ಮೈಸೂರು

ಕೆಲಸದ ಅವಧಿ ಹೆಚ್ಚಳಕ್ಕೆ ಎಐಯುಟಿಯುಸಿ ವಿರೋಧ

ಮೈಸೂರು: ಕಾರ್ಖಾನೆಗಳ ಕಾಯ್ದೆಗೆ ತಿದ್ದುಪಡಿ ತರುವ ಮೂಲಕ ಕಾರ್ಮಿಕರ ಕೆಲಸದ ಅವಧಿಯನ್ನು ಹೆಚ್ಚಳ ಮಾಡಿರುವ ರಾಜ್ಯ ಸರ್ಕಾರದ ಕ್ರಮ ಖಂಡಿಸಿ ‘ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ’ (AIUTUC) ಸದಸ್ಯರು ಗುರುವಾರ ಪ್ರತಿಭಟನೆ ನಡೆಸಿದರು.ಜಿಲ್ಲಾಧಿಕಾರಿ ಕಚೇರಿ ಸಮೀಪ ಜಮಾಯಿಸಿದ ಪ್ರತಿಭಟನಕಾರರು, ‘ಕಾಯ್ದೆ ತಿದ್ದುಪಡಿಯನ್ನು ಕೈ ಬಿಡಬೇಕು’ ಎಂದು ಆಗ್ರಹಿಸಿದರು.
ಎಐಯುಟಿಯುಸಿ ರಾಜ್ಯ ಸಮಿತಿ ಸದಸ್ಯೆ ಉಮಾದೇವಿ ಮಾತನಾಡಿ, ‘ದುಡಿಮೆ ಅವಧಿಯನ್ನು 9 ಗಂಟೆಯಿಂದ 12 ಗಂಟೆಗೆ ಏರಿಸಲಾಗಿದೆ. ರಾತ್ರಿ ವೇಳೆ ಮಹಿಳಾ ಕಾರ್ಮಿಕರಿಗೆ ಇದ್ದ ನಿರ್ಬಂಧ ತೆಗೆದುಹಾಕಲಾಗಿದೆ’ ಎಂದು ಆಕ್ರೋಶ ವ್ಯಕ್ತಪಡಿಸಿದರು.

‘12 ಗಂಟೆ ಕೆಲಸ ಮಾಡಿಸಿದರೆ ಕಾರ್ಮಿಕನ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರುತ್ತದೆ. ಹೆಚ್ಚುವರಿ ಕೆಲಸಕ್ಕೂ ಒ.ಟಿ ಭತ್ಯೆ ಕೂಡ ಇಲ್ಲ. ದಿನಕ್ಕೆ 7 ಗಂಟೆಯಂತೆ ವಾರಕ್ಕೆ 5 ದಿನ ಕೆಲಸ ಅವಧಿ ನಿಗದಿಗೊಳಿಸಬೇಕು’ ಎಂದು ಆಗ್ರಹಿಸಿದರು.

‘ದುಡಿಯುವ ಸ್ಥಳಗಳಲ್ಲಿ ಮಹಿಳಾ ಕಾರ್ಮಿಕರ ಮೇಲೆ ದೌರ್ಜನ್ಯ ನಡೆಯುತ್ತಿದೆ. ರಾತ್ರಿ ವೇಳೆ ಕೆಲಸದ ನಿರ್ಬಂಧ ತೆಗೆದುಹಾಕಿದರೆ ಶೋಷಣೆ ಇನ್ನಷ್ಟು ಹೆಚ್ಚಾಗಲಿದೆ. ಮಕ್ಕಳ ಲಾಲನೆ–ಪಾಲನೆ ಮಾಡುವ ಜವಾಬ್ದಾರಿ ನಿರ್ವಹಿಸುತ್ತಿರುವ ಮಹಿಳೆಯ ಮೇಲೆ ಹೆಚ್ಚುವರಿ ಹೊರೆ ಬೀಳಲಿದೆ. ಆರೋಗ್ಯದ ಮೇಲೂ ಪರಿಣಾಮ ಬೀರುವುದರಿಂದ ತಿದ್ದುಪಡಿ ಕೈಬಿಡಬೇಕು’ ಎಂದರು.

