀವಿ ಛಾಯಾಗ್ರಾಹಕ ಮೇ ೧೮ರಂದು ಕರ್ನಾಟಕದ ದುಬಾರೆ ಶಿಬಿರದಲ್ಲಿ ನಡೆದ ಆನೆಗಳ ಕಾಳಗ;…
ಕೆ.ವಿ.ಸ್ಲ್ಯಾನ್ಲಿ ಇದು ಎಂಬತ್ತರ ದಶಕದ ಕಥೆಯಲ್ಲದ ಜೀವನಗಾಥೆ. ದ್ವೀಪ ರಾಷ್ಟ್ರಸಿಂಹಳ ಮೂಲದ ಕುಟುಂಬವೊಂದು ಸಾಂಸ್ಕೃತಿಕ ಕರ್ನಾಟಕದಲ್ಲಿ ವಿಲೀನವಾಗಿ ಜೀವನ ನಡೆಸುತ್ತಿತ್ತು.…
ದೆಹಲಿ : ಮದುವೆಯಾದ ಯುವತಿಯರು ಸಾವನ್ನಪ್ಪುತ್ತಿರುವ ಪ್ರಕರಣಗಳು ಹೆಚ್ಚುತ್ತಿರುವ ಬೆನ್ನಲ್ಲೇ ಬಾಲಿವುಡ್ ನಟಿ ಹಾಗೂ ಸಂಸದೆ ಕಂಗನಾ ರಣಾವತ್ ಯುವತಿಯರಿಗೆ…
ಹೊಸದಿಲ್ಲಿ : ಆಗಸ್ಟ್ ೩೧ರೊಳಗೆ ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ವ್ಯಾಪ್ತಿಯ ಐದು ನಗರಪಾಲಿಕೆಗಳಿಗೆ ಚುನಾವಣೆ ನಡೆಸುವಂತೆ ಸರ್ವೋಚ್ಚ ನ್ಯಾಯಾಲಯ…
ಸಫಾರಿ ಕ್ಯಾಂಪರ್ ಗಳಿಗೆ ಕಬ್ಬಿಣದ ಸರಳು, ಒಡೆಯದ ಗಾಜು ಅಳವಡಿಸಲು ಖಂಡ್ರೆ ಸೂಚನೆ ಬೆಂಗಳೂರು : ರಾಜ್ಯದ ಐದು ಹುಲಿ…