ಎಐಟಿಯುಸಿ ಮುಖಂಡ ‌ಎನ್‌.ಕೆ.ದೇವದಾಸ್‌ ಮಾತನಾಡಿ, ‘ಅಂತರರಾಷ್ಟ್ರೀಯ ಕಾರ್ಮಿಕ ಸಂಸ್ಥೆಯ 8 ಗಂಟೆ ಕೆಲಸ, 8 ಗಂಟೆ ವಿರಾಮ, 8 ಗಂಟೆ ಮನರಂಜನೆ ಆಶಯಕ್ಕೆ ಹೊಸ ನೀತಿಯು ವಿರುದ್ಧವಾಗಿದೆ. ಮಾನವ ವಿರೋಧಿ ಕಾಯ್ದೆ ವಾಪಸ್‌ ಪಡೆಯಬೇಕು’ ಎಂದು ಒತ್ತಾಯಿಸಿದರು.

‘ಯಾವುದೇ ಕಾಯ್ದೆ ತಿದ್ದುಪಡಿ ಮಾಡುವಾಗಲೂ ತಜ್ಞರ ಸಮಿತಿ ರಚಿಸಿ ಸಲಹೆ ಪಡೆಯಬೇಕು. ಕಾರ್ಮಿಕರಿಗೆ ಸಂಬಂಧಿಸಿದ ವಿಚಾರವಾಗಿದ್ದರೂ ಮುಖಂಡರ ಅಭಿಪ್ರಾಯ ಪಡೆಯದೇ ಏಕಾಏಕಿ ತಿದ್ದುಪಡಿ ಮಾಡುವ ಮೂಲಕ ಪ್ರಜಾಸತ್ತಾತ್ಮಕ ನೀತಿಗಳಿಗೆ ವಿರುದ್ಧವಾಗಿ ಸರ್ಕಾರ ನಡೆದುಕೊಂಡಿದೆ. ಬಂಡವಾಳಶಾಹಿಗಳ ಪರವಾಗಿ ಕೆಲಸ ಮಾಡಿದೆ’ ಎಂದು ಕಿಡಿಕಾರಿದರು.

ವಿವಿಧ ಸಂಘಟನೆಗಳ ಮುಖಂಡರಾದ ಬಾಲಾಜಿರಾವ್, ಎಚ್‌.ಆರ್‌.ಶೇಷಾದ್ರಿ, ಅನಿಲ್‌ಕುಮಾರ್‌ ನಾ.ದಿವಾಕರ್, ಜಯರಾಮ್‌, ಜಗನ್ನಾಥ್‌, ಜವರಯ್ಯ, ಅನಿಲ್‌ಕುಮಾರ್, ಮೆಹಬೂಬ್‌, ಲೋಕೇಶ್‌, ರಾಜು, ವೆಂಕಟೇಶ್ ಇದ್ದರು.

lokesh

Recent Posts

ರಾಷ್ಟ್ರಗೀತೆಗೂ ಮುನ್ನ ‘ವಂದೇ ಮಾತರಂ’ ಕಡ್ಡಾಯ ; ವಂದೇ ಮಾತರಂಗೂ ಶಿಷ್ಟಾಚಾರ ಗೌರವ!

ಹೊಸದಿಲ್ಲಿ : ‘ರಾಷ್ಟ್ರಗೀತೆ’ಗೂ ಮುನ್ನ ‘ವಂದೇ ಮಾತರಂ’ ಹಾಡುವುದನ್ನು ಕೇಂದ್ರ ಸರ್ಕಾರ ಕಡ್ಡಾಯ ಮಾಡಿದ್ದು, ಕಾಂಗ್ರೆಸ್ ಕೈಬಿಟ್ಟಿದ್ದ ಚರಣಗಳ ಮರುಸೇರ್ಪಡೆಗೊಳಿಸಿದೆ.…

29 mins ago

ವಿದ್ಯಾರ್ಥಿಗಳು ಹೊಸ ಹೊಸ ವಿಷಯಗಳ ಕಡೆ ಗಮನಹರಿಸಿ : ಕುಲಪತಿ ಲೋಕನಾಥ್‌ ಸಲಹೆ

ಮೈಸೂರು : ಇಂದಿನ ಯುವಜನತೆ ಪುಸ್ತಕಗಳಿಗೆ ಸೀಮಿತವಾಗದೆ, ಮಹಾತ್ಮರ ಚಿಂತನೆಗಳಿಂದ ಪ್ರೇರಣೆ ಪಡೆದು ಆತ್ಮಸ್ಥೈರ್ಯದಿಂದ ಬದುಕು ಕಟ್ಟಿಕೊಳ್ಳಬೇಕು ಎಂದು ಮೈಸೂರು…

41 mins ago

ಸೈಬರ್‌ ವಂಚನೆ ಕೇವಲ ಆರ್ಥಿಕ ಅಪರಾಧವಲ್ಲ. ರಾಷ್ಟ್ರೀಯ ಭದ್ರತೆಗೆ ಸವಾಲು: ಅಮಿತ್‌ ಶಾ

ನವದೆಹಲಿ: ಭಾರತದಲ್ಲಿ ವೇಗವಾಗಿ ಬೆಳೆಯುತ್ತಿರುವ ಸೈಬರ್‌ ಅಪರಾಧಗಳ ವಿರುದ್ಧ ಕೇಂದ್ರ ಸರ್ಕಾರ ಸಮರ ಸಾರಿದೆ. ಸೈಬರ್‌ ಭದ್ರತೆಯು ಈಗ ಕೇವಲ…

2 hours ago

ಬೆಂಗಳೂರಿನಲ್ಲಿ ಭೀಕರ ಅಪಘಾತ: ಶಾಲಾ ಬಸ್‌ ಹರಿದು ಇಬ್ಬರು ಪುಟ್ಟ ಮಕ್ಕಳ ದಾರುಣ ಸಾವು

ಬೆಂಗಳೂರು: ಸಿಲಿಕಾನ್‌ ಸಿಟಿಯಲ್ಲಿ ಶಾಲಾ ಬಸ್ಸೊಂದು ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮಕ್ಕಳು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.…

2 hours ago

ಮಲೆಮಹದೇಶ್ವರ ಬೆಟ್ಟಕ್ಕೆ ಲಕ್ಷಾಂತರ ಭಕ್ತರಿಂದ ಪಾದಯಾತ್ರೆ: ಪೊಲೀಸರಿಂದ ಬ್ಯಾರಿಕೇಡ್‌ ಹಾಕಿ ಜಾಗೃತಿ

ಮಹಾದೇಶ್‌ ಎಂ ಗೌಡ, ಹನೂರು ತಾಲ್ಲೂಕು ವರದಿಗಾರರು ಹನೂರು: ಶ್ರೀ ಕ್ಷೇತ್ರ ಮಲೆಮಾದೇಶ್ವರ ಬೆಟ್ಟಕ್ಕೆ ಲಕ್ಷಾಂತರ ಸಂಖ್ಯೆಯಲ್ಲಿ ಭಕ್ತಾದಿಗಳು ಪಾದಯಾತ್ರೆಯ…

2 hours ago

ಶಾಸಕರು ಯಾವಾಗ ಬೇಕಾದರೂ ಪ್ರವಾಸಕ್ಕೆ ಹೋಗಬಹುದು: ಸಚಿವ ದಿನೇಶ್‌ ಗುಂಡೂರಾವ್‌

ಬೆಂಗಳೂರು: ಶಾಸಕರ ವಿದೇಶ ಪ್ರವಾಸದ ಬಗ್ಗೆ ಮಾಹಿತಿ ಇಲ್ಲ. ಆದರೆ ಶಾಸಕರು ಯಾವಾಗ ಬೇಕಾದರೂ ಪ್ರವಾಸಕ್ಕೆ ಹೋಗಬಹುದು ಎಂದು ಆರೋಗ್ಯ…

3 hours ago